ಭಾರೀ ಮಳೆ | ಈ ವರ್ಷವೂ ಮುಂದುವರೆದ ಗುಡ್ಡಕುಸಿತ; ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಸಿದ ಗುಡ್ಡ

Date:

ಕಳೆದ ವರ್ಷ ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಗುಡ್ಡಕುಸಿದು, 9 ಮಂದಿ ಸಾವನ್ನಪ್ಪಿದ್ದರು. ಇಬ್ಬರೂ ನಾಪತ್ತೆಯಾಗಿದ್ದರು. ಆ ಘಟನೆ ರಾಷ್ಟ್ರಾದ್ಯಂತ ಸುದ್ದಿಯಾಗಿತ್ತು. ಸ್ಥಳೀಯರಲ್ಲಿ ಆತಂಕ, ಭಯ ಆವರಿಸಿತ್ತು. ಆ ಘಟನೆಯ ಆತಂಕ ಇನ್ನೂ ಮಾಸಿಲ್ಲ. ಇದೀಗ, ಮುಂಗಾರು ಪೂರ್ವ ಮಳೆಗೆ ಉತ್ತರ ಕನ್ನಡ ಜಿಲ್ಲೆಯಲ್ಲೇ ಮತ್ತೊಂದು ಗುಡ್ಡಕುಸಿತ ಸಂಭವಿಸಿದೆ. ಜಿಲ್ಲೆಯನ್ನು ಮತ್ತೆ ಆತಂಕಕ್ಕೆ ದೂಡಿದೆ.

ಭಾನುವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ, ಉತ್ತರ ಕನ್ನಡ ಜಿಲ್ಲೆಯ ದೇವಿಮನೆ ಪ್ರದೇಶದಲ್ಲಿ ಹಾದುಹೋಗಿರುವ ಶಿರಶಿ-ಕುಮಟಾ ರಾಷ್ಟ್ರೀಯ ಹೆದ್ದಾರಿ 766Eಯಲ್ಲಿ ಗುಡ್ಡ ಕುಸಿದುಬಿದ್ದಿದೆ ರಸ್ತೆ ಮೇಲೆ ಬಂಡೆಕಲ್ಲುಗಳು, ಮಣ್ಣಿನ ರಾಶಿ ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಷ್ಟ್ರೀಯ ಹೆದ್ದಾರಿ 766Eಯಲ್ಲಿ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಕಾಮಗಾರಿಗಾಗಿ ರಸ್ತೆ ಬದಿಯ ಗುಡ್ಡವನ್ನು ಕೊರೆಯಲಾಗಿತ್ತು. ಆದರೆ, ಅವೈಜ್ಞಾನಿಕವಾಗಿ ಗುಡ್ಡ ಕೊರೆದಿದ್ದ ಪರಿಣಾಮ, ಭಾರೀ ಮಳೆಗೆ ಗುಡ್ಡ ಕುಸಿದಿದೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...