ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಮತದಾನ

Date:

ಮೈಸೂರು ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ. ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60, ಚಾಮರಾಜ ಕ್ಷೇತ್ರದಲ್ಲಿ ಶೇ.61.1, ನರಸಿಂಹರಾಜ ಕ್ಷೇತ್ರದಲ್ಲಿ ಶೇ.63.4ರಷ್ಟು ಮತದಾನವಾಗಿದೆ.

2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಗ್ರಾಮೀಣ ಕ್ಷೇತ್ರಗಳಿಗೆ ಹೋಲಿಸಿದರೆ ಮೈಸೂರು ನಗರ ವ್ಯಾಪ್ತಿಯ ಮೂರು ಕ್ಷೇತ್ರಗಳಲ್ಲಿ ಕಡಿಮೆ ಮತದಾನ ದಾಖಲಾಗಿತ್ತು. ಕೃಷ್ಣರಾಜ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ.58.9, ಚಾಮರಾಜ ಕ್ಷೇತ್ರದಲ್ಲಿ ಶೇ.59.2, ನರಸಿಂಹರಾಜ ಕ್ಷೇತ್ರದಲ್ಲಿ ಶೇ.61.4ರಷ್ಟು ಮತದಾನವಾಗಿತ್ತು.

2013ರ ಚುನಾವಣೆಯಲ್ಲಂತೂ ಇನ್ನೂ ಕಡಿಮೆ ಮತದಾನವಾಗಿತ್ತು. ಯಾವ ಕ್ಷೇತ್ರದಲ್ಲಿಯೂ ಶೇ.60 ದಾಟಿರಲಿಲ್ಲ. ಆಗ ಚುನಾವಣೆಯಲ್ಲಿ ಕೃಷ್ಣರಾಜದಲ್ಲಿ ಶೇ.59.08, ಚಾಮರಾಜದಲ್ಲಿ ಶೇ.55.39, ನರಸಿಂಹರಾಜದಲ್ಲಿ ಶೇ.54.70ರಷ್ಟು ಮತದಾನವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ 2023ರ ಚುನಾವಣೆಯಲ್ಲಿ ಮತದಾನದ ಪ್ರಮಾಣ ಏರಿಕೆಯಾಗಿದೆ. ಹೆಚ್ಚಿನ ಸಂಖ್ಯೆಯ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮೈಸೂರು ನಗರದಲ್ಲಿ ಶೇ.75 ರಷ್ಟು ಮತದಾನ ದಾಖಲಾಗಬಹುದೆಂದು ಜಿಲ್ಲಾಡಳಿತ ನಿರೀಕ್ಷಿಸಿತ್ತು ಆದರೂ, ಮತದಾನ ಪ್ರಕ್ರಿಯೆ ಶೇ.70ಕ್ಕೆ ಬಂದು ನಿಂತಿದೆ.

ಮೇ 10ರ ಬೆಳಿಗ್ಗೆಯಿಂದ ನಗರದ ಮೂರು ಕ್ಷೇತ್ರಗಳಲ್ಲಿಯೂ ಮತದಾನ ಚುರುಕಾಗಿತ್ತು. ಸಂಜೆ 5 ಗಂಟೆ ವೇಳೆಗೆ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.56.5, ಚಾಮರಾಜ ಕ್ಷೇತ್ರದಲ್ಲಿ ಶೇ.55.7, ನರಸಿಂಹರಾಜ ಕ್ಷೇತ್ರದಲ್ಲಿ ಶೇ.58.7ರಷ್ಟು ಮತದಾನವಾಗಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಸಾವು

ನಗರದ ಬೂತ್‌ಗಳಲ್ಲಿ ಹಿರಿಯ ನಾಗರಿಕರು ಮತದಾನ ಆರಂಭವಾಗುತ್ತಿದ್ದಂತೆಯೇ ಮತದಾನ ಮಾಡಿದ್ದಾರೆ. ಅವರಲ್ಲಿ ಅನೇಕರು ಬೆಳಿಗ್ಗೆ ವಾಕಿಂಗ್ ನಂತರ ನೇರವಾಗಿ ಬೂತ್‌ಗಳಿಗೆ ತೆರೆಳಿಸಿದ್ದರು.

“ಕಳೆದ ಕೆಲವು ದಶಕಗಳಿಂದ, ನಾನು ಬೆಳಿಗ್ಗೆ ಬೇಗನೆ ಮತ ಚಲಾಯಿಸುತ್ತಿದ್ದೇನೆ. ಇದು ನನ್ನ ಜವಾಬ್ದಾರಿಯಾಗಿದೆ. ನನಗೆ ಯಾವುದೇ ಅಭ್ಯರ್ಥಿ ಇಷ್ಟವಾಗದಿದ್ದರೆ ನೋಟಾ ಆಯ್ಕೆಯನ್ನು ಚಲಾಯಿಸಬಹುದು” ಎಂದು ಕುವೆಂಪು ನಗರದ ನಿವೃತ್ತ ಶಿಕ್ಷಕ ಬಸವರಾಜಪ್ಪ ಎಂ.ಎಸ್ ತಿಳಿಸಿದ್ದಾರೆ.

“ಮತ ಚಲಾಯಿಸುವುದು ನಮಗೆ ಕೆಲವು ರೋಮಾಂಚಕ ಕ್ಷಣಗಳನ್ನು ನೀಡಬೇಕು. ಅದಕ್ಕಾಗಿಯೇ ನಾನು ಮನೆ ಮತದಾನವನ್ನು ತಿರಸ್ಕರಿಸಿದೆ” ಎಂದು ಅಗ್ರಹಾರದ ಹಿರಿಯ ನಾಗರಿಕ ಪ್ರಹ್ಲಾದ್ ಎಚ್.ಎಸ್ (83) ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...