ಹಾವೇರಿ | ಬರದ ನಡುವೆಯೂ ಬೆಳೆದಿದ್ದ ಈರುಳ್ಳಿ ಕಳವು; ಕಣ್ಣೀರು ಹಾಕಿದ ರೈತ ಮಾದೇವಪ್ಪ

Date:

ಈ ಹಿಂದೆ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ಈರುಳ್ಳಿ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಜಮೀನಿಗೆ ನುಗ್ಗಿ ಈರುಳ್ಳಿ ಕದ್ದೊಯ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದು, ಈರುಳ್ಳಿ ಬೆಳೆದಿದ್ದ ರೈತ ಕಣ್ಣೀರು ಹಾಕಿದ್ದಾರೆ.

ಹಾವೇರಿ ತಾಲೂಕಿನ ಯಲಹಚ್ಚ ಗ್ರಾಮದ ರೈತ ಮಾದೇವಪ್ಪ ಹಳೇರಿತ್ತಿ ಎಂಬವರು ತಮ್ಮ ಜಮೀನಿನಲ್ಲಿ ಈರುಳ್ಳಿ ಬೆಳೆದಿದ್ದರು. ಉತ್ತಮ ಇಳುವರಿ ಇದೆ. ಬೆಲೆ ಏರಿಕೆಯಿಂದ ಒಳ್ಳೆಯ ಲಾಭ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ, ರಾತ್ರೋರಾತ್ರಿ ಜಮೀನಿಗೆ ನುಗ್ಗಿರುವ ಖದೀಮರು ಈರುಳ್ಳಿಯನ್ನು ಕದ್ದೊಯ್ದಿದ್ದಾರೆ.

ಎರಡು ಎಕರೆ ಜಮೀನಿನಲ್ಲಿ ಮಾದೇವಪ್ಪ ಈರುಳ್ಳಿ ಬೆಳೆದಿದ್ದರು. ಇತ್ತೀಚೆಗೆ, ಮೊದಲ ಹಂತದ ಕಟಾವು ಮಾಡಿ, ಮಾರಾಟ ಮಾಡಿದ್ದರು. ಉತ್ತಮ ಲಾಭ ಪಡೆದಿದ್ದರು. ಜಮೀನಿನಲ್ಲಿರುವ ಈರುಳ್ಳಿಯಿಂದ ಇನ್ನೂ ಸುಮಾರು 80 ಸಾವಿರದವರೆಗೆ ಆದಾಯ ಬರುತ್ತದೆ ಎಂಬ ಭರವಸೆಯೂ ಅವರಲ್ಲಿತ್ತು. ಆದರೆ, ಕಳ್ಳರು ಅವರ ಶ್ರಮವನ್ನು ಲೂಟಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈರುಳ್ಳಿ ಬೆಳೆಯನ್ನು ಕಾಯುತ್ತಾ ಮಾದೇವಪ್ಪ ಜಮೀನಿನಲ್ಲೇ ಮಲಗುತ್ತಿದ್ದರು. ಆದರೆ, ಬೇರೆಡೆ ಇದ್ದ ಜಮೀನಿನಲ್ಲಿ ಮೆಕ್ಕೆಜೋಳವನ್ನೂ ಬೆಳೆದಿದ್ದ ಮಾದೇವಪ್ಪ, ಜೋಳವನ್ನು ಕಟಾವು ಮಾಡಿದ್ದ ಕಾರಣ, ಅದನ್ನು ಕಾಯಲು ಹೋಗಿದ್ದರು. ಈ ಸಮಯಕ್ಕಾಗಿ ಕಾಯುತ್ತಿದ್ದ ಖದೀಮರು ಈರುಳ್ಳಿಯನ್ನು ಕದ್ದೊಯ್ದಿದ್ದಾರೆ.

ಮರುದಿನ ಬೆಳಗ್ಗೆ ಜಮೀನಿಗೆ ಬಂದಾಗ ಈರುಳ್ಳಿ ಕಳುವಾಗಿರುವುದು ಗೊತ್ತಾಗಿದೆ. ದಪ್ಪ ಗಾತ್ರದ ಈರುಳ್ಳಿಯನ್ನು ಕದ್ದಿರುವ ಕಳ್ಳರು, ಸಣ್ಣ ಈರುಳ್ಳಿಗಳನ್ನು ಜಮೀನಿನಲ್ಲೇ ಬಿಟ್ಟು ಹೋಗಿದ್ದಾರೆ. ಬರಗಾಲ, ವಿದ್ಯುತ್ ಸಮಸ್ಯೆಯ ನಡುವೆಯೂ ಈರುಳ್ಳಿ ಬೆಳೆದಿದ್ದ ರೈತ ಕಣ್ಣೀರು ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...