ಸರ್ಕಾರಗಳು ಬದಲಾದರೂ ಶಾಲೆಗಳು ಅಭಿವೃದ್ಧಿ ಕಂಡಿಲ್ಲ: ಹೈಕೋರ್ಟ್‌ ತರಾಟೆ

Date:

  • 2,901 ಮಕ್ಕಳು ಶಾಲೆಯಿಂದ ಹೊರಗೆ, 4,122 ಶಾಲೆಗಳಲ್ಲಿ ಸೌಕರ್ಯವಿಲ್ಲ
  • 464 ಶಾಲೆಗಳಲ್ಲಿ ಶೌಚಾಲಯ ಇಲ್ಲ, 87 ಶಾಲೆಗಳಲ್ಲಿ ಕುಡಿಯುವ ನೀರಿಲ್ಲ

ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆಗಳಿರುವ ಬಗ್ಗೆ 2013 ರಿಂದಲೂ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಶಾಲೆಗಳಲ್ಲಿನ ಮೂಲ ಸೌಕರ್ಯ ಕೊರತೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ.

ಕಾಲಮಿತಿಯಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಹೈಕೋರ್ಟ್ ಈ ಹಿಂದೆಯೇ ನಿರ್ದೇಶನ ನೀಡಿತ್ತು. ಹೈಕೋರ್ಟ್ ಆದೇಶದ ಅನುಸಾರ ಕೈಗೊಂಡ ಕ್ರಮಗಳ ಬಗ್ಗೆ ಸರ್ಕಾರ ಗುರುವಾರ ವರದಿ ಸಲ್ಲಿಸಿದೆ.

ವರದಿಯ ಜೊತೆಗೆ ಸಲ್ಲಿಸಲಾಗಿದ್ದ ಶೌಚಾಲಯಗಳ ಫೋಟೋ ಗಮನಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ಶಾಲೆಗಳಲ್ಲಿ ನೀರು, ಶೌಚಾಲಯಗಳ ದುಸ್ಥಿತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೌಚಾಲಯಗಳ ಫೋಟೊ ನಮ್ಮ ಆತ್ಮಸಾಕ್ಷಿಗೆ ಆಘಾತ ನೀಡುತ್ತಿದೆ. ಶೌಚಾಲಯಗಳು ದುಸ್ಥಿತಿಯಲ್ಲಿವೆ, ಗಿಡಬಳ್ಳಿ ಬೆಳೆದಿವೆ. ಅಧಿಕಾರಿಗಳು ತಮ್ಮ ಮನೆ ಶೌಚಾಲಯವನ್ನೂ ಹೀಗೇ ಇಟ್ಟುಕೊಳ್ಳುತ್ತಾರಾ? ಸರ್ಕಾರ ಸಲ್ಲಿಸಿರುವ ವರದಿ ಬೇಸರದಾಯಕ, ಆಘಾತಕಾರಿ ಎಂದು ಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.

ಕುಡಿಯುವ ನೀರನ್ನು ತಲೆ ಮೇಲೆ ಹೊತ್ತು ತರಲಾಗುತ್ತಿದೆ ಎಂದು ವರದಿಯಲ್ಲಿದೆ. ಕುಡಿಯುವ ನೀರಿನ ಪೂರೈಕೆ ಮಾಡಲೂ ಸರ್ಕಾರಕ್ಕೆ ಸಾಧ್ಯವಿಲ್ಲವೇ. ಮೂಲ ಸೌಕರ್ಯ ಇಲ್ಲದ ಶಾಲೆಗಳಿಂದ ಉತ್ತಮ ಶಿಕ್ಷಣ ಸಾಧ್ಯವೇ. ಎಂಥ ಸಮಾಜವನ್ನು ನಾವು ನಿರ್ಮಿಸುತ್ತಿದ್ದೇವೆ. ಇಂತಹ ವರದಿ ಸಲ್ಲಿಸುವ ಧೈರ್ಯ ಅಧಿಕಾರಿಗಳಿಗೆ ಹೇಗೆ ಬಂತು. ಇದಕ್ಕೆಲ್ಲಾ ಯಾರು ಜವಾಬ್ದಾರಿ ಯಾರು ಉತ್ತರದಾಯಿ? ಅಧಿಕಾರಿಗಳ ‘ಚಲ್ತಾ ಹೈ’ ಮನಸ್ಥಿತಿ ಸಹಿಸಲು ಸಾಧ್ಯವಿಲ್ಲ. ಇಂತಹ ಶಾಲೆಗೆ ಅಧಿಕಾರಿಗಳು ತಮ್ಮ ಮಕ್ಕಳನ್ನು ಕಳುಹಿಸುತ್ತಾರಾ ಎಂದು ಹೈಕೋರ್ಟ್ ಪ್ರಶ್ನಿಸಿದೆ.

2013ರಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾದಾಗಿನಿಂದಲೂ ಮೂರು ಸರ್ಕಾರಗಳು ಬದಲಾಗಿವೆ. ಆದರೂ ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ. ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸ್ವಲ್ಪವಾದರೂ ಕಾಳಜಿ, ಗಂಭೀರತೆ ಇರಬೇಕು. ಪರಿಸ್ಥಿತಿ ನೋಡಿ ನಮಗೆ ನೋವಾಗಿದೆ, ಖಿನ್ನರಾಗಿದ್ದೇವೆ. ಶಾಲೆಗಳ ಶೌಚಾಲಯದ ಸ್ಥಿತಿ ಕರುಣಾಜನಕವಾಗಿದೆ. ಯಾವ ಪೋಷಕರೂ ಇಂತಹ ಶಾಲೆಗೆ ಮಕ್ಕಳನ್ನು ಕಳಿಸಲ್ಲ. ಹೆಸರಿಗೆ ಮಾತ್ರ ಶೌಚಾಲಯ ನಿರ್ಮಿಸಲಾಗಿದೆ ಸರ್ಕಾರದ ವರದಿ ಕೇವಲ ಕಣ್ಣೊರೆಸುವ ತಂತ್ರವಿದ್ದಂತಿದೆ ಎಂದು ನ್ಯಾಯಪೀಠವು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ: ಡಿ ವಿ ಸದಾಂದಗೌಡ ತಿರುಗೇಟು

ಮಕ್ಕಳನ್ನು ಅವರ ಹಕ್ಕಿನಿಂದ ವಂಚಿತಗೊಳಿಸಲಾಗುತ್ತಿದೆ. ಮೂರು ತಿಂಗಳಲ್ಲಿ ಹೊಸದಾಗಿ ಸರ್ವೆ ನಡೆಸಿ ವರದಿ ಸಲ್ಲಿಸಬೇಕು. ಹೈಕೋರ್ಟ್‌ನ ಆದೇಶದ ವಿವರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ತಲುಪಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವ ವಿಚಾರದ ಬಗ್ಗೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿರುವ ಹೈಕೋರ್ಟ್, ಕಾಲಕಾಲಕ್ಕೆ ಸರ್ಕಾರದಿಂದ ವರದಿ ಕೇಳುತ್ತಿದೆ. ಶಾಲೆಗಳಿಂದ ಹೊರಗುಳಿದ ವಿದ್ಯಾರ್ಥಿಗಳ ಬಗ್ಗೆಯೂ ವರದಿ ಪಡೆಯುತ್ತಿದೆ. ಹೈಕೋರ್ಟ್ ಗೆ ಸಲಹೆ ನೀಡಲು ಅಮಿಕಸ್ ಕ್ಯೂರಿಯಾಗಿ ಹಿರಿಯ ವಕೀಲ ಕೆ.ಎನ್. ಫಣೀಂದ್ರರನ್ನು ನೇಮಕಗೊಳಿಸಲಾಗಿದೆ.

ಕಳೆದ ತಿಂಗಳು ವರದಿ ನೀಡಿದ್ದ ಅಮಿಕಸ್ ಕ್ಯೂರಿ 2,901 ಮಕ್ಕಳು ಇನ್ನೂ ಶಾಲೆಯಿಂದ ಹೊರಗುಳಿದಿದ್ದಾರೆ. 4,122 ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. 464 ಶಾಲೆಗಳಲ್ಲಿ ಶೌಚಾಲಯ ಇಲ್ಲ, 87 ಶಾಲೆಗಳಲ್ಲಿ ಕುಡಿಯುವ ನೀರಿಲ್ಲ ಎಂದು ವರದಿ ನೀಡಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿದ್ದ ಹಿನ್ನೆಲೆ ಗುರುವಾರ ವಿಚಾರಣೆ ನಡೆದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...