ತುಮಕೂರು | ಮಾಗಡಿಗೆ ಹೇಮಾವತಿ ನಾಲೆ ನೀರು; ಯೋಜನೆ ವಿರುದ್ಧ ರೈತರ ಪ್ರತಿಭಟನೆ

Date:

ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನಾಲೆಯ ನೀರನ್ನು ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್ ಮೂಲಕ ಮಾಗಡಿಗೂ ತಿರುಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಕಾಮಗಾರಿಯನ್ನೂ ಆರಂಭಿಸಿದೆ. ಯೋಜನೆಯನ್ನು ವಿರೋಧಿಸಿ ತುಮಕೂರು ಜಿಲ್ಲೆಯ ರೈತರು ಪ್ರತಿಭಟನೆ ನಡೆಸಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಡಿ.ರಾಂಪುರ ಗ್ರಾಮದ ಬಳಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ನಾಲೆಗೆ ಮಣ್ಣು ಹಾಕಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, “ಹೇಮಾವತಿ ನೀರಿಗಾಗಿ ಈ ಹಿಂದೆ ಹೋರಾಟಗಳು ನಡೆದಿದ್ದವು. ನಿರಂತಕ ಹೋರಾಟದ ಫಲವಾಗಿ ಜಿಲ್ಲೆಗೆ ಹೇಮಾವತಿ ಎಡದಂಡೆ ನಾಲೆಯ ಮೂಲಕ 24.5 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಜಿಲ್ಲೆ ನೀರು ಪಡೆಯುತ್ತಿದೆ. ಆದರೆ, ಈಗ ನಮ್ಮ ನೀರನ್ನು ಕಿತ್ತುಕೊಳ್ಳುವ ಯೋಜನೆ ರೂಪಿಸಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮ್ಮ ಅಧಿಕಾರದ ದರ್ಪ ಮೆರೆದಿದ್ದಾರೆ. ಜಿಲ್ಲೆಯಲ್ಲಿನ ಇಬ್ಬರು ಸಚಿವರು ಯೋಜನೆಯ ವಿಚಾರದಲ್ಲಿ ಮೌನವಾಗಿದ್ದಾರೆ. ಯೋಜನೆಯನ್ನು ಕೈಬಿಟ್ಟು, ಕಾಮಗಾರಿ ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, “ಜನ ತೀರ್ಮಾನ ಮಾಡಿದರೆ ಸರ್ಕಾರವೇ ಉರುಳುತ್ತದೆ. ಜೂನ್ 5ರೊಳಗೆ ಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಿದ್ದೇವೆ. ಈ ಮಧ್ಯೆ ಎಲ್ಲಿಯೇ ಕೆಲಸ ನಡೆದರೂ ಯಂತ್ರಗಳನ್ನು ತಡೆದು ಕೆಲಸ ನಿಲ್ಲಿಸಬೇಕು. ನೀರಿನ ಅವಶ್ಯಕತೆ ಅರಿತವರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಗೆ ಬಂದಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಏಕಪಕ್ಷೀಯ ನಿರ್ಧಾರಕ್ಕೆ ಬುದ್ದಿ ಕಳಿಸಬೇಕಿದೆ. ಜಿಲ್ಲೆಯ ಕಾಂಗ್ರೆಸ್ ನಾಯಕರನ್ನು ಹೆದರಿಸಿ, ಯೋಜನೆ ಆರಂಭಿಸಿದ್ದಾರೆ. ಅದೇ ದಿಟ್ಟತನವನ್ನು ಮೇಕೆದಾಟು ಯೋಜನೆಯಲ್ಲಿ ತೋರಿಸಬೇಕು” ಎಂದು ಸವಾಲು ಹಾಕಿದ್ದಾರೆ.

WhatsApp Image 2024 05 16 at 5.08.25 PM

ಶಾಸಕ ಬಿ.ಸುರೇಶ್ ಗೌಡ ಮಾತನಾಡಿ, “ಕ್ಯಾಬಿನೆಟ್ ಮೀಟಿಂಗ್ ನಲ್ಲಿ ತುಟಿ ಬಿಚ್ಚದ ಇಬ್ಬರು ಸಚಿವರಿಗೆ ಯಾವುದೇ ಇಚ್ಛಾಶಕ್ತಿ ಇಲ್ಲ. ಹಾಗೆಯೆ ಸಚಿವ ಸ್ಥಾನದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ. ಡಿಕೆಶಿ ಅವರಿಗೆ ಹೆದರುವ ಜಿಲ್ಲೆಯ ಕಾಂಗ್ರೆಸ್ ಮುಖಂಡರು ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ತೋರುತ್ತಿಲ್ಲ. ಡಿ.ಕೆ.ಸುರೇಶ್ ಹಾಗೂ ಡಾ.ರಂಗನಾಥ್ ಅವರ ಹಿತಾಸಕ್ತಿಗೆ ರೂಪಗೊಂಡ ಈ ಯೋಜನೆಗೆ ಈಗಾಗಲೇ 200 ಕೋಟಿ ಮಂಜೂರಾಗಿದೆ ಎನ್ನಲಾಗಿದೆ. ಮುಖ್ಯನಾಲೆ ಆಧುನೀಕರಣಕ್ಕೆ 700 ಕೋಟಿ ಬಳಸಿ ಸಿದ್ಧಗೊಂಡ ನಾಲೆಯಲ್ಲಿ ಕುಣಿಗಲ್ ಗೆ ನೀರು ತೆಗೆದುಕೊಂಡು ಹೋಗಲಿ. ಆದರೆ ವಾಮಮಾರ್ಗ ಅನುಸರಿಸಿ ಏಳೆಂಟು ತಾಲ್ಲೂಕು ರೈತರಿಗೆ ಅನ್ಯಾಯ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದ ಅವರು ಮೂರು ತಿಂಗಳ ಹಿಂದೆ ನಡೆದ ಕೆಡಿಪಿ ಸಭೆ ನಿರ್ಣಯಕ್ಕೆ ಬೆಲೆಯೇ ಇಲ್ಲವಾಗಿದೆ. ಈ ಧೋರಣೆಗೆ ಜಿಲ್ಲೆಯ ಎಲ್ಲಾ ಶಾಸಕರು ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತೇವೆ. ಐದು ಬಾರಿ ನಿರಂತರವಾಗಿ ಗೆದ್ದ ಗುಬ್ಬಿ ಶಾಸಕರು ಮೊದಲು ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ಶಾಸಕ ಜಿ. ಬಿ.ಜ್ಯೋತಿ ಗಣೇಶ್ ಮಾತನಾಡಿ, “ಈ ಹಿಂದೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಶ್ರೀರಂಗ ಯೋಜನೆ ಪೈಪ್ ಲೈನ್ ಕಾಮಗಾರಿ ಬಗ್ಗೆ ಕೂಲಂಕುಷ ಪರಿಶೀಲನೆ ನಡೆಸಿದ ಯುಡಿಯೂರಪ್ಪ ಅವರು ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಲಿಂಕ್ ಕೆನಾಲ್ ಯೋಜನೆ ರದ್ದುಗೊಳಿಸಿತ್ತು. ಮರಳಿ ಆರಂಭಿಸಿರುವ ಕಾಂಗ್ರೆಸ್ ಸರ್ಕಾರ ಒಬ್ಬ ಪ್ರಭಾವಿ ಆಣತಿಯಂತೆ ನಡೆದುಕೊಂಡಿದೆ. ಈ ನಿಟ್ಟಿನಲ್ಲಿ ರೈತರಿಗೆ ಅರಿವು ಮೂಡಿದೆ. ಆಕ್ರೋಶದ ಕಟ್ಟೆ ಒಡೆಯುವ ಮುನ್ನ ಯೋಜನೆ ಕೈಬಿಡಿ” ಎಂದು ಒತ್ತಾಯಿಸಿದರು.,

‘ಮಾಜಿ ಶಾಸಕ ಎಚ್.ನಿಂಗಪ್ಪ ಮಾತನಾಡಿ, “ನೀರಿಗಾಗಿ ಹೋರಾಟದಲ್ಲಿ ಜೈಲಿಗೆ ಹೋಗಲು ಸಿದ್ಧ. ಕುಣಿಗಲ್ ಭಾಗಕ್ಕೆ ಹಂಚಿಕೆಯಾದ 3 ಟಿಎಂಸಿ ನೀರು ಮುಖ್ಯ ನಾಲೆಯ ಮೂಲಕ ತೆಗೆದುಕೊಳ್ಳಲಿ. ಆದರೆ ಈ ಹೋರಾಟದ ಬಗ್ಗೆ ತಪ್ಪು ಕಲ್ಪನೆ ಅವರಲ್ಲಿದೆ. ಇದು ಬೇರೆ ಜಿಲ್ಲೆಗೆ ಮಾಗಡಿಗೆ ಹೇಮೆ ಹರಿಸುವ ಬಗ್ಗೆ ನಡೆದ ಯೋಜನೆಯ ವಿರೋಧದ ಹೋರಾಟ ಎಂಬುದು ಮನವರಿಕೆಯಾಗಬೇಕು” ಎಂದರು.

ಮಾಜಿ ಶಾಸಕ ಮಸಾಲ ಜಯರಾಮ್ ಮಾತನಾಡಿ, “ಹೇಮಾವತಿ ನೀರು ಹಂಚಿಕೆಗೆ ನೀರಿಲ್ಲ. ಹೇಗೆ ಮಾಗಡಿಗೆ ನೀರು ಕೊಂಡೊಯ್ಯುತ್ತಿರಿ. ನಮ್ಮ ಹಕ್ಕಿನ 24 ಟಿಎಂಸಿ ನೀರು ನಮಗೆ ಸಾಲದು. ಅದನ್ನು ಕಿತ್ತುಕೊಳ್ಳುವ ಹಕ್ಕು ನಿಮಗಿಲ್ಲ. ಎಲ್ಲಾ ಭಾಗ್ಯ ಕೊಟ್ಟ ಕಾಂಗ್ರೆಸ್ ಸರ್ಕಾರ ವಿಷದ ಭಾಗ್ಯ ಕೊಟ್ಟು ನಿಮ್ಮ ರೈತರಿಗೆ ವಿಷ ಕೊಟ್ಟು ಆಮೇಲೆ ನೀರು ತೆಗೆದುಕೊಂಡು ಹೋಗಲಿ” ಎಂದರು.

ಪ್ರತಿಭಟನಾ ಸಭೆಯಲ್ಲಿ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ, ದೊಡ್ಡಗುಣಿ ರೇಣುಕಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಮಠದ ಕಾರದ ಬಸವ ಶ್ರೀಗಳು, ಸಿದ್ದರಬೆಟ್ಟ ಶ್ರೀಗಳು, ಶಿವಗಂಗೆ ಮಹಾಲಕ್ಷ್ಮಿ ಪೀಠದ ಜ್ಞಾನನಂದಪುರಿ ಸ್ವಾಮೀಜಿ, ಮಾಜಿ ಶಾಸಕರಾದ ಸುಧಾಕರ್ ಲಾಲ್, ಎಂ.ಡಿ.ಲಕ್ಷ್ಮೀನಾರಾಯಣ್, ಮುಖಂಡರಾದ ಶಾಂತಕುಮಾರ್, ಅನಿಲ್ ಕುಮಾರ್, ಲೋಕೇಶ್ವರ, ಎಸ್.ಡಿ.ದಿಲೀಪ್ ಕುಮಾರ್, ಬಿ.ಎಸ್.ನಾಗರಾಜ್, ಅಂಜಿನಪ್ಪ, ಕಳ್ಳಿಪಾಳ್ಯ ಲೋಕೇಶ್, ಭೈರಪ್ಪ, ಪಂಚಾಕ್ಷರಿ, ರೈತ ಸಂಘದ ತಾಲೂಕು ಅಧ್ಯಕ್ಷ ವೆಂಕಟೇಗೌಡ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...