ಹಾವೇರಿ | ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಸಂಭ್ರಮ!

Date:

ಹಿಂದೂ- ಮುಸ್ಲಿಂ ಸಾಮರಸ್ಯ ಸಾರುವ ಹಬ್ಬ ‘ಮೊಹರಂ’. ಆದರೆ ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಹಬ್ಬವನ್ನು ಆಚರಣೆ ಮಾಡುವುದನ್ನು ನೋಡಿದ್ದಾರಾ ಅಥವಾ ಕೇಳಿದ್ದೀರಾ!? ಈ ಊರಲ್ಲಿ ಒಂದೇ ಒಂದು ಮುಸ್ಲಿಂ ಸಮುದಾಯದ ಕುಟುಂಬದವರೇ ಇಲ್ಲ. ಆದರೆ ಮೊಹರಂ ಹಬ್ಬವನ್ನು ಹಿಂದೂಗಳೇ ಸೇರಿ ಆಚರಿಸುತ್ತಾರೆ. ಮುಸ್ಲಿಂ ಸಂಪ್ರದಾಯದಂತೆಯೇ ಈ ಊರಲ್ಲಿ ಹಿಂದೂಗಳು ಮೊಹರಂ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಿ ಸೌಹಾರ್ದತೆಯನ್ನು ಸಾರುತ್ತಾರೆ ಇಲ್ಲಿಯ ಜನರು.

ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ಕೋಣನತಂಬಿಗೆ ವಿಶಿಷ್ಟ ಗ್ರಾಮವಾಗಿದೆ. ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಒಂದೇ ಒಂದು ಕುಟುಂಬ ಇಲ್ಲ. ಹಿಂದೂಗಳೇ ಮೊಹರಂ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸುತ್ತಾರೆ. ಅಲಾಯಿ ದೇವರ ಪ್ರತಿಷ್ಠಾಪನೆ, ಮೆರವಣಿಗೆ, ಮೊಹರಂ ಆಚರಣೆಯ ಎಲ್ಲ ಧಾರ್ಮಿಕ ವಿಧಿ ವಿಧಾನಗಳನ್ನು ಗ್ರಾಮದ ಹಿಂದೂಗಳೇ ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿಸುತ್ತಾರೆ.

WhatsApp Image 2025 07 05 at 18.30.17

ಇಡೀ ಗ್ರಾಮದಲ್ಲಿ ಸುಮಾರು ಮೂರು ಸಾವಿರ ಜನರಿದ್ದಾರೆ. ಎಲ್ಲ ಹಿಂದೂ ಜಾತಿಯ ಸಮುದಾಯದವರು ವಾಸ ಮಾಡುತ್ತಾರೆ. ಆದರೆ, ಒಂದೇ ಒಂದು ಮುಸ್ಲಿಂ ಕುಟುಂಬ ಇಲ್ಲ. ನೂರಾರು ವರ್ಷಗಳಿಂದ, ಪೂರ್ವಿಕರ ಕಾಲದಿಂದಲೂ ಹಿಂದೂಗಳೇ ಮೊಹರಂ ಹಬ್ಬವನ್ನು ಆಚರಿಸುತ್ತಾ ಬಂದಿದ್ದು, ಸರ್ವ ಜನಾಂಗದ ಶಾಂತಿಯ ತೋಟ ಇಲ್ಲಿ ಕಂಡು ಬರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದಲ್ಲಿ ವಿಶೇಷತೆ ಎಂದರೆ ಹಿಂದೂ ಮುಸ್ಲಿಂ ಸಾಮರಸ್ಯದ ಸಾಕ್ಷಿ ಎಂಬಂತೆ ಯಮನೂರು ಒಡೆಯ ದೇವಸ್ಥಾನವಿದೆ. ದೇವಸ್ಥಾನದಲ್ಲಿ ಲಾಲ್‌ಸಾಬ್‌, ಚಾಂದ್‌ಲಾಲ್‌ ಹಾಗೂ ಹುಸೇನ್‌ ಪೀರಲು ದೇವರನ್ನು ಮೊಹರಂ ಹಬ್ಬದಲ್ಲಿ ಹಿಂದೂಗಳೇ ಸೇರಿ ಅಲಂಕಾರ ಮಾಡುತ್ತಾರೆ. ಕಳೆದ ನಾಲ್ಕು ದಿನಗಳಿಂದ ವಿಶೇಷ ಪೂಜೆ, ಪುನಸ್ಕಾರ, ಪ್ರಸಾದ ವಿತರಣೆಯನ್ನು ಹಿಂದೂಗಳೇ ಮಾಡುತ್ತಿದ್ದಾರೆ. ಪಕ್ಕದ ಯಲಗಚ್ಚ ಗ್ರಾಮದ ಮುಸ್ಲಿಂ ಸಮುದಾಯದ ವ್ಯಕ್ತಿ ಸಕ್ಕರೆ, ಬೆಲ್ಲ ಹೂದಿಕೆ ಮಾಡಿ ಇಲ್ಲಿಗೆ ಕಳುಹಿಸುತ್ತಾರೆ.

WhatsApp Image 2025 07 05 at 18.30.15

ಇದನ್ನೂ ಓದಿರಿ: ಚಿಕ್ಕಬಳ್ಳಾಪುರ | ಅಲಿಪುರ ಗ್ರಾಮದಲ್ಲಿ ಅದ್ದೂರಿ ಮೊಹರಂ ಆಚರಣೆ

ಕತ್ತಲ ರಾತ್ರಿಯ ದಿನ ಅಲಾಯಿ ಪದಗಳನ್ನು ಹಾಡುತ್ತಾರೆ. ಆಲೀ ಹೆಜ್ಜೆಗಳನ್ನು ಹಾಕುತ್ತಾರೆ. ದೇವರುಗಳು ಹೊಳೆಗೆ ಹೋಗುವ ದಿನ ದೇವರುಗಳನ್ನು ಹಿಂದೂಗಳೇ ಹೊತ್ತುಕೊಂಡು ಊರಲ್ಲಿ ಹೆಜ್ಜೆ ಮೇಳದೊಂದಿಗೆ ಮೆರವಣಿಗೆ ಹೊರಡುತ್ತಾರೆ. ಸಂಜೆ ವೇಳೆ ದೇವರು ಅಲೆಕುಣಿಯಲ್ಲಿ ಕೆಂಡ ತುಳಿಯುವ ಕಾರ್ಯ ವಿಶೇಷವಾಗಿಯೇ ನಡೆಯುತ್ತದೆ. ನಂತರದಲ್ಲಿ ದೇವರುಗಳನ್ನು ಹೊಳೆಗೆ ಕಳುಹಿಸಿ, ಮನೆಗೆ ಬಂದು ಜನರೆಲ್ಲ ದೇವರಿಗೆ ಭಕ್ತಿಯಿಂದ ಜಂಗೇವು ಎಡೆ ಇಟ್ಟು ಸೇವಿಸುತ್ತಾರೆ.

ಮೊಹರಂ ಹಬ್ಬದ ದೇವರುಗಳ ಹಿಂದೂ ಪೂಜಾರಿ ಪುಂಡಲೀಕಪ್ಪ ಮಂಗಲೇಕಾರ ಮಾತನಾಡಿ, “ಯಾವುದೇ ಜಾತಿ ತಾರತಮ್ಯ ಇಲ್ಲದೆ, ನಮ್ಮೂರಿನಲ್ಲಿ ಎಲ್ಲ ಜಾತಿಯವರು ಸೇರಿಕೊಂಡು ಹಬ್ಬವನ್ನು ಆಚರಿಸುತ್ತಾ ಬಂದಿದ್ದೇವೆ. ನಾವು ಕೂಡ ಮೊಹರಂ ಹಬ್ಬವನ್ನು ಸಂಭ್ರಮದಿಂದ ಮುಂದುವರಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಹಿಜಾಬ್, ಹಲಾಲ್ ಕಟ್, ಜಟ್ಕಾ ಕಟ್, ತ್ರಿವಳಿ ತಲಾಖ್, ಸಂತೆಯಲ್ಲಿ ವ್ಯಾಪಾರ ನಿಷೇಧ..ಹೀಗೆ ಕಳೆದ ಕೆಲವು ವರ್ಷಗಳಲ್ಲಿ ಅದೆಷ್ಟೋ ವಿವಾದಗಳನ್ನು ರಾಜ್ಯ ಕಂಡಿದೆ. ಹಿಂದೂ – ಮುಸ್ಲಿಂ ಧಾರ್ಮಿಕ ಭಾವೈಕ್ಯತೆ ಕ್ಷೀಣಿಸುತ್ತಿದೆ ಎಂಬ ಮಾತುಗಳು ಚಾಲ್ತಿಯಲ್ಲಿವೆ. ಆದರೂ ನಗರದ ಜನರಿಗಿಂತಲೂ ಹೃದಯವಂತ ಹಳ್ಳಿ ಜನರು ತಮ್ಮ ಮನೆ ಮನದಲ್ಲಿ ಧಾರ್ಮಿಕ ಭಾವೈಕ್ಯತೆಯನ್ನು ಕಾಪಿಟ್ಟುಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿಯೆಂಬಂತೆ ಹಾವೇರಿ ತಾಲೂಕಿನ ಕೋಣನತಂಬಿಗೆ ಗ್ರಾಮ ನಿಂತಿದೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...