ಹಾವೇರಿ | ಜೀವನವನ್ನು ಕೌಶಲ್ಯ, ಮೌಲ್ಯಗಳಿಂದ ಸುಂದರಗೊಳಿಸಬಹುದು: ವಕೀಲರು ಶಿವಾನಂದ ಅಲ್ಲಾಪುರ

Date:

“ಜೀವನ ತುಂಬಾ ಸುಂದರವಾದದ್ದು ಅದನ್ನು ಕೌಶಲ್ಯ ಮತ್ತು ಮೌಲ್ಯಗಳಿಂದ ಇನ್ನಷ್ಟೂ ಸುಂದರಗೊಳಿಸುವುದು ನಮ್ಮ ಕೈಯಲ್ಲಿದೆ. ನಾವು ಯಾವದೇ ಕಷ್ಟಕರ ಕೆಲಸಗಳನ್ನು ಕೌಶಲ್ಯಗಳನ್ನು ಬಳಸಿಕೊಂಡು ಸುಲಭಗೊಳಿಸಲು ಸಾಧ್ಯವಿದೆ” ಎಂದು ವಕೀಲರು ಶಿವಾನಂದ ಅಲ್ಲಾಪುರ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಲೊಯೋಲ ವಿಕಾಸ ಕೇಂದ್ರದಲ್ಲಿ ಮಕ್ಕಳಿಗೆ ಆಯೋಜಿಸಿದ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

“ಶಿಕ್ಷಣ ಎಂದರೆ ಕೇವಲ ನೌಕರಿ ತೆಗೆದುಕೊಳ್ಳುವುದು ಮಾತ್ರವಲ್ಲ, ಜೀವನದಲ್ಲಿ ಮೌಲ್ಯಗಳನ್ನು ಬೆಳಸಿಕೊಂಡು ಪ್ರತಿಯೊಬ್ಬರನ್ನು ಗೌರವದಿಂದ ಕಾಣುವುದು. ಸಮಾಜದಲ್ಲಿ ಘನತೆಯಿಂದ ಬಾಳುವುದು ಕೂಡಾ ಶಿಕ್ಷಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ಜೀವನ ಕೌಶಲ್ಯಗಳು ಬಹಳ ಮುಖ್ಯವಾಗಿವೆ. ಉತ್ತಮ ಸಂವಹನ, ಸರಿಯಾದ ನಿರ್ದಾರ ತೆಗೆದುಕೊಳ್ಳುವ ಸಾಮರ್ಥ್ಯ, ಸಮಸ್ಯೆ ಪರಿಹಾರ ಕೌಶಲ್ಯ, ಹಾಗೂ ತಂಡದಲ್ಲಿ ಕೆಲಸ ಮಾಡುವ ಗುಣಗಳು ವಿಧಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ನೆರವಾಗುತ್ತವೆ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಸಹ ನಿರ್ದೇಶಕರಾದ ಫಾದರ್ ಜೇಸನ್ ಪಾಯ್ಸ್ ಅವರು ಮಾತನಾಡಿ, “ಮಕ್ಕಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ಬರುತ್ತಿದೆ. ಮಕ್ಕಳು ಯಾವುದೆ ಆತಂಕ ಭಯ ಪಡದೆ ಆತ್ಮವಿಶ್ವಾಸದಿಂದ, ಆಟದ ರೀತಿಯಲ್ಲಿ ಸಂತೋಷದಿಂದ ಪರೀಕ್ಷೆಗೆ ಸಿದ್ದರಾಗಬೇಕು. ಅದರ ಜೊತೆಗೆ ಪರೀಕ್ಷಾ ಪೂರ್ವತಯಾರಿ ವಿಷಯಗಳಾದ ಓದಿದ್ದನ್ನು ಪುನಾರಾವರ್ತನೆ ಮಾಡಿಕೊಳ್ಳುವುದು, ಓದುವಾಗ ಏಕಾಗ್ರತೆ ಕಾಪಾಡಿಕೊಳ್ಳುವುದು, ಸಮಯದ ನಿರ್ವಹಣೆ, ಕಠಿಣ ವಿಷಯಗಳಿಗೆ ಹೆಚ್ಚಿನ ಆದ್ಯತೆ ಮತ್ತು ಬಹಳ ಮುಖ್ಯವಾಗಿ ಆರೋಗ್ಯ ಮತ್ತು ವಿಶ್ರಾಂತಿಯನ್ನು ಕಾಪಾಡಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮಕ್ಕಳು ಉಪಸ್ಥಿತರಿದ್ದರು. ಫಕ್ಕೀರೇಶ ಗೌಡಳ್ಳಿ ನಿರೂಪಿಸಿದರು, ರೇವಣ್ಣ ದಾನಗೊಂಡರ ಸ್ವಾಗತಿಸಿದರು, ರಮೇಶ ಬಾರ್ಕಿ ಅವರು ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...