ಹಾವೇರಿ | ವಾರ್ಷಿಕ ಜಕಾತ್ ವಿತರಣಾ ಕಾರ್ಯಕ್ರಮ ಯಶಸ್ವಿ

Date:

ಇಸ್ಲಾಮಿಕ್ ಸಾಮಾಜಿಕ ಜವಾಬ್ದಾರಿಯ ಭಾವನೆಯಿಂದ ಪ್ರೇರಿತರಾಗಿ ರಾಣೇಬೆನ್ನೂರು ಪಟ್ಟಣದ ನಾಲ್ಕು ಪ್ರದೇಶಗಳಲ್ಲಿ ನೂರಾರು ಅರ್ಹ ಕುಟುಂಬಗಳಿಗೆ ಉಮ್ಮತ್ ವೆಲ್ಫೆರ್ಎಜ್ಯುಕೇಶನಲ್ ಆಂಡ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ವಾರ್ಷಿಕ ಜಕಾತ್ ವಿತರಣಾ ಕಾರ್ಯಕ್ರಮ ನಡೆಯಿತು.

“ಈ ವಿತರಣಾ ಕಾರ್ಯಕ್ರಮವನ್ನು ಪಾರದರ್ಶಕತೆ ಮತ್ತು ಘನತೆಯಿಂದ ಯೋಜಿಸಿ ಕಾರ್ಯ ರೂಪಕ್ಕೆ ತರಲಾಗಿದೆ. ಟ್ರಸ್ಟ್‌ನ ಸ್ವಯಂಸೇವಕರು ಮತ್ತು ಅಧಿಕಾರಿಗಳು ಜೊತೆಗೂಡಿ ಮೋಮಿನ್ ಗಲ್ಲಿ, ಗಂಜಿ ಗಲ್ಲಿ, ಖತೀಬ್ ಗಲ್ಲಿ ಹಾಗೂ ಇಸ್ಹಾಕ್ ಖಾನ್ ಗಲ್ಲಿಯಲ್ಲಿ ಮೊದಲೇ ಸಮೀಕ್ಷೆ ನಡೆಸಿ, ಅರ್ಹತೆ ಇರುವ ಕುಟುಂಬಗಳನ್ನು ಗುರುತಿಸಲಾದ್ದು, ಅವರಿಗೆ ಆರ್ಥಿಕ ನೆರವು ಹೊಂದಿರುವ ಜಕಾತ್ ಲಕೋಟೆಗಳನ್ನು ಪ್ರತಿ ಕುಟುಂಬಕ್ಕೆ ಗೌರವ ಮತ್ತು ಘನತೆಯಿಂದ ತಲುಪಿಸಲಾಯಿತು” ಎಂದು ಹೇಳಿದರು‌‌.

“ಈ ಕಾರ್ಯಕ್ರಮವನ್ನು ಸಾಧ್ಯಗೊಳಿಸಿದ ಎಲ್ಲ ದಾನಿಗಳಿಗೆ ಮತ್ತು ಶುಭ ಚಿಂತಕರಿಗೆ ಟ್ರಸ್ಟ್ ವತಿಯಿಂದ ಧನ್ಯವಾದಗಳನ್ನು ಸಲ್ಲಿಸುತ್ತೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಕಾತ್ ಕೇವಲ ಧಾರ್ಮಿಕ ಕರ್ತವ್ಯವಲ್ಲ, ಅದು ಸಾಮಾಜಿಕ ನ್ಯಾಯದ ಶಕ್ತಿಶಾಲಿ ಸಾಧನವಾಗಿದೆ. ನಾವು ನೀಡುವ ಪ್ರತಿ ಲಕೋಟೆಯಲ್ಲಿ ಕೇವಲ ಆರ್ಥಿಕ ಸಹಾಯವಲ್ಲ, ಸಮುದಾಯದ ಬೆಚ್ಚನೆಯ ಕಾಳಜಿಯೂ ಇದೆ” ಎಂದು ಟ್ರಸ್ಟ್ ಸದಸ್ಯರು ಹೇಳಿದರು.

“ಜೊತೆಗೆ ಶಿಕ್ಷಣ ವಿದ್ಯಾರ್ಥಿವೇತನ, ವೈದ್ಯಕೀಯ ನೆರವು ಮತ್ತು ವೃತ್ತಿ ತರಬೇತಿ ಕಾರ್ಯಕ್ರಮಗಳಿಗಾಗಿ ಸಮುದಾಯ ಮತ್ತು ದಾನಿಗಳು ತಮ್ಮ ಬೆಂಬಲ ಮುಂದುವರಿಸಬೇಕು” ಎಂದು ಟ್ರಸ್ಟ್ ಮನವಿ ಮಾಡಿದೆ.

ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷರು ಮುಷ್ತಾಕ್ ಅಹ್ಮದ್ ಸೈಕಲ್‌ಗರ, ಖಜಾಂಚಿ ಅನ್ಸಾರ್ ಖಾಜಿ, ಸಲಹೆಗಾರರು ಗೌಸ್ ಅಗಡಿ, ಸದಸ್ಯರು ಝಕೀರ್ ಹುಸೇನ್ ಚಿಕ್ಕೇರೂರ್, ಶಫೀ ಉಲ್ಲಾ ಯಲ್ಲಾಪುರ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...