ಹುಡುಗಿ ಸಿಗದ ಹಿಂದೂಗಳು ಅನ್ಯಧರ್ಮದ ಯುವತಿಯರನ್ನು ಮದುವೆಯಾಗಿ ಘರ್ ವಾಪ್ಸಿ ಮಾಡಿ: ಸೂಲಿಬೆಲೆ

Date:

“ಹಿಂದೂಗಳು ಮತಾಂತರ, ಲವ್ ಜಿಹಾದ್ ವಿಚಾರಗಳನ್ನ ಬಿಟ್ಟು ಬಿಡಬೇಕು. ಮತಾಂತರವಾದವರನ್ನ ಮತ್ತೆ ಘರ್ ವಾಪ್ಸಿ ಹೇಗೆ ಮಾಡಬೇಕು ಎಂಬ ಬಗ್ಗೆ ಹಿಂದೂ ಯುವಕರನ್ನ ತರಬೇತುಗೊಳಿಸಬೇಕು. ಹುಡುಗಿ ಸಿಕ್ಕಿಲ್ಲವೆನ್ನುವ ಹಿಂದೂ ಯುವಕರು ಅನ್ಯ ಧರ್ಮೀಯ ಹುಡುಗಿಯರನ್ನ ಪ್ರೀತಿಸಿ ಮದುವೆಯಾಗಿ, ಘರ್ ವಾಪ್ಸಿ ಮಾಡಬೇಕು” ಎಂದು ಸಂಘಪರಿವಾರದ ಮುಖಂಡ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ನೀಡಿದ್ದಾರೆ.

ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಭಾನುವಾರ ನಡೆಯಿತು.

ಕುತ್ತಾರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, “ಹಿಂದೂ ಸಮಾಜಕ್ಕೆ ಎದುರಾಗಿರುವ ಸಮಸ್ಯೆಗಳಿಂದ ಪಾರು ಮಾಡಬಲ್ಲ ಏಕೈಕ ಶಕ್ತಿಯೇ ನಮ್ಮೊಳಗಿನ ಶ್ರದ್ದೆಯಾಗಿದೆ. ಮತಾಂತರ, ಲವ್ ಜಿಹಾದ್ ವಿಚಾರಗಳನ್ನ ಬಿಟ್ಟು ಬಿಡಿ. ಮತಾಂತರವಾದವರನ್ನ ಮತ್ತೆ ಘರ್ ವಾಪಸಿ ಹೇಗೆ ಮಾಡೋದಂತ ನಮ್ಮ ಯುವಕರನ್ನ ತರಬೇತುಗೊಳಿಸಿ. ಹುಡುಗಿ ಸಿಕ್ಕಿಲ್ಲವೆನ್ನುವ ಹಿಂದೂ ಯುವಕರು ಅನ್ಯ ಧರ್ಮೀಯ ಹುಡುಗಿಯರನ್ನ ಪ್ರೀತಿಸಿ ಮದುವೆಯಾಗಿ. ಸವಾಲುಗಳನ್ನ ಎದುರಿಸಬೇಕೆಂದರೆ ಇನ್ನು ಅಗ್ರೆಸಿವ್ ಆಗಿ ಹೋದರೆ ಸಾಲದು. ಟೆಸ್ಟ್ ಮ್ಯಾಚ್ ನಿಂತೋಗಿದೆ, ಇರೋದೇ ಇಪ್ಪತ್ತು ಓವ‌ರ್, ಅದರಲ್ಲಿ ಬಡಿಯಬೇಕಷ್ಟೆ” ಎಂದು ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಹಿಂದೂಗಳ ಕುರಿತು ತರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಮುಸ್ಲಿಂ ವಿದ್ಯಾರ್ಥಿ ಉನ್ನತ ಶಿಕ್ಷಣ ಪಡೆಯಲು ಪರೀಕ್ಷೆ ಬರೆಯುವ ಶುಲ್ಕದ ಶೇ 50ರಷ್ಟನ್ನು ಮರುಪಾವತಿ ಮಾಡಲಾಗುತ್ತದೆ. ವಿದೇಶದಲ್ಲಿ ಅಧ್ಯಯನ ನಡೆಸಲು ₹ 25 ರಿಂದ 30 ಲಕ್ಷವನ್ನು ಮುಸ್ಲಿಂ ವಿದ್ಯಾರ್ಥಿಗೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಹಿಂದೂಗಳಿಗೆ ಏನೂ ಇಲ್ಲದಂತಾಗಿದೆ. ಹಿಂದುತ್ವವವನ್ನ ಗೌರವಿಸುವ ವ್ಯಕ್ತಿಗಳು ನಾಡನ್ನು ಆಳಿದರೆ ಮಾತ್ರ ಹಿಂದೂ ಧರ್ಮ ಸುದೀರ್ಘವಾಗಿ ಬಾಳುತ್ತದೆ ಎಂದು ತಿಳಿಸಿದ್ದಾರೆ.

‘2013ಲ್ಲಿ ಪವಿತ್ರ ಕುಂಭ ಮೇಳದ ಉಸ್ತುವಾರಿಯನ್ನಾಗಿ ಅಂದಿನ ಸರ್ಕಾರ ಅಝಮ್ ಖಾನ್ ಅವರನ್ನು ನೇಮಿಸಿತ್ತು. ಆಗಿನ ಉಸ್ತುವಾರಿಗಿಂತ ಈಗಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಉಸ್ತುವಾರಿಯಲ್ಲಿ ನಡೆದ ಕುಂಭಮೇಳ ಅತ್ಯಂತ ಯಶಸ್ವಿಯಾಯಿತು. ಕುಂಭ ಮೇಳವನ್ನು ಹೇಗೆ ನಡೆಸಬಹುದು ಎಂದು ಯೋಗಿ ಆದಿತ್ಯನಾಥ್ ತೋರಿಸಿಕೊಟ್ಟಿದ್ದಾರೆ. ಬಾಂಗ್ಲಾದೇಶದ ಪ್ರಭಾವಕ್ಕೊಳಗಾಗಿ ಇಡೀ ಅಸ್ಸಾಮನ್ನು ಭಾರತ ಕಳಕೊಂಡರೂ ಆಶ್ಚರ್ಯ ಪಡಬೇಕಿಲ್ಲ. ಆದರೆ ಅಸ್ಸಾಮಲ್ಲಿ ಹಿಂದೂ ಪರ ಆಡಳಿತ ಬಂದ ಮೇಲೆ ಬಾಂಗ್ಲಾದೇಶದ ನುಸಳುಕೋರರನ್ನ ಹುಡುಕಿ ಹೊರದಬ್ಬುವ ಕಾರ್ಯ ಪ್ರಖರವಾಗಿ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲೂ ಹಿಂದೂಗಳು ಬದುಕಲು ಕಷ್ಟಕರ ಸ್ಥಿತಿಯಿದ್ದು, ಆ ರಾಜ್ಯವನ್ನ ನಾವು ಕಳಕೊಳ್ಳುವ ಭೀತಿ ಎದುರಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ವಿಶ್ವ ಹಿಂದೂ ಪರಿಷತ್‌ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಮಾತನಾಡಿ, “ದೇಶದಲ್ಲಿ 125 ಕೋಟಿ ಹಿಂದೂಗಳಿದ್ದರೂ ಪ್ರತಿನಿತ್ಯ ಸರಾಸರಿಯಲ್ಲಿ ನಮ್ಮ ಜನಸಂಖ್ಯೆ ಕಡಿಮೆಯಾಗುತ್ತಲೇ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಹಿಂದೂಗಳ ಸಂಖ್ಯೆ 65 ಶೇಕಡಾಕ್ಕೆ ಇಳಿದಿದೆ. ಹಿಂದೂ ಯುವಕ, ಯುವತಿಯರು ವಯಸ್ಸು 35 ಆದರೂ ಮದುವೆ ಆಗಲ್ಲ. ಮದುವೆಯಾದರೂ ಮಕ್ಕಳು ಮಾಡಲು ವಿಳಂಬ ಪೃವೃತ್ತಿಯೇ ನಮ್ಮ ಜನಸಂಖ್ಯೆ ಕುಸಿತಕ್ಕೆ ಕಾರಣವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಸದ್ಯಕ್ಕಂತೂ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಲ್ಲ: ವದಂತಿಗಳಿಗೆ ಸ್ಪಷ್ಟ ತೆರೆ ಎಳೆದ ರೋಹಿತ್ ಶರ್ಮಾ

“ಹಿಂದೂ ಯುವಕ, ಯುವತಿಯರು ಇಪ್ಪತ್ತೈದು, ಮೂವತ್ತು ವರುಷದ ಒಳಗೆ ಮದುವೆಯಾಗಿ ಕನಿಷ್ಠ ಎರಡು ಮಕ್ಕಳು ಪಡೆಯುವಂತೆ ಜನಜಾಗೃತಿಗೊಳಿಸಬೇಕು. ಇಡೀ ರಾಷ್ಟ್ರದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧಗೊಳ್ಳಲು ಪ್ರಬಲ ಕಾನೂನು ಜಾರಿಯಾಗಬೇಕೆಂದು ಪ್ರಯಾಗ್ ರಾಜ್‌ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಬೈಠಕ್‌ನಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...