ಕಲಬುರಗಿ | ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ; ರೆಡ್‌ ಅಲರ್ಟ್‌ ಘೋಷಣೆ

Date:

ಜೂನ್ 08 ರಿಂದ 11 ರ ವರೆಗೆ ಕಲಬುರಗಿ ಜಿಲ್ಲೆಗೆ (ಈಶಾನ್ಯ ಕರ್ನಾಟಕ ಭಾಗಕ್ಕೆ) ಭಾರತೀಯ ಹವಾಮಾನ ಇಲಾಖೆಯಿಂದ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿರುವ ಕಾರಣ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

ಭಾರತೀಯ ವಾಯುಮಾನ ಇಲಾಖೆ ಜೂ.9 ರಿಂದ ಜೂ.11ರವರೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇದಲ್ಲದೇ ಹವಾಮಾನದ ಪರಿಸ್ಥಿತಿಗೆ ಅನುಗುಣವಾಗಿ ಎಚ್ಚರಿಕೆಯಲ್ಲಿ ಬದಲಾವಣೆಯಾಗುತ್ತದೆ. ಹಾಗಾಗಿ, ರೈತರು ಹಾಗೂ ಸಾರ್ವಜನಿಕರು ಬದಲಾಗುತ್ತಿರುವ ಎಚ್ಚರಿಕೆಯನ್ನು ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಳೆಯಿಂದ ಹಾನಿಯಾಗುವ ಸಾಧ್ಯತೆಗಳು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯವಾಗಿ ಇಳಿಜಾರು ಪ್ರದೇಶಗಳಲ್ಲಿ ಹೆಚ್ಚು ನೀರು ತುಂಬಿಕೊಳ್ಳುವ, ಕೆಳ ಹಂತದ ರಸ್ತೆಗಳು ನೀರಿನಿಂದ ಮುಳುಗುವ ಸಾಧ್ಯತೆ ಇರುತ್ತದೆ, ರೈಲ್ವೆ, ರಸ್ತೆಯ ಕೆಳಸೇತುವೆ ಮುಳುಗಡೆಯಾಗಿ ರಸ್ತೆ ಬಂದಾಗುವ ಸಾಧ್ಯತೆ ಇರುತ್ತದೆ. ಅತೀ ಹೆಚ್ಚಿನ ಮಳೆ ಇರುವುದರಿಂದ ವಾಹನ ಸವಾರರಿಗೆ ರಸ್ತೆ ಕಾಣದೇ ಇರುವ ಸಾಧ್ಯತೆ ಇರುತ್ತದೆ. ಹೆಚ್ಚಿನ ಮಳೆಯಿಂದ ರಸ್ತೆಗಳು ನೀರಿನಿಂದ ತುಂಬಿಕೊಳ್ಳುವ ಕಾರಣ ಕಲಬುರಗಿ ನಗರ, ಪಟ್ಟಣ ಪ್ರದೇಶದಲ್ಲಿ ವಾಹನ ದಟ್ಟಣೆಯಾಗುವ ಸಾಧ್ಯತೆ ಇರುತ್ತದೆ. ಮಳೆ ನೀರಿನಿಂದ ರಸ್ತೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ಅಪಾಯದಲ್ಲಿರುವ ಹಳೆ ಕಟ್ಟಡಗಳು ಕುಸಿಯುವ ಸಾಧ್ಯತೆಯಿರುತ್ತದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂ ಕುಸಿತ ಹಾಗೂ ಕೆಸರುಗದ್ದೆಯಾಗುವ ಸಾಧ್ಯತೆ ಇರುತ್ತದೆ. ಹೆಚ್ಚಿನ ಮಳೆಯಿಂದ ನದಿಯ ಪ್ರವಾಹ ಅಗುವ ಸಾಧ್ಯತೆ ಇರುತ್ತದೆ. ಗುಡುಗು, ಮಿಂಚು ಸಹಿತ ಸಿಡಿಲು ಬೀಳುವ ಸಾಧ್ಯತೆ ಇರುತ್ತದೆ.

ಸಾರ್ವಜನಿಕರು ತೆಗೆದುಕೂಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳು:

ವಾಹನ ಸವಾರರು ಅತೀ ಹೆಚ್ಚು ನೀರು ಬರುವ ಪ್ರದೇಶದ ಕಡೆಗೆ ಅಥವಾ ನದಿ ದಡಗಳಲ್ಲಿ ಸಂಚರಿಸಬಾರದು. ಸಂಚಾರಿ ನಿಯಮಗಳನ್ನು ಅನುಸರಿಸುವುದು. ಹೆಚ್ಚು ನೀರು ತುಂಬಿಕೊಳ್ಳುವ, ಕೆಳ ಹಂತದ ಹಾಗೂ ಇಳಿಜಾರು ಪ್ರದೇಶದಲ್ಲಿ ವಾಸಿಸುವವರು ಸುರಕ್ಷತೆ ಸ್ಥಳಗಳಿಗೆ ಸ್ಥಳಾಂತರಗೊಳ್ಳುವುದು. ಹಳೆಯ ಕಟ್ಟಡ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸಬಾರದು. ಸಿಡಿಲು ಬೀಳುವ ಸಂಭವವಿರುವುದರಿಂದ ದನಕರಗಳನ್ನು ಸುರಕ್ಷಿತ ಜಾಗಗಳಲ್ಲಿ ಇರಿಸುವುದು ಹಾಗೂ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಬಾರದು.

“ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದ ಹಾಗೆ ಮುನ್ನಚ್ಚರಕೆವಹಿಸುವುದು. ನಿರಂತರ ಹೆಚ್ಚಿನ ಮಳೆಯಿಂದ ಅಪಾಯದಲ್ಲಿರುವ ಹಳೆಯ ಮನೆ ಗೋಡೆಗಳು ಹಾಗೂ ಇತರೆ ಕಟ್ಟಡಗಳು ಕುಸಿಯುವ ಸಾಧ್ಯತೆ ಇರುತ್ತದೆ. ಆದುದರಿಂದ ಸಾರ್ವಜನಿಕರು ಸುರಕ್ಷತೆಯ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳುವುದು. ತೋಟಗಾರಿಕೆ ಬೆಳೆಗಳು ಹಾಗೂ ಇತರೆ ಬೆಳೆಗಳು ಹೆಚ್ಚಿನ ಮಳೆಯಿಂದ ನೀರು ನಿಂತು ಬೆಳೆ ಹಾಳಾಗುವ ಸಾಧ್ಯತೆ ಇರುತ್ತದೆ. ಬಸಿಗಾಲುವೆಗಳ ಮೂಲಕ ನೀರನ್ನು ಜಮೀನುಗಳಿಂದ ಹೊರಹಾಕಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...