ಹುಬ್ಬಳ್ಳಿ ಈದ್ಗಾ ಮೈದಾನ | ಗಣೇಶ ಪ್ರತಿಷ್ಠಾಪನೆಗೆ ಹೈಕೋರ್ಟ್ ಅಸ್ತು; ಬಿಜೆಪಿಗರಿಂದ ಸಂಭ್ರಮ

Date:

  • ಹುಬ್ಬಳ್ಳಿ ಅಂಜುಮನ್ ಸಂಸ್ಥೆ ಸಲ್ಲಿಸಿದ ಅರ್ಜಿ ತಿರಸ್ಕೃತ
  • ಜಿಲ್ಲಾಡಳಿತಕ್ಕೆ ಸೂಚಿಸಿ ಅನುಮತಿ ನೀಡಲು ಜೋಶಿ ಆಗ್ರಹ

ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ಅವಕಾಶ ನೀಡಬಾರದು ಎಂದು ಹುಬ್ಬಳ್ಳಿ ಅಂಜುಮನ್ ಸಂಸ್ಥೆ ಧಾರವಾಡ ಹೈಕೋರ್ಟ್’ನಲ್ಲಿ ಸಲ್ಲಿಸಿದ ಅರ್ಜಿ ತಿರಸ್ಕೃತವಾಗಿದೆ.

ಈ ಮೂಲಕ ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿ ಕಿತ್ತೂರು ಚೆನ್ನಮ್ಮ(ಈದ್ಗಾ)ದಲ್ಲಿ ಈ ಬಾರಿಯೂ ಗಣೇಶ ಪ್ರತಿಷ್ಠಾಪನೆ ಮಾಡಲು ಧಾರವಾಡ ಹೈಕೋರ್ಟ್‌ ಅಸ್ತು ಎಂದಿದ್ದು, ನ್ಯಾ. ಸಚಿನ್ ಮಗದುಮ್ಮ‌ ಅವರಿದ್ದ ಏಕಸದಸ್ಯ ಪೀಠವು ಈ ತೀರ್ಪು ನೀಡಿದೆ. ಈ ಮೂಲಕ ಎರಡನೆ ವರ್ಷವು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯಲಿದೆ.

ಅರ್ಜಿ ತಿರಸ್ಕಾರಗೊಂಡ ವಿಷಯ ಬೆಲ್ಲದ್ ಅವರು ಹೇಳುತ್ತಿದ್ದಂತೆ, ಪಾಲಿಕೆ ಆವರಣದಲ್ಲಿ ಬಿಜೆಪಿ ಹಾಗೂ ಹಿಂದೂ‌ ಸಂಘಟನೆ ಕಾರ್ಯಕರ್ತರ ಸಂಭ್ರಮ‌ ಮುಗಿಲುಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಗಣೇಶಮೂರ್ತಿ ಹೊತ್ತು ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಡಳಿತಕ್ಕೆ ಸೂಚಿಸಿ: ಜೋಶಿ

“ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಅಂಜುಮನ್ -ಏ- ಇಸ್ಲಾಂ ಸಂಸ್ಥೆ ಧಾರವಾಡ ಹೈಕೋರ್ಟ್ ಪೀಠಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈಗಾಗಲೇ ಕಳೆದ ವರ್ಷ ನ್ಯಾಯಾಲಯದ ಅನುಮತಿಯಂತೆ ಗಣಪತಿ ಪ್ರತಿಷ್ಠಾಪಿಸಿ ಅತ್ಯಂತ ಶಾಂತಿಯುತವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ರಾಜ್ಯ ಸರಕಾರ ಜಿಲ್ಲಾಡಳಿತದ ಮೂಲಕ ಚೆನ್ನಮ್ಮ ಮೈದಾನದಲ್ಲಿ ಗಣಪತಿ ಕೂರಿಸಲು ಅನುಮತಿ ನೀಡದೆ ಹಬ್ಬಕ್ಕೆ ಅಡ್ಡಿಪಡಿಸುತ್ತಿತ್ತು. ಈಗ ಹೈಕೋರ್ಟ್ ಅಂಜುಮನ್ -ಏ- ಇಸ್ಲಾಂ ಸಂಸ್ಥೆ ಪಾಲಿಕೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ತಕ್ಷಣವೇ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚಿಸಿ ಅನುಮತಿ ನೀಡಬೇಕು” ಎಂದು ಸಂಸದ ಪ್ರಲ್ಹಾದ್‌ ಜೋಶಿ ಟ್ವೀಟ್‌ ಮಾಡಿ ಆಗ್ರಹಿಸಿದ್ದಾರೆ.

ಗಣೇಶ್‌

ಬಿಜೆಪಿ ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯಿಸಿದ್ದು, “ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಅಂಜುಮನ್ ಸಂಸ್ಥೆ ಸಲ್ಲಿಸಿದ ಅರ್ಜಿ ಕಳೆದ ವರ್ಷದಂತೆ ಈ ವರ್ಷವೂ ಕೋರ್ಟ್’ನಲ್ಲಿ ತಿರಸ್ಕೃತಗೊಂಡಿದ್ದು, ಪಾಲಿಕೆ ಆಸ್ತಿ ಎಂದು ಘೋಷಿಸಿದೆ. ಪಾಲಿಕೆಗೆ ಸಂಪೂರ್ಣ ಅಧಿಕಾರ ನೀಡಿದ್ದು, ಆಯುಕ್ತರು ಕೂಡಲೇ ಅನುಮತಿ ನೀಡಬೇಕು” ಎಂದು ಒತ್ತಾಯಿಸಿದರು.

‘ಪಾಲಿಕೆ ಆಯುಕ್ತರು ವಿಳಂಬ ಮಾಡಬಾರದು’

ಶಾಸಕ‌ ಮಹೇಶ ಟೆಂಗಿನಕಾಯಿ ಮಾತನಾಡಿ, “ಅಂಜುಮನ್‌ ಸಂಸ್ಥೆ ಸಲ್ಲಿಸಿದ್ದ ಅರ್ಜಿ‌ ಕೋರ್ಟ್ ತಿರಸ್ಕರಿಸಿದ್ದು, ಸತ್ಯಕ್ಕೆ ದೊರೆತ ಜಯ. ಈ ಕುರಿತು ಅಂಜುಮನ್ ಸಂಸ್ಥೆ ಪದೇ ಪದೇ ಅಡ್ಡಗಾಲು ಹಾಕುವುದು ಸರಿಯಲ್ಲ. ಇದೀಗ ಪಾಲಿಕೆ ಆಯುಕ್ತರು ವಿಳಂಬ ಮಾಡದೆ ಅನುಮತಿ ನೀಡಬೇಕು” ಎಂದರು.

ಶ್ರೀರಾಮಸೇನೆಯ ಪ್ರಮೋದ ಮುತಾಲಿಕ್ ಮಾತನಾಡಿ, ”ಕೋರ್ಟ್’ಲ್ಲಿ ಅರ್ಜಿ ತಿರಸ್ಕಾರವಾಗಿದ್ದು ಹಿಂದೂ‌ ಸಂಸ್ಕೃತಿಗೆ ದೊರೆತ ಜಯ. ವಿರೋಧಿಸುವುದಕ್ಕೂ ರೀತಿ, ನೀತಿಗಳಿವೆ. ಇಂದಿನ ಕೋರ್ಟ್ ನಿರ್ಧಾರ, ವಿರೋಧಿಗಳ ಕಪಾಳಕ್ಕೆ ಹೊಡೆದಂತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...