ಮಲೆನಾಡು-ಕರಾವಳಿಯಲ್ಲಿ ಮಳೆ ಅಬ್ಬರ; ಭೋರ್ಗರೆಯುತ್ತಿವೆ ಜಲಪಾತಗಳು

Date:

ಕರ್ನಾಟಕದ ಮಲೆನಾಡು-ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಲಪಾತಗಳು ಮಳೆ ನೀರಿನಿಂದ ಭೋರ್ಗರೆಯುತ್ತಿವೆ. ಈ ಭಾಗದ ಹಲವಾರು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಮಲೆನಾಡು ಭಾಗವಾದ ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಧಾರಕಾರ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರದಿಂದ ತುಂಗಾ ನದಿಗೆ ನೀರು ಹರಿದು ಬರುತ್ತಿದ್ದು, ನದಿ ತುಂಬಿ ಹರಿಯುತ್ತಿದೆ. ನದಿ ದಂಡೆಯ ಕೃಷಿ ಭೂಮಿ, ತೋಟಗಳು ಜಲಾವೃತವಾಗಿವೆ. ಗಾಜನೂರು ಬಳಿಯ ತುಂಗಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದ 22 ಕ್ರಸ್ಟ್‌ಗೇಟ್‌ಗಳ ಪೈಕಿ 14 ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ.

ಮಳೆಯ ಅಬ್ಬರಕ್ಕೆ ಜಿಲ್ಲೆಯ ಕೊಟ್ಟಿಗೆಹಾರ ಬಳಿಯ ಚಾರ್ಮಾಡಿ ಘಾಟ್‌ನಲ್ಲಿ ಇತ್ತೀಚೆಗಷ್ಟೇ ಕಾಮಗಾರಿ ನಡೆದಿದ್ದ ರಸ್ತೆ ಬಿರುಕು ಬಿಟ್ಟಿದೆ. ರಸ್ತೆ ಕುಸಿಯುವ ಅಪಾಯ ಎದುರಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ನಡುವಿನ ಸಂಪರ್ಕಕೊಂಡಿ ಕಳಚಿದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆ1

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕೆಆರ್‌ಎಸ್‌ ಜಲಾಶಯಕ್ಕೆ 12 ಅಡಿ ನೀರು ಬಂದಿದೆ. ವಾರದ ಹಿಂದೆ, ಜಲಾಶಯದಲ್ಲಿ 87 ಅಡಿಯಿದ್ದ ನೀರಿನ ಮಟ್ಟ 99.30 ಅಡಿಗೆ ಏರಿಕೆಯಾಗಿದೆ.

ಇನ್ನು, ಕರಾವಳಿ ಪ್ರದೇಶದಲ್ಲಿಯೂ ಮಳೆ ಅಬ್ಬರಿಸುತ್ತಿದ್ದು, ಗಾಳಿಯೂ ವೇಗವಾಗಿ ಬೀಸುತ್ತಿದೆ. ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ಸುಂಟರಗಾಳಿ ಎದ್ದಿದ್ದು, ಮರಗಳು ಉರುಳಿ ಬಿದ್ದಿವೆ. ಮನೆಗಳಿಗೂ ಹಾನಿಯಾಗಿದೆ. ಗ್ರಾಮದ ಜನರು ಆತಂಕಗೊಂಡಿದ್ದಾರೆ. ಗ್ರಾಮಕ್ಕೆ ಅಮಾವಾಸ್ಯೆ ಬೈಲು ಗ್ರಾಮ ಪಂಚಾಯತಿ ಪಿಡಿಒ ಭೇಟಿ ನೀಡಿ ಹಾನಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ ಇರುವ ಕಮಲಶಿಲೆಯಲ್ಲಿಯೂ ಹೆಚ್ಚಿನ ಮಳೆಯಾಗಿದ್ದು, ಕುಬ್ಜ ನದಿ ತುಂಬಿ ಹರಿಯುತ್ತಿದೆ. ದೇವಾಲಯಕ್ಕೂ ನೀರು ನುಗ್ಗಿದೆ.

ಮಳೆ 14

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಗಂಗಾವಳಿ ನದಿ ಕೂಡ ತುಂಬಿ ಹರಿಯುತ್ತಿದೆ. ತಾಲೂಕಿನ ಶಿರಲೆ ಜಲಪಾತ, ಕಾನೂರು ಜಲಪಾತ​​​, ಕುಳಿ ಮಾಗೋಡು ಜಲಪಾತಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಕಣಕುಂಬಿ, ಜಾಂಬೋಟಿ, ನಾಗರಗಾಳಿ, ಭೀಮಗಡ ಹಾಗೂ ಲೋಂಡಾ ಅರಣ್ಯ ಪ್ರದೇಶದಲ್ಲಿ ಧಾರವಾರವಾಗಿ ಮಳೆ ಸುರಿದಿದೆ ಮಲಪ್ರಭಾ, ಮಹಾದಾಯಿ ಮತ್ತು ಪಾಂಡರಿ ನದಿಗಳು ಉಕ್ಕಿ ಹರಿಯುತ್ತಿವೆ.

ರಾಜ್ಯದಲ್ಲಿ ಗುರುವಾರವೂ ಭಾರೀ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...