ಹಾವೇರಿ | ಸಂಚಾರಿ ಕ್ಯಾಂಟೀನ್‌ಗಳ ಹಾವಳಿ; ಟ್ರಾಫಿಕ್‌ ಸಮಸ್ಯೆಗೆ ಬೇಸತ್ತ ಜನ

Date:

ಹಾವೇರಿಯಲ್ಲಿ ಸಂಚಾರಿ ಕ್ಯಾಂಟೀನ್‌ಗಳು ಹೆಚ್ಚಾಗಿದ್ದು ಸಂಚಾರ ದಟ್ಟಣೆ ಮತ್ತು ಪಾರ್ಕಿಗ್‌ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಹಾವೇರಿಯ ಕೆಲವು ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಜನ ದಟ್ಟಣೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಬಹುತೇಕ ರಸ್ತೆಗಳಲ್ಲಿ ಬೀದಿ ಬದಿ ಕ್ಯಾಂಟೀನ್‌ಗಳು ನಾಯಿಕೊಡೆಗಳಂತೆ ಹುಟ್ಟಿಕೊಂಡಿದ್ದು, ಬೆಳಗ್ಗೆಯಿಂದ ರಾತ್ರಿಯವರೆಗೆ ಕಾರ್ಯನಿರ್ವಹಿಸುತ್ತಿವೆ.

ಎನ್‌ಎಚ್‌ 48, ಮುನ್ಸಿಪಲ್ ಹೈಸ್ಕೂಲ್ ರಸ್ತೆ, ಜಿಲ್ಲಾಧಿಕಾರಿ ಕಛೇರಿ ರಸ್ತೆ, ಗುತ್ತಲ್ ರಸ್ತೆ ಹಾಗೂ ಇತರ ಒಳ ರಸ್ತೆಗಳನ್ನು ಈ ಸಂಚಾರಿ ಕ್ಯಾಂಟೀನ್ಗಳು ಆಕ್ರಮಿಸಿಕೊಂಡಿವೆ. ಪಾರ್ಕಿಗ್‌ಗೆ ಮೀಸಲಿರುವ ಜಾಗದಲ್ಲಿ ಈ  ಕ್ಯಾಂಟೀನ್‌ಗಳಿದ್ದು, ಟ್ರಾಫಿಕ್ ಸಮಸ್ಯೆಯಾಗುತ್ತಿದೆ ಎನ್ನುವುದು ಸ್ಥಳೀಯರ ದೂರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ರಸ್ತೆ ಬದಿಯಲ್ಲಿ ತಿನಿಸುಗಳನ್ನು ಮಾರಿ, ಕಸವನ್ನು ರಸ್ತೆಯ ಮೇಲೆ ಎಸೆಯುತ್ತಾರೆ. ಅಡುಗೆ ಹೊಗೆ ಉಂಟಾಗುತ್ತದೆ, ಆಹಾರವನ್ನು ಬೇಯಿಸುವಾಗ ಮತ್ತು ಪಾತ್ರೆಗಳನ್ನು ತೊಳೆಯುವಾಗ ನಿರಂತರ ಶಬ್ದ ಉಂಟಾಗುವುದು ಇಲ್ಲಿನ ಅಂಗಡಿಗಳು ಮತ್ತು ನಿವಾಸಿಗಳಿಗೆ ಸಮಸ್ಯೆಯಾಗಿದೆ.

ಇಲ್ಲಿನ ಅಂಗಡಿಯವರು ಮತ್ತು ನಿವಾಸಿಗಳು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಪಾರ್ಕಿಕ್‌ ಸಮಸ್ಯೆ. ಎನ್‌ಎಚ್‌-48 ಬಳಿ ಬಸ್ ಟರ್ಮಿನಲ್‌, ವಾಣಿಜ್ಯ ಪ್ರದೇಶ ಇರುವುದರಿಂದ, ದ್ವಿಚಕ್ರ ವಾಹನ ಮತ್ತು ನಾಲ್ಕು ಚಕ್ರವಾಹನಗಳನ್ನು ಮುಖ್ಯ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಾರೆ. ಇದರಿಂದ ಟ್ರಾಫಿಕ್ ಉಂಟಾಗುತ್ತಿದೆ.

ಇನ್ನು, ಮುನ್ಸಿಪಲ್ ಹೈಸ್ಕೂಲ್ ರಸ್ತೆಯಲ್ಲಿ ಮಾಂಸಹಾರ ತಿಂಡಿ ತಿನಿಸುಗಳನ್ನು ಮಾರುವವರು ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ಉಳಿದ ಮಾಂಸಾಹಾರ ಮತ್ತು ತ್ಯಾಜ್ಯವನ್ನು ಸಾಮಾನ್ಯವಾಗಿ ರಸ್ತೆಗಳಲ್ಲಿ ಎಸೆಯುತ್ತಾರೆ. ಈ ಮಾಂಸಕ್ಕಾಗಿ ಬೀದಿ ನಾಯಿಗಳು ಜಗಳವಾಡುತ್ತವೆ. ಇದು ಇಲ್ಲಿ ಓಡಾಡುವ ಜನರಿಗೆ ಮತ್ತು ಮಕ್ಕಳಿಗೆ ಅಪಾಯ ತರಬಹುದು ಎನ್ನುತ್ತಾರೆ ಸ್ಥಳೀಯರು.

ಒಟ್ಟಿನಲ್ಲಿ ಜನರಿಗೆ ಅನುಕೂಲವಾಗಲಿ ಎಂದು ತಲೆ ಎತ್ತಿರುವ ಈ ಸಂಚಾರಿ ಕ್ಯಾಂಟೀನ್‌ಗಳಿಂದ ಸ್ಥಳೀಯ ಅಂಗಡಿ ಮಾಲೀಕರು ಮತ್ತು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದು ಜಿಲ್ಲಾಡಳಿತ ಆದಷ್ಟುಬೇಗ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...