ಹಾವೇರಿ | ಸರ್ಕಾರಕ್ಕೆ ನಾವೇ 1,000 ರೂ. ನೀಡುತ್ತೇವೆ; ರೈತರ ಆಕ್ರೋಶ

Date:

ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರದ ಮೊದಲ ಕಂತಿನಲ್ಲಿ ಪ್ರತೀ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ, ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರೂ. ಪರಿಹಾರ ನೀಡುತ್ತಿದೆ. ಆದರೆ, ಸರ್ಕಾರದ ಅಕೌಂಟಿಗೆ ನಾವೇ ಒಂದು ಸಾವಿರ ರೂಪಾಯಿ ನೀಡುತ್ತೇವೆ ಎಂದು ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

50ಕ್ಕೂ ಮಂದಿಗೂ ಹೆಚ್ಚಿನ ರೈತರು ತಲಾ ಒಂದು ಸಾವಿರ ರೂಪಾಯಿ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಪ್ರತಿ ಎಕರೆಗೆ 30ಸಾವಿರ ರುಪಾಯಿವರೆಗೆ ಖರ್ಚು ಮಾಡಿದ್ದೇವೆ. ಆದರೆ, ಸರ್ಕಾರ ಮಾತ್ರ ಎರಡು ಸಾವಿರ ರೂಪಾಯಿ ಬರ ಪರಿಹಾರ ನೀಡಿ ನಮ್ಮನ್ನು ಭಿಕ್ಷುರಂತೆ ಕಾಣುತ್ತಿದೆ. ಇದು ನಮಗೆ ಸಿದ್ದರಾಮಯ್ಯ ನೇತ್ರತ್ವದ ಸರ್ಕಾರ ಅವಮಾನ ಮಾಡಿದಂತೆ. ನಮಗೆ 2ಸಾವಿರ ರೂಪಾಯಿ ಪರಿಹಾರವೆಂದು ವಿಷ ಕುಡಿಯಲು ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವರ್ಷ ರೈತರು ಎರಡರಿಂದ ಮೂರು ಬಾರಿ ಬಿತ್ತನೆ ಮಾಡಿದ್ದೇವೆ. ಪ್ರತಿ ಬಾರಿ ಬಿತ್ತನೆ ಮಾಡಿದಾಗ ಪ್ರತಿ ಎಕರೆಗೆ 20-30 ಸಾವಿರ ಖರ್ಚು ಬಂದಿದೆ. ಆದ್ದರಿಂದ ರಾಜ್ಯ ಸರ್ಕಾರ ಎಕರೆಗೆ 15ಸಾವಿರ ರೂ. ನೀಡಬೇಕು. ಕೇಂದ್ರ ಸರ್ಕಾರ 15ಸಾವಿರ ರೂಪಾಯಿ ನೀಡಬೇಕು. ಇಲ್ಲದಿದ್ದರೆ ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಹಣದಲ್ಲಿ ಭರ್ಜರಿ ಊಟ ಮಾಡಲಿ ಅಂತಾ ನಾವೇ ಅವರಿಗೆ ದುಡ್ಡು ಕೊಡುತ್ತೇವೆ ಎಂದು ರೈತರೆಲ್ಲರೂ ನೂರು, ಐದನೂರು ರೂಪಾಯಿ ನೋಟು ಪ್ರದರ್ಶನ ಮಾಡಿ ಪ್ರತಿಭಟಿಸಿದ್ದಾರೆ. ಈ ಸಂಬಂಧ ಸವಣೂರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಪ್ರತಿ ರೈತನ ಖಾತೆಗೆ ಕೇವಲ 2ಸಾವಿರ ನೀಡುವುದನ್ನ ಬಿಟ್ಟು ಪ್ರತಿ ಎಕರೆಗೆ ಕನಿಷ್ಠ 15ಸಾವಿರ ರೂ. ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಯ ಪ್ರತೀ ರೈತರಿಂದ ಒಂದು ಸಾವಿರ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ನೀಡುತ್ತೇವೆ ಎನ್ನುತ್ತಿದ್ದಾರೆ ರೈತರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...