ಹರಳು ರೂಪದ ಯೂರಿಯಾ ಗೊಬ್ಬರ ಬೇಡಿಕೆ ತಗ್ಗಿಸಲು ‘ನ್ಯಾನೋ ಯೂರಿಯಾ’ ಬಳಕೆಗೆ ಮುಂದಾದ ರೈತರು

Date:

ರಾಜ್ಯದಲ್ಲಿ ಹರಳು ರೂಪದ ಯೂರಿಯಾ ರಸಗೊಬ್ಬರದ ಅಭಾವ ಸೃಷ್ಟಿಯಾದ ಬೆನ್ನಲ್ಲೇ ದ್ರವ ರೂಪದ ‘ನ್ಯಾನೋ ಯೂರಿಯಾ’ ಗೊಬ್ಬರ ಬಳಕೆಗೆ ರೈತರು ಮುಂದಾಗುತ್ತಿದ್ದಾರೆ.

ಯೂರಿಯಾ ರಸಗೊಬ್ಬರದ ಬೇಡಿಕೆ ತಗ್ಗಿಸುವ ಉದ್ದೇಶದಿಂದ ದ್ರವ ರೂಪದ ‘ನ್ಯಾನೋ ಯೂರಿಯಾ’ ಬಳಸುವಂತೆ ಕೃಷಿ ತಜ್ಞರು ರೈತರಿಗೆ ಸಲಹೆ ನೀಡುತ್ತಿದ್ದಾರೆ. ಹಾವೇರಿ ಜಿಲ್ಲೆಯ, ಸವಣೂರು ತಾಲೂಕಿನ ಕೆಲವು ರೈತರು ಯೂರಿಯಾ ಗೊಬ್ಬರದ ಬದಲಿಗೆ ‘ನ್ಯಾನೋ ಯೂರಿಯಾ’ದ ಬಳಕೆಗೆ ಮುಂದಾಗಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ 1 ಲಕ್ಷದ 93 ಸಾವಿರ ಹೆಕ್ಟೇರ್ ಗೋವಿನಜೋಳ ಬೆಳೆಯಲಾಗಿದೆ. ನಿರಂತರ ಮಳೆಯಿಂದ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿದ್ದರಿಂದ ಹರಳುರೂಪದ ಯೂರಿಯಾ ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದರು. ನಿರೀಕ್ಷಿತ ಪ್ರಮಾಣದಷ್ಟು ಯೂರಿಯಾ ಗೊಬ್ಬರದ ಲಭ್ಯತೆ ಇಲ್ಲದ ಕಾರಣ ಕೃಷಿ ಇಲಾಖೆಯ ಅಧಿಕಾರಿಗಳು ಪರ್ಯಾಯವಾಗಿ ‘ದ್ರವ ರೂಪದ ನ್ಯಾನೋ ಯೂರಿಯಾ’ ಗೊಬ್ಬರಕ್ಕೆ ಪ್ರೋತ್ಸಾಹ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷಿ ತಜ್ಞರ ಸಲಹೆ ಮೇರೆಗೆ ಸವಣೂರು ಭಾಗದ ರೈತರು ಯೂರಿಯಾ ಪರ್ಯಾಯವಾಗಿ ‘ನ್ಯಾನೋ ಡಿಎಪಿ’ ಹಾಗೂ ‘ನ್ಯಾನೋ ಯೂರಿಯಾ’ ಎಂಬ ದ್ರವ ರೂಪದ ಗೊಬ್ಬರದ ಮೊರೆ ಹೋಗಿದ್ದಾರೆ.

ಹಾವೇರಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ್ ಸುದ್ದಿಗಾರರೊಂದಿಗೆ ಮಾತನಾಡಿ, “ನ್ಯಾನೋ ಗೊಬ್ಬರವನ್ನು ಕಡಿಮೆ ಕೂಲಿಕಾರ್ಮಿಕರಿಂದ ಬಳಿಸಬಹುದು. ನೇರವಾಗಿ ಗಿಡಗಳ ಎಲೆಮೂಲಕ ನ್ಯಾನೋ ಯೂರಿಯಾ ಗಿಡಗಳಿಗೆ ತಲುಪುತ್ತದೆ. ಕಳೆಗಳಿಗೆ ತಲುಪದಂತೆ ನೋಡಿಕೊಳ್ಳಬಹುದು. ಭೂಮಿ ಸಹ ಫಲವತ್ತತೆಯಿಂದ ಇರುತ್ತೆ. ಸಾಗಾಣಿಕೆ, ಸಿಂಪಡಣೆ ಎರಡೂ ಸುಲಭ. ಮಾರುಕಟ್ಟೆಯಲ್ಲಿ ಹೆಚ್ಚು ನ್ಯಾನೋ ಯೂರಿಯಾ ಗೊಬ್ಬರ ಸಿಗುತ್ತಿದ್ದು, ರೈತರು ಹರಳು ಯೂರಿಯಾ ಗೊಬ್ಬರ ಬಿಟ್ಟು ನ್ಯಾನೋ ಯೂರಿಯಾದ ಕಡೆ ಗಮನ ಹರಿಸಿದರೆ ಯೂರಿಯಾದ ಕೊರತೆ ಸಮಸ್ಯೆಯಾಗುವುದಿಲ್ಲ” ಎನ್ನುತ್ತಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಹಜ್ ಯಾತ್ರಿಗಳಿಗೆ ಹಾವೇರಿಯಲ್ಲಿಯೇ ಲಸಿಕೆ ಹಾಕಿಸುವಂತೆ ಅಂಜುಮನ್ ಸಂಸ್ಥೆಯ ಸದಸ್ಯರ ಒತ್ತಾಯ

"ಹಾವೇರಿ ಜಿಲ್ಲೆಯಿಂದ 2026ರ ಸಾಲಿನ 169 ಹಜ್ ಯಾತ್ರಿಗಳು ತೆರಳುತ್ತಿದ್ದಾರೆ. ಯಾತ್ರಿಗಳಿಗೆ...

ಹಾವೇರಿ | ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಲದಕಟ್ಟಿ, ಹನುಮಾಪುರ, ದೇವರ ಹೊಸಪೇಟ್, ಹಾಗೂ...

ಹಾವೇರಿ | ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಮುಖ್ಯ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್.

"ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಮಹಿಳಾ ನ್ಯಾಯಾಧೀಶರು ಸಮಾಜದಲ್ಲಿ...

ಹಾವೇರಿ | ಒಳ ಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿ ಖಂಡಿಸಿ, ಮಾರ್ಚ್ 12ಕ್ಕೆ ಬೆಂಗಳೂರಲ್ಲಿ ಪ್ರತಿಭಟನೆ

"ಒಳ ಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿ ಮಾಡುವ ಕಾಂಗ್ರೆಸ್ ಸರ್ಕಾರದ ಮಹಾದ್ರೋಹವನ್ನು...