ಸೌಜನ್ಯ ಪ್ರಕರಣದ ಬಗ್ಗೆ ವಿಡಿಯೋ; ಸಮೀರ್‌ಗೆ ನೋಟಿಸ್ ನೀಡಿದ ಪೊಲೀಸರಿಗೆ ಹೈಕೋರ್ಟ್ ತರಾಟೆ

Date:

ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ ಡಿಗೆ ನೋಟಿಸ್‌ ನೀಡಿದ ಪೊಲೀಸರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಮೀರ್ ಅವರನ್ನು ಬಂಧಿಸದಂತೆ ತಡೆ ನೀಡಿದೆ.

“ದೂತ ಸಮೀರ್” ಅವರಿಗೆ ಪೊಲೀಸರು ಮನೆಗೆ ಬಂದು ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಲೈವ್‌ನಲ್ಲಿ ಮಾಹಿತಿ ನೀಡಿರುವ ಸಮೀರ್, “ಪೊಲೀಸರು ನನ್ನ ನಿವಾಸಕ್ಕೆ ಆಗಮಿಸಿ ಬಂಧನಕ್ಕೆ ಮುಂದಾಗಿದ್ದರು. ಆದರೆ ನಾನು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ ಬಳಿಕ ನೋಟಿಸ್ ನೀಡಿ ಹಿಂದಿರುಗಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಮೀರ್ 35 ಲಕ್ಷ ತಗೊಂಡು ವಿಡಿಯೋ ಮಾಡಿದ್ರ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಬಂಧನದಿಂದ, ವಿಚಾರಣೆಯಿಂದ ಸಮೀರ್‌ಗೆ ಹೈಕೋರ್ಟ್ ರಿಲೀಫ್ ನೀಡಿದೆ ಎಂದು ವರದಿಯಾಗಿದೆ. “ಪೊಲೀಸ್ ಠಾಣೆಗೆ ಕರೆಯುವ ಹಾಗಿಲ್ಲ. ಬಂಧಿಸುವಂತಿಲ್ಲ” ಎಂದು ಆದೇಶಿಸಿರುವ ಹೈಕೋರ್ಟ್ ಕಾನೂನು ಉಲ್ಲಂಘಿಸಿ ನೋಟಿಸ್ ನೀಡಿದ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಈ ನಡುವೆ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ ಬಳ್ಳಾರಿಯ ಕೌಲ್‌ಬಝಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ವಿಡಿಯೋವನ್ನು ಮೂಲಕ ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳ ಮೇಲೆ ನಂಬಿಕೆ ಹೊಂದಿರುವ ಜನರ ಭಾವನೆಗೆ ಧಕ್ಕೆಯಾಗುವಂತೆ ಮಾಡಲಾಗಿದೆ ಎಂದು ಪೊಲೀಸರು ತಾವಾಗಿಯೇ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕನ್ನಡ ಯೂಟ್ಯೂಬರ್‌ ಸಮೀರ್‌ನಿಂದಾಗಿ ಮತ್ತೆ ಸುದ್ದಿಯಾದ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣ: ಎಡಿಜಿಪಿಯಿಂದ ನೋಟಿಸ್!

ಆರೋಪಿಗಳು ಯಾರೆಂದು ಕುಟುಂಬಸ್ಥರು, ಸ್ಥಳೀಯರು ಹೇಳುತ್ತಿದ್ದರೂ ಕೂಡಾ ಇಂದಿಗೂ ನ್ಯಾಯಸಿಗದೆ, ಬಗೆಹರಿಯದೆಯೇ ಉಳಿದಿರುವ ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಯೂಟ್ಯೂಬರ್ ಸಮೀರ್ ದೀರ್ಘವಾದ, ವಿವರವಾದ ವಿಡಿಯೋವನ್ನು ಮಾಡಿದ್ದಾರೆ. ಈ ವಿಡಿಯೋ ವೈರಲ್‌ ಆಗಿದ್ದು ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ.

ಈ ಬೆನ್ನಲ್ಲೇ ಸಮೀರ್‌ಗೆ ಬೆದರಿಕೆ ಕರೆಗಳೂ, ಕಾಮೆಂಟ್‌ಗಳು ಕೂಡಾ ಬಂದಿದೆ. ಸಮೀರ್ ಪರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳೂ ಹರಿದಾಡುತ್ತಿದೆ. ಇವೆಲ್ಲವುದರ ನಡುವೆ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಕಳುಹಿಸಿದ್ದಾರೆ. ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ, ಜಿಲ್ಲಾ ಪೊಲೀಸ್ ವಿಭಾಗದಲ್ಲಿ ರಚನೆಯಾಗಿರುವ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚುರುಕುಗೊಳಿಸುವಂತೆ ಎಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ. ಇದೀಗ ಸಮೀರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...