ಹಾವೇರಿ | ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

Date:

ಶತಮಾನದಲ್ಲೇ ಕಂಡರಿಯದಂತಹ ಭೀಕರ ಬರಗಾಲಕ್ಕೆ ಬೆಳೆ ಕಳೆದುಕೊಂಡು ರೈತರು ಬೀದಿ ಪಾಲಾಗಿದ್ದಾರೆ. ಈ ವರ್ಷದ ಮುಂಗಾರು ಹಾಗೂ ಹಿಂಗಾರು ಬೆಳೆ ಸಂಪೂರ್ಣ ಕೈ ಕೊಟ್ಟಿದ್ದರಿಂದ ಬೆಳೆ ನಷ್ಟವಾಗಿದೆ. ಸರ್ಕಾರಗಳು ರೈತರಿಗೆ ನೆರವಾಗುಬೇಕು ಎಂದು ರೈತ ಸಂಘದ ಮುಖಂಡ ರಾಮಣ್ಣ ಕೆಂಚಳ್ಳಿ ಹೇಳಿದ್ದಾರೆ.

ಹಾವೇರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಳೆ ನಷ್ಟ ಪರಿಹಾರ, ಬೆಳೆ ವಿಮಾ ತಕ್ಷಣ ಬಿಡುಗಡೆ ಮಾಡಬೇಕು. ಹೊಸ ಐಪಿ ಪಂಪ್ ಸೆಟ್ಗಳಿಗೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೈತಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳಿ, “ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಿ ಮೂರು ತಿಂಗಳು ಗತಿಸಿವೆ. ಆದರೂ, ಬೆಳೆ ನಷ್ಟ ಪರಿಹಾರ ಕೊಡದೆ ಕೇಂದ್ರದ ಕಡೆ ಬೊಟ್ಟು ಮಾಡುತ್ತಿದೆ. ಕೇಂದ್ರ ಸರ್ಕಾರ ರೈತರಿಗೆ ಪರಿಹಾರ ಬಿಡುಗಡೆ ಮಾಡದೆ ದ್ರೋಹವೆಸಗಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿ ಚುನಾವಣೆ ಗುಂಗಿನಲ್ಲಿ ಕಾಲಹರಣ ಮಾಡುತ್ತಿದೆ. 28 ಜನ ಸಂಸದರು ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕದೇ ಇರುವುದು ನಾಚಿಕೆಗೇಡಿನ ಸಂಗತಿ ಮುಖ್ಯಮಂತ್ರಿಗಳು ಕೇವಲ ಒಬ್ಬ ರೈತನಿಗೆ 2 ಸಾವಿರ ಬೆಳೆ ಪರಿಹಾರ ಕೊಡುವುದಾಗಿ ಹೇಳಿದ್ದಾರೆ.ಇದು ಸಂಪೂರ್ಣ ಅನ್ನದಾತರಿಗೆ ಮಾಡಿದ ಅಪಚಾರ, ರಾಜ್ಯದಲ್ಲಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ಬ್ಯಾಂಕುಗಳು ದಬ್ಬಾಳಿಕೆ ಸಾಲ ವಸೂಲಿ ಮಾಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, “ಹೆಸ್ಕಾಂ ಕಂಪನಿ ಹೊಸ ಪಂಪ್‌ ಸೆಟ್ ಗೆ ವಿದ್ಯುತ್ ಅರ್ಜಿ ಪಡೆಯುವುದನ್ನು ನಿಲ್ಲಿಸಿದ್ದು ತಕ್ಷಣ ಅರ್ಜಿ ಪಡೆಯಬೇಕು. ಬೆಳೆ ವಿಮಾದಲ್ಲಿ ತಾರತಮ್ಯ ನಡೆದಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಹಾಗೂ ಕೃಷಿ ಇಲಾಖೆಯಲ್ಲಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಪರಿಕರಗಳನ್ನು ಪಡೆಯಲು NOC ಕೇಳುವುದನ್ನು ರದ್ದುಪಡಿಸುವಂತೆ ಹಾಗೂ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಜಿಲ್ಲಾ ಕಛೇರಿ ಎದುರಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ” ಎಂದರು.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  1. ಬರಗಾಲದಿಂದ ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಎಕರೆಗೆ ರೂ. 25 ಸಾವಿರ ಪರಿಹಾರ ಕೊಡಬೇಕು.
  2. ಹೆಸ್ಕಾಂ ಕಂಪನಿ ಹೊಸ ಬೇ‌ರ್ ವೆಲ್‌ ಗಳಿಗೆ ಅರ್ಜಿಯನ್ನು ಪಡೆದು ವಿದ್ಯುತ್ ಪೂರೈಸಬೇಕು.
  3. ಓವರ್ ಲೋಡ್ ಆದ ಟಿಸಿ 25 ಕೆವಿಯಿಂದ 63 ಕೆವಿ ಹಾಗೂ 63 ರಿಂದ 100 ಕೆ.ವಿ ಯಾಗಿ ಪರಿವರ್ತಸಬೇಕು. ಹಾಗೂ ಅಕ್ರಮ-ಸಕ್ರಮ ಯೋಜನೆಯನ್ನು ಪೂರ್ಣಗೊಳಿಸಬೇಕು.
  4. ಬೆಳೆ ವಿಮಾ ತುಂಬಿದ ರೈತರಿಗೆ ವಿಮಾ ತಕ್ಷಣ ಮಂಜೂರ ಮಾಡಬೇಕು.
  5. ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ ಸ್ಥಾಪಿಸಬೇಕು.
  6. ರೈತರ ಕೃಷಿ ಸಾಲ ಸಿಬಿಲ್‌ ನಿಂದ ಹೊರಗಿಡಬೇಕು ಮತ್ತು ಬಲವಂತದ ಸಾಲ ವಸೂಲಿ ಮಾಡುವುದುನ್ನು ನಿಲ್ಲಿಸಬೇಕು.
  7. ರೈತರು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೌಲಭ್ಯ ಪಡೆಯಲು NOC ಕೇಳುವುದನ್ನು ರದ್ದುಪಡಿಸಬೇಕು.
  8. ಅಣೂರ ಹಾಗೂ ಬುಡಪಪನಹಳ್ಳಿ ಕೆರೆ ತುಂಬಿಸುವ ಯೋಜನೆಗೆ ಶೀಘ್ರ ಬಾಂದರ ನಿರ್ಮಿಸಿ ಕೆರೆ ತುಂಬಿಸುವಂತಾಗಬೇಕು.

ಪ್ರತಿಭಟನೆಯಲ್ಲಿ ರೈತ ಮುಖಂಡ ಸುರೇಶ ಚಲವಾದಿ, ಕಾಡನಗೌಡ ರುದ್ರಗೌಡ್ರ, ಮಂಜುನಾಥ ಕದಂ, ಗಂಗಣ್ಣ ಎಲಿ ಕರಿಬಸಪ್ಪ, ಅಡಿವೆಪ್ಪ ಆಲದಕಟ್ಟಿ ಹಾಗೂ ವಿವಿಧ ತಾಲೂಕು ಹಳ್ಳಿಗಳ ರೈತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...