ಹಾವೇರಿ | ಸರ್ಕಾರ ನಡೆಸಲು ಸಿದ್ಧರಾಮಯ್ಯ ಸರ್ಕಾರಕ್ಕೆ ದೇಣಿಗೆ ನೀಡುತ್ತೇವೆ; ರೈತ ಸಂಘ ಕಿಡಿ

Date:

ರಾಜ್ಯ ಸರ್ಕಾರ ಹಾವೇರಿ ಜಿಲ್ಲೆ ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರ ಬ್ಯಾಂಕ್ ಖಾತೆಗೆ ಬಿಡಿಗಾಸು ಜಮೆ ಮಾಡದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕು ದಂಡಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬರಗಾಲ ಘೋಷಣೆಯಾಗಿರುವ ಸವಣೂರು ತಾಲೂಕಿನ ರೈತರಿಗೆ ಬೆಳೆ ನಷ್ಟ ಪರಿಹಾರ ಪೂರ್ಣ ಪ್ರಮಾಣದಲ್ಲಿ ಸಿಗುತ್ತಿಲ್ಲ. ಆದ್ದರಿಂದ ಈ ಸಮಸ್ಯೆ ಕುರಿತು ಗಂಭೀರವಾಗಿ ಚಿಂತಿಸಬೇಕೆಂದು ಆಗ್ರಹಿಸಿ ತಹಸಿಲ್ದಾರ್ ಭರತ್ ಕೆ ಎನ್, ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ‌ ಸಲ್ಲಿಸಿದರು.

“2023-24ನೇ ಸಾಲಿನ ಬೆಳೆಹಾನಿ ಸಮೀಕ್ಷೆ ಪ್ರಕಾರ ಸವಣೂರು-ಶಿಗ್ಗಾಂವಿ ತಾಲೂಕನ್ನು ಬರಗಾಲ ಪೀಡಿತವೆಂದು ಘೋಷಣೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಬೆಳೆನಷ್ಟ ಪರಿಹಾರ ಅಲ್ಪಪ್ರಮಾಣದಲ್ಲಿ ಹಾಕಲಾಗುತ್ತದೆಂದು ಸರ್ಕಾರ ಹೇಳಿದೆ. ಆದರೆ, ರೈತರು ಮತ ಹಾಕಿ ಬಹುಮತದಿಂದ ಕಾಂಗ್ರೆಸ್ ಸರ್ಕಾರವನ್ನು ಆರಿಸಿ ತಂದಿದ್ದಾರೆ. ಅದರ ಅರಿವಿಲ್ಲದೆ ರೈತರ ಜೀವನ ಹಾನಿ ಮಾಡುತ್ತಿರುವ ಸರ್ಕಾರ ಬರಗಾಲದ ಬೆಳೆನಷ್ಟ ಪರಿಹಾರವಾಗಿ ₹2,000 ಯಾವ ಹಿತಾಸಕ್ತಿಗಾಗಿ ಹಾಕುತ್ತಿದ್ದೀರಿ? ಎಂದು ಪ್ರಶ್ನಿಸಿದ್ದು, ಪ್ರಸ್ತುತ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರಿನ ಬೆಳೆ ಹಾನಿಯಾಗಿದ್ದು, ಸರ್ಕಾರವು ಪ್ರತಿ ಹಂಗಾಮಿಗೆ ಎಕರೆಗೆ ₹25,000 ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಶೈಕ್ಷಣಿಕ ಪ್ರಗತಿಯೊಂದೇ ಸಮುದಾಯದ ಉನ್ನತಿಗೆ ಕಾರಣ: ಶಿವಲೀಲಾ ವಿನಯ ಕುಲಕರ್ಣಿ

“ಬರಗಾಲದಲ್ಲಿ ಬೆಂದ ರೈತರ ಗಾಯದ ಮೇಲೆ ಬರೆ ಎಳೆದಂತಾಗಿರುವ ಬೆಲೆ ಏರಿಕೆಯನ್ನು ಹಿಂಪಡೆಯಬೇಕು. ಸಿದ್ಧರಾಮಯ್ಯನವರ ಸರ್ಕಾರಕ್ಕೆ, ರೈತ ಸಂಘ ಹಾಗೂ ರೈತರಿಂದ ಸರ್ಕಾರ ನಡೆಸಲು ದೇಣಿಗೆ ರೂಪದಲ್ಲಿ ಹಣ ಸಂದಾಯ ಮಾಡುತ್ತೇವೆ” ಎಂದರು.

ಎಂ ಎನ್ ನಾಯಕ್, ಚೆನ್ನಪ್ಪ ಮರಡೂರ್, ಸಂಗಮೇಶ್ ಪಿತಾಮ್ಪುರ್ ಶೆಟ್ಟಿ, ನೂರ್ ಅಹಮದ್ ಮುಲ್ಲಾ, ಜಗದೀಶ್ ಬಳ್ಳಾರಿ, ರಾಜು ತರ್ಲಘಟ್ಟ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...