ಕಲಬುರಗಿ | ಅಪ್ರಾಪ್ತ ಬಾಲಕಿಯ ಕತ್ತು ಕೊಯ್ದು ಪರಾರಿಯಾದ ಬಾಲಕರು

Date:

ಸಿನಿಮೀಯ ರೀತಿಯಲ್ಲಿ ಇಬ್ಬರು ಬಾಲಕರು ಅಪ್ರಾಪ್ತ ಬಾಲಕಿಯನ್ನು ಬಸ್ಸಿನಿಂದ ಕೆಳಗಿಳಿಸಿ ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿರುವ ಘಟನೆ ಕಲಬುರಗಿ ಹೊರವಲಯದ ಅಟ್ಟೂರ್ ಕ್ರಾಸ್ ಹತ್ತಿರ ನಡೆದಿದೆ. ‌

ಬೆಳಮಗಿ ಗ್ರಾಮದಿಂದ ವಿ.ಕೆ. ಸಲಗರ್ ಗ್ರಾಮಗಳ ಮಧ್ಯೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಚನ್ನವೀರ ಮತ್ತು ಆತನ ಸ್ನೇಹಿತ ಇಬ್ಬರು ಸೇರಿ ಕೃತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದಾರೆ.

ಎಸ್‌ಎಸ್‌ಎಲ್‌ಸಿ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದು, ಪ್ರೀತಿ ಮಾಡಲು ನಿರಾಕರಿಸಿದ್ದೇ ಕಾರಣ ಎನ್ನಲಾಗುತ್ತಿದೆ.

ಎಂದಿನಂತೆ ಬಾಲಕಿ ಶಾಲೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಳು, ಅಟ್ಟೂರ್‌ ಕ್ರಾಸ್‌ ಬಳಿ ಬೈಕ್‌ನಲ್ಲಿ ಹಿಂಬಾಲಿಸಿದ ಬಾಲಕರು ಬಸ್‌ಗೆ ಅಡ್ಡಗಟ್ಟಿ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ ಕೆಳಗಿಳಿಸಿ, ನಂತರ ಕತ್ತು ಕೊಯ್ದು ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ನರೋಣಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಸ್ಥಿತಿಯಲ್ಲಿರುವ ಬಾಲಕಿಯನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...