ನೈಸ್ ಹಗರಣದ ದಾಖಲೆ ದೆಹಲಿಯಲ್ಲಿ ಬಿಡುಗಡೆ ಮಾಡುವೆ: ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ

Date:

  • ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ಎಚ್‌ಡಿಕೆ ಆರೋಪ
  • ‘ವರ್ಗಾವಣೆ ದಂಧೆಯಲ್ಲಿ ಒಂದು ಸಾವಿರ ಕೋಟಿ ರೂ. ಕಲೆಕ್ಟ್‌’

ನೈಸ್ ಹಗರಣದ ದಾಖಲೆಯನ್ನು ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ. ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆಯಲಾಗಿದೆ. ಆ ಎಲ್ಲ ದಾಖಲೆ ಸಂಗ್ರಹ ಮಾಡಿದ್ದೇನೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ನೈಸ್‌ ಅಕ್ರಮ ವಿಚಾರವಾಗಿ ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಮಾಡುತ್ತೇನೆ. ನಾನು ಅವರಿಗೆ ದಾಖಲೆ ಕೊಟ್ಟು, ರೈತರಿಗೆ ನ್ಯಾಯ ಕೊಡಿಸುತ್ತೇನೆ” ಎಂದರು.

“ವರ್ಗಾವಣೆ ದಂಧೆಯಲ್ಲಿ ಒಂದು ಸಾವಿರ ಕೋಟಿಗಿಂತ ಅಧಿಕ ಹಣ ಸಂಗ್ರಹ ಮಾಡಿದ್ದಾರೆ. ಒಂದೊಂದು ಪೋಸ್ಟ್​​ಗೆ ಮೂರು ನಾಲ್ಕು ಜನಕ್ಕೆ ಲೆಟರ್ ಕೊಟ್ಟಿದ್ದಾರೆ. ಈ ಸರ್ಕಾರದ ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಮುಖ್ಯಮಂತ್ರಿಯಾಗಿದ್ದಾಗ ಏನು ಸಲಹೆ ಕೊಡುತ್ತಿದ್ದೆ ಎಂಬುದನ್ನು ಗೃಹಸಚಿವ ಪರಮೇಶ್ವರ್‌ ಹೇಳಲಿ. ಬಿಡಿಎ, ಪೊಲೀಸ್, ಅಧಿಕಾರಿಗಳ ವರ್ಗಾವಣೆಯಲ್ಲಿ ನಾನು ಯಾವುದಕ್ಕೆ ಹಸ್ತಕ್ಷೇಪ ಮಾಡಿದ್ದೇನೆ. ಏನೆಲ್ಲ ಆಯ್ತು ಅಂತ ನನಗೂ ಗೊತ್ತಿದೆ” ಎಂದು ತಿರುಗೇಟು ನೀಡಿದರು.

“ದುಡ್ಡಿಲ್ಲ ದುಡ್ಡಿಲ್ಲ ಅಂತ ಈ ಸರ್ಕಾರ ಹೇಳುತ್ತಿದೆ. ಯಾಕೆ ದುಡ್ಡಿಲ್ಲ? ಟ್ಯಾಕ್ಸ್ ಸಾಕಷ್ಟು ವಸೂಲಿ ಆಗಿದೆ. ಅಷ್ಟು ಹಣ ಇದ್ದರೂ ದುಡ್ಡಿಲ್ಲ ದುಡ್ಡಿಲ್ಲ ಅಂತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲುಷಿತ ನೀರು ಸೇವನೆ | ಕವಾಡಿಗರಹಟ್ಟಿಗೆ ದಿನೇಶ್‌ ಗುಂಡೂರಾವ್ ಭೇಟಿ, ಮೃತ ಕುಟುಂಬಗಳಿಗೆ ಸಾಂತ್ವನ

ಕಾಂಗ್ರೆಸ್ ಶಾಸಕ ಟಿ ಬಿ ಜಯಚಂದ್ರ ಬೆದರಿಕೆ ಕರೆ ವಿಚಾರವಾಗಿ ಪ್ರತಿಕ್ರಿಯಿಸಿ, “ನಿಮಗೆ ಯಾರು ಬೆದರಿಕೆ ಕರೆ ಮಾಡಿದ ರೈತರು ಯಾರು ಎಂಬುದು ಬಹಿರಂಗಪಡಿಸಲಿ” ಎಂದು ಹೇಳಿದರು.

“ಈ ಸರ್ಕಾರಕ್ಕೆ ಗ್ಯಾರಂಟಿ ವಿಚಾರ ಬಿಟ್ಟರೆ ಯಾವ ಅಭಿವೃದ್ಧಿ ವಿಚಾರವಿಲ್ಲ. ಟೋಪಿ ಹಾಕೋಕೆ ಒಂದು ಇತಿಮಿತಿ ಇದೆ. ಕಿವಿಗೆ ಹೂ ಇಟ್ಟುಕೊಂಡು ಜನರಿಗೆ ಟೋಪಿ ಹಾಕಲು ಹೊರಟ್ಟಿದ್ದೀರಾ? ಜನರ ತಲೆ ಮೇಲೆ ಹೂವಿನ ಕುಂಡ ಇಟ್ಟಿದ್ದೀರಿ” ಎಂದು ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದರು.

ಹಿಟ್ ಆ್ಯಂಡ್​ ರನ್ ವ್ಯಕ್ತಿ ನಾನಲ್ಲ

“ನಾನು ಕೆಲವು ವಿಚಾರ ಪ್ರಸ್ತಾಪ ಮಾಡುವುದು ಹುಡುಗಾಟಕ್ಕೆ ಅಲ್ಲ. ನಾನು ಹಿಟ್ ಆ್ಯಂಡ್​ ರನ್ ಜಾಯಮಾನದ ವ್ಯಕ್ತಿಯಲ್ಲ. ಹಿಟ್ ಆ್ಯಂಡ್​ ರನ್ ಇದ್ದರೆ ಅದು ಕಾಂಗ್ರೆಸ್. ಹಿಂದೆ ನೀವು ಸಾಕಷ್ಟು ಆರೋಪ ಮಾಡಿದ್ದೀರಿ. ಆದರೆ ಒಂದಾದರೂ ದಾಖಲೆ ಬಿಡುಗಡೆ ಮಾಡಿದ್ದೀರಾ? ನಿಮ್ಮದೆ ಸರ್ಕಾರ‌ ಇದೆ ದಾಖಲೆ ಯಾಕೆ ಬಿಡುಗಡೆ ಮಾಡಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...