ಹಾವೇರಿ | ಸಮುದಾಯದ ಅಭಿವೃದ್ಧಿಗೆ ಮಹಿಳೆಯರು ಕೈಜೋಡಿಸಬೇಕು: ಸಿಸ್ಟರ್ ಶಾಂತಿ ಡಿಸೋಜಾ

Date:

ಮಹಿಳೆಯರು ನಾಯಕತ್ವ ಬೆಳೆಸಿಕೊಂಡು, ಮುಂದಾಳತ್ವದೊಂದಿಗೆ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದರೆ, ಜನರು ನಮ್ಮನ್ನು ಗುರುತಿಸಿ ನಮ್ಮ ಜೊತೆ ಇರುತ್ತಾರೆ ಮತ್ತು ನಮ್ಮ ನಾಯಕತ್ವವನ್ನು ಒಪ್ಪಿಕೊಳ್ಳುತ್ತಾರೆ. ಆದ್ದರಿಂದ ಒಕ್ಕೂಟದ ಪದಾಧಿಕಾರಿಗಳು ಪ್ರತಿಯೊಬ್ಬರೂ ಮಹಿಳೆಯರ ಏಳಿಗೆಗೆ ಶ್ರದ್ಧೆಯಿಂದ ಶ್ರಮಿಸಿದರೆ ಅವರ ಕುಟುಂಬದ ಏಳಿಗೆಗೆ ಶ್ರಮಿಸಿದಂತಾಗುತ್ತದೆ ಎಂದು ರೋಶನಿ ಸಮಾಜ ಸೇವಾ ಸಂಸ್ಥೆಯ ಸಹ ನಿರ್ದೇಶಕಿ ಸಿಸ್ಟರ್ ಶಾಂತಿ ಡಿಸೋಜಾ  ಹೇಳಿದರು.

ರೋಶನಿ ಸಮಾಜ ಸೇವಾ ಸಂಸ್ಥೆ ಹಾನಗಲ್‌ನಲ್ಲಿ ಹಮ್ಮಿಕೊಂಡಿದ್ದ ಆದರ್ಶ ತಾಲೂಕು ಮಹಿಳಾ ಒಕ್ಕೂಟದ ಸಭೆಗೆ ಮಾರ್ಗದರ್ಶಕರಾಗಿ ಆಗಮಿಸಿದ್ದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಒಕ್ಕೂಟದ ಅಧ್ಯಕ್ಷೆ ಪ್ರೇಮಾ ಕಾಳೇರ ಮಾತನಾಡಿ, “ಮಹಿಳೆಯರ ಆರ್ಥಿಕ, ಸಾಮಾಜಿಕ ಸಬಲೀಕರಣದ ಸರ್ವತೋಮುಖ ಬೆಳವಣಿಗೆ ಅವಕಾಶಗಳನ್ನು ನೀಡಲು ಈ ವೇದಿಕೆ ಯಾವಾಗಲು ಸಿದ್ದವಾಗಿರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವೇದಿಕೆ ಮುಖಂಡ ಪಕ್ಕಿರಪ್ಪ ಬಾಳೂರ ಮಾತನಾಡಿ, “ಹಳ್ಳಿಗಳಲ್ಲಿ ಇರುವ ನಮ್ಮನ್ನು ಗುರುತಿಸಿ ನಾಯಕತ್ವ ಬೆಳೆಸಿ ಇಂತಹ ಕಾರ್ಯಕ್ರಮಗಳಲ್ಲಿ ಸನ್ಮಾನಿಸುತ್ತಿರುವುದು ಸಂತೋಷವಾಗುತ್ತದೆ. ಸಮುದಾಯದಲ್ಲಿರುವ ನೂರಾರು ವೃದ್ದರು, ಬಡವರು, ವಿಧವೆಯರನ್ನು ಗುರುತಿಸಿ ಅವರಿಗೆ ಸಿಗಬೇಕಾದ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಮನವರಿಕೆ ಮಾಡಿ ಅವುಗಳನ್ನು ದೊರಕಿಸಿ ಕೊಡುವಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಸಂಸ್ಥೆಯ ರಜತ ಮಹೋತ್ಸವದ ಪ್ರಯುಕ್ತ 25 ವರ್ಷಗಳಿಂದ ಮಹಿಳೆಯರ ಸಬಲೀಕರಣದಲ್ಲಿ ತೊಡಗಿರುವ ಹಿರೇಕಣಗಿ ವಲಯದ ಮಹಿಳಾ ಸ್ವಸಹಾಯ ಸಂಘಗಳ ಲಕ್ಷ್ಮವ್ವ ಬೈಲವಾಡ, ಪವಿತ್ರಾ ಬೈಲವಾಡ, ಲಕ್ಷ್ಮವ್ವ ಓಣೀಕರಿ, ಗಂಗವ್ವ ಕಾಳೇರ ಮತ್ತು ಜನವೇದಿಕೆ ಮುಖಂಡ ಫಕ್ಕಿರಪ್ಪ ಬಾಳೂರ, ಪಾಲಾಕ್ಷಯ್ಯ ಹಿರೇಮಠ, ರಾಮಚಂದ್ರ ಶಿಡ್ಲಾಪುರ, ಪದ್ಮಾವತಿ ಕೊಳ್ಳೂರ ಹಾಗೂ ಲಕ್ಷ್ಮವ್ವ ಲಮಾಣಿ ಎಂಬುವವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ರಷ್ಯಾದ ಮಹಾ ಕ್ರಾಂತಿಗೆ 106 ವರ್ಷ

ಸಭೆಯಲ್ಲಿ ಉಪಾಧ್ಯಕ್ಷೆ ಕಮಲಾಕ್ಷಿ ಬೆಳಗಲಿ, ಖಜಾಂಚಿ ಚಂಪಾ ಕರ್ಜಗಿ, ಸಮುದಾಯ ಸಂಘಟನೆ ಸಂಯೋಜಕ ಕಲ್ಲಪ್ಪ ನಾಯ್ಕರ, ಮಹಿಳಾ ಸಬಲೀಕರಣದ ಸಂಯೋಜಕ ಡಿಗ್ಗಪ್ಪ ಲಮಾಣಿ, ಸಿಬ್ಬಂದಿ ರೂಪಾ ರಜಪೂತ, ಶೀಲಾ ಮ್ಯಾಗಳಮನಿ ಮತ್ತು ಒಕ್ಕೂಟದ ಸರ್ವ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...