ಹಾವೇರಿ | ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಜನರು

Date:

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕೊನೆಯ ಗ್ರಾಮ ಬಸವನಕೊಪ್ಪದಲ್ಲಿ ಶುದ್ಧ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಸ್ವಚ್ಛತೆಯಿಲ್ಲದೆ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು ಪ್ರತೀ ನಿತ್ಯ ಜೀವನವನ್ನು ಸಾಗಿಸುವಂತ ಸ್ಥಿತಿ ಇದೆ.

ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಕೂಡಾ ಒಂದು ವರ್ಷದಿಂದ ಅದು ಕಾರ್ಯವನ್ನು ನಿರ್ವಹಿಸುತ್ತಿಲ್ಲ. ಶುದ್ಧ ಕುಡಿಯುವ ನೀರಿಗಾಗಿ ನಿತ್ಯ ಪಕ್ಕದ ಕಡಕೋಳ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮಕ್ಕೆ ಹೋಗಿ ಶುದ್ಧ ಕುಡಿಯುವ ನೀರು ತರುವಂತಹ ಪರಿಸ್ಥಿತಿ ಗ್ರಾಮಸ್ಥರದ್ದು.

ಮನೆಯಲ್ಲಿ ನೀರು ತರಲು ಜನ ಇಲ್ಲದಂತ ಮನೆಗಳಲ್ಲಿ ನಿತ್ಯ ಬರುವ ಪ್ಲೋರೈಡ್‌ಯುಕ್ತ ನೀರು ಕುಡಿದು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಆಸ್ಪತ್ರೆಗಳಿಗೆ ಅಲೆದಾಡುವ ಸ್ಥೀತಿಯಲ್ಲಿವೆ ಕೆಲ ಕುಟುಂಬಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕೊಳಚೇನೀರು ರಸ್ತೆಯಲ್ಲಿಯೇ ನಿಲ್ಲುತ್ತಿದೆ. ಇದರಿಂದ ರಸ್ತೆಗಳೆಲ್ಲ ಹಾಳಾಗಿ ಹೋಗಿದ್ದು, ಅವುಗಳ ದುರಸ್ತಿಗೆ ಪಂಚಾಯಿತಿ ಮುಂದಾಗಿಲ್ಲ. ಸಾರ್ವಜನಿಕರು ಇದರಲ್ಲಿಯೇ ಓಡಾಡುತ್ತಾರೆ.

ಗ್ರಾಮದ ಅಭಿವೃದ್ಧಿ ಹಾಗೂ ಸ್ವಚ್ಛತೆ, ಸಾರ್ವಜನಿಕರ ಆರೋಗ್ಯ ಕಾಯಲು ಕೈಗೊಳ್ಳುವ ಕೆಲಸಕ್ಕೆ ಸರ್ಕಾರ ಗ್ರಾಮ ಪಂಚಾಯ್ತಿಗೆ ಅನುಧಾನದ ಅನುಕೂಲ ಕಲ್ಪಿಸಿದೆ. ಅದನ್ನು ಸಮರ್ಪಕವಾಗಿ ಬಳಕೆ ಮಾಡದೇ ಗ್ರಾಮದ ಅಭಿವೃದ್ಧಿ ಹಾಗೂ ಸ್ವಚ್ಛತೆ ಕೈಗೊಳ್ಳಬೇಕಾಗಿದ್ದ ಗ್ರಾಮ ಪಂಚಾಯ್ತಿ ಅಧಿಕಾರಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಮಾತ್ರ ವರ್ಷಕ್ಕೊಮ್ಮೆ ಕರವಸೂಲಿ ಮಾಡುತ್ತಾರೆ ಹೊರೆತು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ನಮ್ಮ ಊರಿನ ಸಮಸ್ಯೆಗಳನ್ನು ಬೇಗ ಬಗೆಹರಿಸಿ ಶೂದ್ಧ ನೀರು, ರಸ್ತೆ, ಚರಂಡಿ ವ್ಯವಸ್ಥೆ ಕಲ್ಪಿಸಿ ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...