ರಾಯಚೂರು | ಸ್ಮಶಾನ ಕಾರ್ಮಿಕರನ್ನು ನೌಕರರಾಗಿ ನೇಮಕ ಮಾಡಿ; ಗ್ರಾ.ಪಂ ಕಚೇರಿ ಮುಂದೆ ಪ್ರತಿಭಟನೆ

Date:

ರಾಯಚೂರು ತಾಲ್ಲೂಕಿನ ಯರಗೇರಾ ಹೋಬಳಿಯ ಗೋಡಿಹಾಳ ಹಾಗೂ ಯರಗೇರಾ ಗ್ರಾಮಗಳ ಸ್ಮಶಾನ ಕಾರ್ಮಿಕರನ್ನು ಪಂಚಾಯಿತಿ ನೌಕರರು ಎಂದು ಘೊಷಣೆ ಮಾಡುವಂತೆ ಒತ್ತಾಯಿಸಿ ಯರಗೇರಾ ಗ್ರಾಮ ಪಂಚಾಯಿತಿ ಕಚೇರಿಯ ಬಳಿ ಮಂಗಳವಾರ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ರಾಜ್ಯ ಹಾಗೂ ಯರಗೇರಾ ಹೋಬಳಿ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಯರಗೇರಾ ಸೇರಿ ಜಿಲ್ಲೆ ಹಾಗೂ ರಾಜ್ಯದ ಹಲವೆಡೆ ಬೇಕಾಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಸ್ಮಶಾನ ಕಾರ್ಮಿಕರು ಶವಗಳನ್ನು ಹೂಳುವುದು, ಕುಣಿ( ಗುಂಡಿ) ತೋಡುವ ಕೆಲಸ ಮಾಡುತ್ತಿದ್ದು ಅಗತ್ಯ ಗೌರವ ಧನ ನೀಡುತ್ತಿಲ್ಲ ಸರ್ಕಾರಿ ಸೌಲಭ್ಯವೂ ಮರೀಚಿಕೆಯಾಗಿದೆ. ಪ್ರತಿ ಸಾರ್ವಜನಿಕ ಸ್ಮಶಾನಕ್ಕೆ ಒಬ್ಬರಂತೆ ಮಸಣ ಕಾರ್ಮಿಕರನ್ನು ಸ್ಥಳೀಯ ಸಂಸ್ಥೆಗಳ ಮಸಣ ನಿರ್ವಹಕರಾನ್ನಾಗಿ ನೇಮಿಸಿಕೊಳ್ಳಬೇಕು. ಎಲ್ಲಾ ಸ್ಮಶಾನಗಳಲ್ಲಿ ಪಾರಂಪಾರೀಕವಾಗಿ ಕಾರ್ಯನಿರ್ವಹಿಸುವ ಮಸಣ ಕಾರ್ಮಿಕರ ಕುಟುಂಬಗಳ ಗಣತಿ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿ ಕುಣಿ ಅಗೆಯುವ ಮತ್ತು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪರಿಗಣಿಸಿ ಪ್ರತಿ ಕುಣಿಗೆ ಕನಿಷ್ಠ ₹3,000 ಕೂಲಿಯನ್ನು ಪಂಚಾಯತಿಯಿಂದ ಪಾವತಿಸಬೇಕು. ಅಗತ್ಯ ಸುರಕ್ಷತಾ ಕ್ರಮಗಳನ್ನು ಮತ್ತು ಕುಣಿ ಅಗೆಯುವ, ಮುಚ್ಚುವುದಕ್ಕೆ ಬೇಕಾಗುವ ಹಾರಿ, ಸಲಕಿ, ಪುಟ್ಟಿ, ಗುದ್ದಲಿ ಮತ್ತು ಸುರಕ್ಷತಾ ಕ್ರಮಗಳಿಗಾಗಿ ಕಾರ್ಮಿಕರಿಗೆ ಹ್ಯಾಂಡ್ ಗ್ಲೌಸ್ , ಹಾಗೂ ಹಲಗೆ ಬಾರುಸುವವರಿಗೆ ಹಲಗೆ, ಬೂಟೂ, ಮಾಸ್ಕ್ ಮತ್ತು ಸಾಬೂನು ನೀಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ಜಿ.ವಿರೇಶ, ಈ ರಂಗನಗೌಡ, ತಿಪ್ಪಯ್ಯ, ಈರೇಶ, ನಲ್ಲಾರೆಡ್ಡಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...