ಹಾವೇರಿ | ಪಟಾಕಿ ದುರಂತ; ಮೃತರ ಕುಟುಂಬಕ್ಕೆ ಪರಿಹಾರ ನೀಡಿದ ಮಾಜಿ ಸಿಎಂ ಬೊಮ್ಮಾಯಿ

Date:

ಪಟಾಕಿಯಂತಹ ಸ್ಫೋಟಕ ವಸ್ತುಗಳ ಅವಘಡಗಳಲ್ಲಿ ಗಾಯಾಳುಗಳಿಗಿಂತ ಸಾವನ್ನಪ್ಪುವವರ ಸಂಖ್ಯೆ ಅಧಿಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ ತಾಲೂಕು ಆಲದಕಟ್ಟಿ ಗ್ರಾಮದಲ್ಲಿ ಪಟಾಕಿ ದುರಂತ ನಡೆದ ಗೋದಾಮಿಗೆ ಭೇಟಿ ನೀಡಿ ಘಟನೆಯಲ್ಲಿ ಸಾವನ್ನಪ್ಪಿದ ಕಾಟೇನಹಳ್ಳಿ ಗ್ರಾಮದ ಮೂವರು ಯುವಕರ ಕುಟುಂಬದ ಸದಸ್ಯರಿಗೆ ಬಿಜೆಪಿಯಿಂದ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಿದ ಬಳಿಕ ಮಾತನಾಡಿದರು.

“ಸ್ಪೋಟಕದಂತಹ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಸಿಗಬೇಕು ಮತ್ತು ಸಾವನ್ನಪ್ಪಿದವರ ಕುಟುಂಬಗಳಿಗೆ ಸರಿಯಾದ ಪರಿಹಾರ ಸಿಗಬೇಕು. ರಾಣೆಬೆನ್ನೂರು ಸೇರಿದಂತೆ ಆಲದಕಟ್ಟಿಯಲ್ಲಾದ ಪಟಾಕಿ ಅವಘಡಗಳಿಗೆ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗೋದಾಮಿನಲ್ಲಿ ಭಾರೀ ಪ್ರಮಾಣದಲ್ಲಿ ಪಟಾಕಿಯನ್ನು ನಿರ್ಭೀತಿಯಿಂದ ಪರವಾನಗಿ​ ಇಲ್ಲದೆ ದಾಸ್ತಾನು ಮಾಡಿದ್ದಾರೆ ಅಂದರೆ ಹೇಗೆ. ರಾಣೆಬೆನ್ನೂರು ಪ್ರಕರಣದಲ್ಲಿ ಸಾವನ್ನಪ್ಪಿದವರಿಗೆ ಸೂಕ್ತ ಪರಿಹಾರ ನೀಡುವುದರ ಜತೆಗೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದರು.

“ಹಾವೇರಿ ಜಿಲ್ಲೆಯಲ್ಲಿ ರೈತ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತಂತೆ ವಿಧಾನಸಭೆ ಅಧಿವೇಶನದಲ್ಲಿ ನಾನು ಹೇಳಿದಾಗ ಕೃಷಿ ಸಚಿವರು ಒಪ್ಪಲಿಲ್ಲ. ಈ ಕುರಿತಂತೆ ದಾಖಲಾತಿಗಳಿವೆ ಎಂದರೂ ಒಪ್ಪಲಿಲ್ಲ. ಈ ಕುರಿತಂತೆ ಸಚಿವ ಶಿವಾನಂದ ಪಾಟೀಲ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಈ ಸರ್ಕಾರ ರೈತ ವಿರೋಧಿ ಮತ್ತು ರೈತರನ್ನು ನಿರ್ಲಕ್ಷ್ಯ ಮಾಡಿದೆ ಎಂದು ಕಿಡಿಕಾರಿದರು.

“ರೈತ ಆತ್ಮಹತ್ಯೆ ಪ್ರಕರಣಗಳನ್ನು ಸರ್ಕಾರ ಈಗ ಒಪ್ಪುತ್ತಿದೆ. ಹಿಂದೆ ಎಫ್​ಎಸ್​ಎಲ್ ರಿಪೋರ್ಟ್ ಬರಲು ತಡವಾಗುತ್ತಿದ್ದು, ಈಗ 15 ದಿನದಲ್ಲಿ ರಿಪೋರ್ಟ್ ಬರುತ್ತಿದೆ. ಅಧಿಕಾರಿಗಳು ರೈತ ಆತ್ಮಹತ್ಯೆಯಾದಾಗ ಕೇವಲ ಬ್ಯಾಂಕಿನಲ್ಲಿ ಸಾಲ ಮಾಡಿರುವುದನ್ನು ಮಾತ್ರ ಪರಿಗಣಿಸುತ್ತಾರೆ. ಕೆಲ ರೈತರಿಗೆ ಬ್ಯಾಂಕ್​ ಸಹ ಸಾಲ ನೀಡಿರುವುದಿಲ್ಲ. ಖಾಸಗಿಯಾಗಿ ಮೀಟರ್ ಬಡ್ಡಿಯಲ್ಲಿ ರೈತರು ಸಾಲ ಮಾಡಿರುತ್ತಾರೆ. ಅದನ್ನೂ ಕೂಡ ಅಧಿಕಾರಿಗಳು ಪರಿಗಣಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೆಂಕಿ ಅವಘಡ; ಭಾರೀ ಅನಾಹುತ

ರಾಜ್ಯದಲ್ಲಿ ರೈತ ಆತ್ಮಹತ್ಯೆಗಳಲ್ಲಿ ಸಕಾರಣವಿಲ್ಲದೇ ಸರ್ಕಾರ ಪರಿಹಾರ ನೀಡಲು ಮುಂದಾಗದಿದ್ದರೇ ಅದರ ಬಗ್ಗೆ ಮಾಹಿತಿ ಕಲೆ ಹಾಕಿ ಬಿಜೆಪಿಯ ತಾಲೂಕು ನಾಯಕರೇ ಆರ್ಥಿಕ ಸಹಾಯ ಮಾಡಲಿದ್ದಾರೆ. ಈ ಕುರಿತಂತೆ ಬಿಜೆಪಿಯಿಂದ ರಾಜ್ಯಮಟ್ಟದ ನಿರ್ಣಯವನ್ನು ಶೀಘ್ರದಲ್ಲಿಯೇ ತಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಕಳೆದ ತಿಂಗಳು ಆಲದಕಟ್ಟಿ ಗ್ರಾಮದಲ್ಲಿನ ಭೂಮಿಕಾ ಪಟಾಕಿ ಅಂಗಡಿ ಮತ್ತು ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದರು.

ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದವು. ಮೃತರನ್ನು ದ್ಯಾಮಪ್ಪ ಓಲೇಕಾರ(25), ರಮೇಶ್ ಬಾರ್ಕಿ(28) ಮತ್ತು ಶಿವಲಿಂಗ ಅಕ್ಕಿ(22) ಎಂದು ಗುರುತಿಸಿದ್ದು, ಮೃತರು ಬ್ಯಾಡಗಿ ತಾಲೂಕಿನ ಕಾಟೇನಹಳ್ಳಿ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಹಜ್ ಯಾತ್ರಿಗಳಿಗೆ ಹಾವೇರಿಯಲ್ಲಿಯೇ ಲಸಿಕೆ ಹಾಕಿಸುವಂತೆ ಅಂಜುಮನ್ ಸಂಸ್ಥೆಯ ಸದಸ್ಯರ ಒತ್ತಾಯ

"ಹಾವೇರಿ ಜಿಲ್ಲೆಯಿಂದ 2026ರ ಸಾಲಿನ 169 ಹಜ್ ಯಾತ್ರಿಗಳು ತೆರಳುತ್ತಿದ್ದಾರೆ. ಯಾತ್ರಿಗಳಿಗೆ...

ಹಾವೇರಿ | ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಲದಕಟ್ಟಿ, ಹನುಮಾಪುರ, ದೇವರ ಹೊಸಪೇಟ್, ಹಾಗೂ...

ಹಾವೇರಿ | ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಮುಖ್ಯ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್.

"ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಮಹಿಳಾ ನ್ಯಾಯಾಧೀಶರು ಸಮಾಜದಲ್ಲಿ...

ಹಾವೇರಿ | ಒಳ ಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿ ಖಂಡಿಸಿ, ಮಾರ್ಚ್ 12ಕ್ಕೆ ಬೆಂಗಳೂರಲ್ಲಿ ಪ್ರತಿಭಟನೆ

"ಒಳ ಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿ ಮಾಡುವ ಕಾಂಗ್ರೆಸ್ ಸರ್ಕಾರದ ಮಹಾದ್ರೋಹವನ್ನು...