ತುಮಕೂರಿನಲ್ಲಿ ಭರ್ಜರಿ ಮಳೆ; ಪಾಲಿಕೆ ನಿರ್ಲಕ್ಷ್ಯದಿಂದ ಸಂಚಾರಕ್ಕೆ ತೊಂದರೆ

Date:

ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನಕ್ಕೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಿರಳಾರಾಗಿದ್ದರು. ತುಮಕೂರಿನಲ್ಲಿ ಮಳೆ ಮುಂದುವರೆದಿದ್ದು ಶುಕ್ರವಾರ ಸಂಜೆಯೂ ಭರ್ಜರಿ ಮಳೆಯಾಗಿದೆ.

ಮಳೆಯ ಸಂಭ್ರಮ ಒಂದೆಡೆಯಾದರೆ, ತುಮಕೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಪಾದಚಾರಿಗಳು, ವಾಹನ ಸವಾರರು ಸಂಚರಿಸಲು ಪರಡುವಂತಾಗಿದೆ. ರಾಜಗಾಲುವೆ ಒತ್ತುವರಿ ತೆರವಾಗದೆ ಹಲವು ಕಡೆ ಮಳೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಹೀಗಾಗಿ ಸಂಚಾರಕ್ಕೆ ಅಡ್ಡಿಯಾಗಿದೆ. ತುಮಕೂರು ನಗರದ ಸರ್ವೋದಯ ಪಿಯು ಕಾಲೇಜು ಮುಂಭಾಗ ರಸ್ತೆಯಲ್ಲಿ ನೀರು ತುಂಬಿ ಹರಿದಿದ್ದರಿಂದ ವಾಹನ ಸವಾರು ಸಂಚರಿಸಲು ಪರದಾಡಿದ ದೃಶ್ಯಗಳು ಕಂಡುಬಂದವು.

ಭಾರೀ ಮಳೆ ತುಮಕೂರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಳೆ ಅವಾಂತರಕ್ಕೆ ನಗರದ ಜನತೆ ತತ್ತರಿಸಿ ಹೋಗಿದ್ದು, ಮಳೆನೀರು ಸರಾಗವಾಗಿ ಹರಿಯಲು ಮಹಾನಗರಪಾಲಿಕೆ ಸಮರ್ಪಕ ವ್ಯವಸ್ಥೆ ಮಾಡದೇ ನಿಲ್ಯಕ್ಷದಿಂದ ಇರುವುದೇ ಅನಾಹುತಕ್ಕೆ ಕಾರಣವಾಗಿದೆ” ಎನ್ನುತ್ತಾರೆ ಮಹಾನಗರಪಾಲಿಕೆ ಮಾಜಿ ಸದಸ್ಯ ಕೆ ಪಿ ಮಹೇಶ್.

“ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ಅಂತರಸನಹಳ್ಳಿ – ಯಲ್ಲಾಪುರದ ಮಧ್ಯದ ರಾಷ್ಟ್ರೀಯ ಹೆದ್ದಾರಿಯ ಒವರ್ ಬ್ರಿಡ್ಜ್ ಕೆಳಗೆ ನೀರು ಸಂಗ್ರಹವಾಗಿ ಸ್ಥಳೀಯರಿಗೆ ಸಂಚರಿಸಲು ತೊಂದರೆಯಾಗಿದೆ. ಅಂತೆಯೇ ನಗರದ ಅಮಾನಿಕೆರೆ, ಕೋತಿತೋಪು, ಮಹಾತ್ಮಗಾಂಧಿ ರಸ್ತೆ, ಅಶೋಕ ರಸ್ತೆ, ಗುಬ್ಬಿ ಗೇಟ್, ಶೆಟ್ಟಿಹಳ್ಳಿ-ಕುಣಿಗಲ್ ರಸ್ತೆ, ರಿಂಗ್ ರಸ್ತೆಯ ಅಂಡರ್ ಪಾಸ್‌ಗಳಲ್ಲಿ ಮಳೆ ನೀರು ಭಾರೀ ಪ್ರಮಾಣದಲ್ಲಿ ತುಂಬಿದ್ದು, ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದಲೇ ಅನಾಹುತಗಳಿಗೆ ಕಾರಣವಾಗಿದೆ. ರಾಜಗಾಲುವೆ ಮತ್ತು ಚರಂಡಿಗಳಲ್ಲಿರುವ ಹೂಳು ತೆಗೆಯದ ಮಹಾನಗರಪಾಲಿಕೆಯ ಬೇಜಾವಬ್ದಾರಿಯೇ ಇದ್ದಕ್ಕೆ ಕಾರಣ ಎನ್ನುತ್ತಾರೆ” ಮಹೇಶ್.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿತ್ತನೆ ಬೀಜ, ರಸಗೊಬ್ಬರಗಳ ದರ ಇಳಿಸುವಂತೆ ಕೆಪಿಆರ್‌ಎಸ್‌ ಆಗ್ರಹ

ತುಮಕೂರು ಮಹಾನಗರ ಪಾಲಿಕೆ ಕೂಡಲೇ ಈ ಸಮಸ್ಯೆ ಪರಿಹರಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...