ಬೆಂಗಳೂರಿನಲ್ಲಿ ಧಾರಕಾರ ಮಳೆ | ಸುರಂಗ ಮಾರ್ಗದಡಿ ಸಿಲುಕಿದ್ದ ಮಹಿಳೆ ದುರ್ಮರಣ

Date:

ಸೋಮವಾರ ದಿಢೀರನೆ ಸುರಿದ ಆಲಿಕಲ್ಲು ಮಳೆಯಿಂದಾಗಿ ಕೆ ಆರ್ ವೃತ್ತದ ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಯುವತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತ ಭಾನುರೇಖಾ ಸೇರಿದಂತೆ ಆರು ಮಂದಿ ಕೆ ಆರ್ ವೃತ್ತದ ಬಳಿಯ ಅಂಡರ್‍‌ ಪಾಸ್‌ನಲ್ಲಿ ಕಾರಿನಲ್ಲಿ ಸಿಲುಕಿದ್ದರು. ಇವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಭಾನುರೇಖಾ ಜೀವನ್ಮರಣ ಹೋರಾಟ ನಡೆಸಿ, ಕೊನೆಯುಸಿರೆಳೆದಿದ್ದಾರೆ.

ವಿಜಯವಾಡದಿಂದ ಬೆಂಗಳೂರಿಗೆ ಈ ಕುಟುಂಬ ಕಾರಿನಲ್ಲಿ ಬಂದಿತ್ತು. ದಟ್ಟವಾಗಿ ಮೋಡ ಕವಿದು ಕಗ್ಗತ್ತಲು ಇದ್ದ ಕಾರಣ ಸುರಂಗ ಮಾರ್ಗದಲ್ಲಿ ನೀರಿನಮಟ್ಟ ಚಾಲಕನ ಅರಿವಿಗೆ ಬಂದಿರಲಿಲ್ಲ. ಕಾರು ಸುರಂಗ ಮಾರ್ಗದಲ್ಲಿ ದಾಟಬಹುದೆಂದು ಮುಂದಕ್ಕೆ ಸಾಗಿದ್ದರು. ಆಟೊ ಚಾಲಕರೊಬ್ಬರು ಕಾರು ಸುರಂಗ ಮಾರ್ಗದ ಮಧ್ಯದಲ್ಲಿ ಸಿಲುಕಿರುವುದನ್ನು ಗಮನಿಸಿ ಸ್ಥಳೀಯರಿಗೆ ಮಾಹಿತಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಿನಲ್ಲಿ ಸಿಲುಕಿಕೊಂಡವರನ್ನು ಸೀರೆ ಮತ್ತು ಏಣಿ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಅದಾದ ನಂತರ ಅಸ್ವಸ್ಥಗೊಂಡಿದ್ದ ಭಾನು ರೇಖಾರನ್ನು ಸೇಂಟ್ ಮಾರ್ಥಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಯ ಸಿಬ್ಬಂದಿ ಅರ್ಧಗಂಟೆ ಆದರೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಮೃತ ಯುವತಿಗೆ 5ಲಕ್ಷ ಪರಿಹಾರ ಘೋಷಣೆ

ಘಟನೆಯ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂತಹ ದುರ್ಘಟನೆ ನಡೆಯಬಾರದಿತ್ತು. ಮೃತ ಯುವತಿ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡುತ್ತೇವೆ. ಹಾಗೆಯೇ ಕುಟುಂಬಸ್ಥರಿಗೆ ಚಿಕಿತ್ಸೆ ಅವಶ್ಯಕತೆ ಇದ್ದರೆ, ಅದರ ವೆಚ್ಚ ಸರ್ಕಾರವೇ ಭರಿಸಲಿದೆ” ಎಂದರು.

ಮುಂದುವರೆದು, ಮಾತನಾಡಿದ ಅವರು, ಭಾನುರೇಖಾ ಬೆಂಗಳೂರಿನ ಇನ್ಫೋಸಿಸ್ ಉದ್ಯಮಿಯಾಗಿದ್ದರು. ಬೇಸಿಗೆ ರಜೆಯಿದ್ದ ಕಾರಣ ವಿಜಯವಾಡದಿಂದ ಅವರ ಕುಟುಂಬಸ್ಥರು ನಗರ ಸಂಚಾರಕ್ಕೆ ಬಂದಿದ್ದರು. ಈ ವೇಳೆ ಈ ಪ್ರಕರಣ ನಡೆದಿದೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ; ಸೋಮವಾರವೂ ಮಳೆಯಾಗುವ ಸಾಧ್ಯತೆ

ಮಳೆ ಬಂದ ವೇಳೆ ಅಂಡರ್‍‌ಪಾಸ್‌ನಲ್ಲಿ ಯಾರು ಪ್ರಯಾಣಿಸದಂತೆ ಬ್ಯಾರಿಕೇಡ್ ಹಾಕಿದ್ದರು. ಆದರೂ, ವಾಹನ ಚಾಲಕ ಸುರಂಗ ಮಾರ್ಗದಲ್ಲಿ ಕಾರು ಚಲಾಯಿಸಿದ ಕಾರಣ ಕಾರು ನೀರಿನಲ್ಲಿ ಮುಳುಗುವಂತಾಯಿತು. ಘಟನಾ ಸ್ಥಳದಲ್ಲೇ ಭಾನುರೇಖಾ ಹೆಚ್ಚಿನ ಕೊಳಚೆ ನೀರನ್ನು ಕುಡಿದು, ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ಬರುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎಂದರು.

ಒಂದು ವೇಳೆ ಆಸ್ಪತ್ರೆಯ ಸಿಬ್ಬಂದಿ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡಿದ್ದರೆ, ಆ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಉಳಿದಂತೆ ಮಳೆ ಸಮಸ್ಯೆ ಪರಿಹಾರಕ್ಕೆ ರಾಜಕಾಲುವೆ ತೆರವು, ಚರಂಡಿಗಳ ಹೂಳು ತೆಗೆಯುವಿಕೆ ವಿಚಾರವಾಗಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದುವರೆಯುವುದಾಗಿ” ಹೇಳಿದರು.

ಉಳಿದಂತೆ, ಮಳೆಯ ಬಗ್ಗೆ ಮಾಹಿತಿ ಪಡೆದಿರುವ ಸಿಎಂ ಸಿದ್ದರಾಮಯ್ಯ , ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...