ಹಾವೇರಿ | 536ನೇ ಕನಕ ಜಯಂತಿ ಆಚರಣೆ

Date:

ಕನಕದಾಸರು ಸಮಾಜದಲ್ಲಿನ ಅನಿಷ್ಠ ಮೂಢನಂಬಿಕೆ ಹಾಗೂ ಅಜ್ಞಾನದ ವಿರುದ್ಧ ದಾಸಸಾಹಿತ್ಯದ ಮೂಲಕ ಜನರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆ ಕಾಲದಲ್ಲಿಯೇ ಮಾಡಿದ್ದರು. ಸಮಸಮಾಜದ ನಿರ್ಮಾಣದ ಅವರ ಕನಸನ್ನು ಡಾ.ಬಿ ಆರ್ ಅಂಬೇಡ್ಕರ್ ಅವರು ನಮಗೆಲ್ಲರಿಗೂ ಸಂವಿಧಾನ ನೀಡುವ ಮೂಲಕ ಸಾಕಾರಗೊಳಿಸುವ ಕೆಲಸ ಮಾಡಿದ್ದಾರೆ. ಕನಕದಾಸರ ವಿಚಾರಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ಲಿಡ್ಕರ್ ಮಾಜಿ ಉಪಾಧ್ಯಕ್ಷ ಡಿ ಎಸ್ ಮಾಳಗಿ ಹೇಳಿದರು.

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಾನವತಾವಾದಿ ಕನಕದಾಸರ 536ನೇ ಜಯಂತಿಯಲ್ಲಿ ಮಾತನಾಡಿದರು.

ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಮಾತನಾಡಿ, “ನಾವುಗಳು ಕುಲ-ಕುಲವೆಂದು ಹೊಡಿದಾಡಿದರೆ ಏನು ಫಲ? ಎಂದು ಜನರಿಗೆ ಸಾಹಿತ್ಯದ ಮೂಲಕ ಪ್ರಶ್ನೆ ಮಾಡುತ್ತಾ ಕನಕದಾಸರು ಸರಳ ಸಾಹಿತ್ಯದ ಮೂಲಕ ಸಮಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದಾರೆ. ಅವರ ತತ್ವ ಸಿದ್ದಾಂತ ಹಾಗೂ ವಿಚಾರಧಾರೆಗಳನ್ನು ನಾವು ಪಾಲಿಸುವುದು ಅಗತ್ಯವಾಗಿದೆ. ಮಾನವೀಯತೆಯಿಂದ ಸಮಾಜದಲ್ಲಿ ನಾವೆಲ್ಲರೂ ಬಾಳಬೇಕಾಗಿದೆ. ಕನಕರ ಜೀವನ ಸಂದೇಶ ನಮ್ಮೊಳಗೆ ಅಳವಡಿಸಿಕೊಳ್ಳೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕನಕದಾಸನಾದ ತಿಮ್ಮಪ್ಪ ನಾಯಕ: ಮುಖ್ಯ ಶಿಕ್ಷಕ ಖಾಜಿ

ಮಂಜುನಾಥ ಮಡಿವಾಳರ, ಅಲೆಮಾರಿ ಸಮಾಜದ ಜಿಲ್ಲಾಧ್ಯಕ್ಷ ವಿಭೂತಿ ಶೆಟ್ಟಿ, ಡಿಎಸ್‌ಎಸ್ ಮಂಜಪ್ಪ ಮರೋಳ, ಜಗದೀಶ ಡೊಳ್ಳೇಶ್ವರ, ಜಗದೀಶ ಹರಿಜನ, ಹನಮಂತಪ್ಪ ಸಿಡಿ, ಶಿವಲಿಂಗಪ್ಪ ನಿಂಗಪ್ಪನವರ, ಮಂಜಪ್ಪ ದೊಡ್ಡಮರೆಮ್ಮನವರ, ಮಹೇಶಪ್ಪ ಹರಿಜನ, ಮಂಜುನಾಥ ವೇಷಗಾರ, ಪ್ರಕಾಶ ಹರಿಜನ, ನಾಗರಾಜ ಬಾಲಣ್ಣನವರ, ಈರಪ್ಪ ಹರಿಜನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...