ಹಾಸನ | ನನ್ನ ವಿರುದ್ಧದ ಸುಳ್ಳು ಮಾಹಿತಿಯಿಂದ ಮತಗಳ ಅಂತರ ಕುಸಿದಿದೆ: ರೇವಣ್ಣ

Date:

  • ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸುತ್ತೇವೆ
  • ಸಿದ್ದರಾಮಯ್ಯ ಅವರ ಮೇಲೆ ವೈಯಕ್ತಿಕವಾಗಿ ಗೌರವವಿದೆ

ಹಾಸನ ಜಿಲ್ಲೆಯಲ್ಲಿ ನಮ್ಮ ಪಕ್ಷದಿಂದ ನಾಲ್ಕು ಜನ ಶಾಸಕರು ಗೆದ್ದಿದ್ದೀವಿ. ಮೂವರು ಸೋತಿದ್ದೀವಿ, ಪಕ್ಷಾತೀತವಾಗಿ ನಮಗೆ ಮತ ಹಾಕಿದ ಜನರಿಗೆ ಧನ್ಯವಾದಗಳು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದರು.

ಹಾಸನ ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಜನ ಕೆಲವು ಸಲ ಗೆಲ್ಲಿಸಿದ್ದಾರೆ, ಕೆಲವು ಸಲ ಸೋಲಿಸಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ನಮ್ಮ ಪಕ್ಷ ಮುಗಿಸಲು ಪ್ರಯತ್ನ ಪಟ್ಟರು” ಎಂದು ದೂರಿದರು.

“ಕಾಂಗ್ರೆಸ್ ಪಕ್ಷ ಗೆದ್ದಿದೆ, ಐದು ವರ್ಷ ಒಳ್ಳೆಯ ಕೆಲಸ ಮಾಡಲಿ, ಗ್ಯಾರಂಟಿ ಕಾರ್ಡ್ ಕೊಟ್ಟವ್ರೆ, ಜನಕ್ಕೆ ಅದನ್ನು ಕೊಡಲಿ. ನಾವು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡ್ತೀವಿ, ರಾಷ್ಟ್ರೀಯ ಪಕ್ಷದ ಮುಖಂಡರೇ ಸೋತಿರುವಾಗ ನಮ್ದು ಏನಿದೆ” ಎಂದು ಸೋಲಿಗೆ ವ್ಯಾಖ್ಯಾನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಕಲೇಶಪುರದಲ್ಲಿ ನಮ್ಮ ತಪ್ಪಿನಿಂದ ಒಂದು ಸಾವಿರ ಮತಗಳ ಅಂತರದಿಂದ ಎಚ್‌.ಕೆ ಕುಮಾರಸ್ವಾಮಿ ಸೋತಿದ್ದಾರೆ. ಇದಕ್ಕೆಲ್ಲ ಧೃತಿಗೆಡಲ್ಲ” ಎಂದರು.

“1989ರಲ್ಲಿ ಎಂಟಕ್ಕೆ ಎಂಟೂ ಕ್ಷೇತ್ರ ಸೋತಿದ್ದೆವು. ಜಿಲ್ಲೆಯಲ್ಲಿ ಕೆಲವು ಅಭಿವೃದ್ಧಿ ಕೆಲಸಗಳು ನಿಂತಿವೆ, ಮುಂದೆ ನೋಡೋಣ. ದೇವೇಗೌಡರ ಶಕ್ತಿಯಿಂದ ನಾಲ್ಕು ಕ್ಷೇತ್ರಗಳಲ್ಲಿ ಜನ ಗೆಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿ ಮಾಡಿಕೊಂಡು ಹೋರಾಟ ಮುಂದುವರಿಸುತ್ತೇವೆ” ಎಂದು ಹೇಳಿದರು.

ಸುಳ್ಳು ಮಾಹಿತಿ ನೀಡಿದ್ದರಿಂದ ಹಿನ್ನಡೆ

“ನನ್ನ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದರಿಂದ ಚುನಾವಣೆಯಲ್ಲಿ ಅಂತರ ಕಡಿಮೆಯಾಗಿದೆ. ಇನ್ನೂ ಐದು ವರ್ಷ ಸಮಯ ಇದೆ ಅಷ್ಟರಲ್ಲಿ ಎಲ್ಲವನ್ನು ಸರಿಪಡಿಸಿಕೊಳ್ಳುತ್ತೇವೆ. ನಾನು ವೋಟ್ ಕೇಳಲು ಹೋಗಿಲ್ಲ, ಜನ ನನ್ನನ್ನು ಉಳಿಸಿಕೊಂಡಿದ್ದಾರೆ” ಎಂದರು.

“ಹೊಳೆನರಸೀಪುರ ಕ್ಷೇತ್ರದ ಜನ ಆರು ಬಾರಿ ನನ್ನನ್ನು ಗೆಲ್ಲಿದ್ದಾರೆ. ಕಡಿಮೆ ಏಕಾಯ್ತು ನನಗೆ ಗೊತ್ತಿದೆ. ಅದನ್ನು ಹೇಗೆ ಸರಿ ಮಾಡಿಕೊಳ್ಳಬೇಕು ಅನ್ನೋದೂ ಗೊತ್ತಿದೆ. ಹಾಸನ ಜಿಲ್ಲೆಗೆ, ಚನ್ನಪಟ್ಟಣಕ್ಕೆ ಪ್ರಧಾನ ಮಂತ್ರಿ ಬಂದಿದ್ದರು, ಕುಮಾರಸ್ವಾಮಿ ಗೆಲ್ಲಲಿವಾ? ಬಿಜೆಪಿ ಮುಖಂಡರ ತಪ್ಪಿನಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ” ಎಂದು ಅಭಿಪ್ರಾಯಪಟ್ಟರು.

“ಬಿಜೆಪಿ ನಮ್ಮ ಶೇ.5ರಷ್ಟು ಓಟು ತೆಗೆದುಕೊಂಡರು, ಕಾಂಗ್ರೆಸ್‌ ಮತಗಳು ಹೆಚ್ಚುವರಿ ಆಯ್ತು. ಈ ಚುನಾವಣೆ ಲೋಕಸಭೆ ಚುನಾವಣೆ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್‌ನಿಂದ ಯಾರೇ ಮುಖ್ಯಮಂತ್ರಿ ಆದರೂ ಸ್ವಾಗತ ಮಾಡುವೆ. ಯಾರೇ ಸಿಎಂ ಆದರೂ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಿ, ವಿದ್ಯುತ್‌ ದರ ಇಳಿಸಲಿ, ಗ್ಯಾರಂಟಿಗಳನ್ನು ಈಡೇರಿಸಲಿ” ಎಂದ ಅವರು, ನನಗೆ ಸಿದ್ದರಾಮಯ್ಯ ಅವರ ಮೇಲೆ ವೈಯಕ್ತಿಕವಾಗಿ ಗೌರವವಿದೆ. ಆದರೆ, ರಾಜಕೀಯ ಬೇರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದರು.

ಈ ಸುದ್ದಿ ಓದಿದ್ದೀರಾ? ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕರಿಸಿದಕ್ಕೆ ಧನ್ಯವಾದ: ಹಂಗಾಮಿ ಸಿಎಂ ಬೊಮ್ಮಾಯಿ‌

ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‌ಗೆ ಕರ್ಕೊಂಡು ಹೋಗುತ್ತೇವೆ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸುತ್ತೇವೆ. ಯಾವ ಕ್ಷೇತ್ರ ಎಂದು ಮುಂದೆ ನೋಡೊಣ ಎಂದು ಹೇಳಿದರು.

ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ಲೋಕಸಭೆ ಚುನಾವಣೆಗೆ ನಿಲ್ಲಲ್ಲ ಎಂದರೂ ನಾವು ಬಿಡುವುದಿಲ್ಲ. ಹಾಸನ ಲೋಕಸಭಾ ಕ್ಷೇತ್ರದಿಂದ ಮತ್ತೆ ಪ್ರಜ್ವಲ್‌ ರೇವಣ್ಣ ಅವರೇ ಸ್ಪರ್ಧೆ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...