ಉಡುಪಿ | ಟ್ರಾಫಿಕ್‌ ಜಾಮ್‌, ಹಿರಿಯಡಕದ ನಾಗರೀಕರಿಗೆ ನಿತ್ಯದ ಗೋಳು !

Date:

ರಾಷ್ಟ್ರೀಯ ಹೆದ್ದಾರಿ 169ಎ (ಎನ್‌ಎಚ್‌-169ಎ) ರಲ್ಲಿ ದಿನದಿಂದು ಹೆಚ್ಚುತ್ತಿರುವ ವಾಹನ ಸಂಚಾರದಿಂದಾಗಿ ನಿರಂತರವಾಗಿ ಟ್ರಾಫಿಕ್ ಜಾಮ್‌ಗಳ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಹಿರಿಯಡಕ ಪೇಟೆ, ಹೆಬ್ರಿ, ಪರ್ಕಳ ಹಾಗೂ ಮಣಿಪಾಲದ ನಡುವೆ ಸಾಗುವ ಈ ಹೆದ್ದಾರಿ, ಉಡುಪಿ ಜಿಲ್ಲೆಗೆ ಅತ್ಯಂತ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ಶಿರಸಿ, ಅಗುಂಬೆ ಹಾಗೂ ಶಿವಮೊಗ್ಗ, ಬೆಂಗಳೂರು ಕಡೆಗೆ ಸಾಗುವ ಜನರು, ವಿದ್ಯಾರ್ಥಿಗಳು, ಉದ್ಯೋಗಿಗಳು, ಹಾಗೂ ಮಾರುಕಟ್ಟೆಗೆ ಸಾಗುವ ವಾಹನಗಳಿಗಾಗಿ ಇದು ಮುಖ್ಯ ರಸ್ತೆಯಾಗಿದೆ,

ಆದರೆ ಈ ರಸ್ತೆಯು ಈಗ ಬಹುಪಾಲು ಕಡೆ ಎರಡು ಲೇನ್ ಗೆ ಸೀಮಿತವಾಗಿರುವುದರಿಂದ ಮತ್ತು ರಸ್ತೆ ವಿಸ್ತರಣಾ ಕಾಮಗಾರಿ ಬಹುತೇಕ ಸ್ಥಳಗಳಲ್ಲಿ ನಿಧಾನವಾಗಿ ಸಾಗುತ್ತಿರುವುದರಿಂದ, ನಿತ್ಯದ ಟ್ರಾಫಿಕ್ ಜಾಮ್‌ಗಳು ಸಾಮಾನ್ಯವಾಗಿವೆ. ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ಅನೇಕ ಬಾರಿ ಗಂಟೆಗಳಗೂ ಹೆಚ್ಚು ವಾಹನಗಳು ಸ್ತಬ್ಧವಾಗಿ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗುತ್ತಿದೆ. ಉಡುಪಿಯಿಂದ ಹೆಬ್ರಿ, ಆಗುಂಬೆ, ಶಿವಮೊಗ್ಗಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ ಹಾಗೂ ಬ್ರಹ್ಮಾವರ, ಕಾರ್ಕಳವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ ಒಂದಕ್ಕೊಂದು ಸಂಧಿಸುವ ಜಾಗವಾದ ಮುಖ್ಯಪೇಟೆಯ ಸರ್ಕಲ್‌ ಬಳಿ ದಿನದ ಮೂರೂ ಹೊತ್ತು ವಾಹನ ದಟ್ಟನೆ ಉಂಟಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಲವಾರು ವರ್ಷಗಳಿಂದಲೇ ಇರುವ ಈ ಸಮಸ್ಯೆ ಬಗ್ಗೆ ಆಡಳಿತ ಸ್ಪಂದಿಸದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಹಿರಿಯಡಕ ಸರ್ಕಲ್‌ ಮೇಲ್ಭಾಗದಲ್ಲಿ ಬಸ್ಸು ನಿಲ್ದಾಣವಿದ್ದರೂ ಕಾರ್ಕಳ ಭಾಗದಿಂದ ಬರುವ ಬಸ್‌ಗಳು ನಿಲ್ದಾಣಕ್ಕೆ ಹೋಗದೆ ರಸ್ತೆ ಮಧ್ಯದಲ್ಲಿಯೇ ನಿಲ್ಲಿಸುವುದರಿಂದ ಈ ಭಾಗದಲ್ಲಿ ಟ್ರಾಫಿಕ್‌ ಜಾಮ್‌ ಆಗಲು ಪ್ರಮುಖ ಕಾರಣವಾಗಿದೆ. ಹಲವಾರು ಬಾರಿ ಈ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಶಿವಮೊಗ್ಗ ಭಾಗದಿಂದ ಮಣಿಪಾಲ-ಉಡುಪಿ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳನ್ನು ಕರೆತರುವ ತುರ್ತು ವಾಹನಗಳು ಇಲ್ಲಿನ ಟ್ರಾಫಿಕ್‌ ಜಾಮ್‌ ನಲ್ಲಿ ಸಿಕ್ಕಿಹಾಕಿಕೊಂಡಿರುವ ನಿದರ್ಶನಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ವರ್ಷಗಳ ಹಿಂದೆ ಸರ್ಕಲ್‌ ಬಳಿ ಸಿಸಿ ಕೆಮರಾವನ್ನು ಅಳವಡಿಸಿ ಪೊಲೀಸ್‌ ಠಾಣೆಯಲ್ಲಿ ಪರಿಶೀಲಿಸುವ ಕ್ರಮ ನಡೆದಿತ್ತು. ಆದರೆ ಇದೀಗ ಆ ಸಿಸಿ ಕ್ಯಾಮೆರ ನಾಪತ್ತೆಯಾಗಿದೆ. ಸ್ವಲ್ಪ ದಿನವಾದರೂ ಪೊಲೀಸ್‌ ಇಲಾಖೆ ಸಿಬ್ಬಂದಿ ಒಬ್ಬರನ್ನು ನೇಮಿಸಿ ಸುಗಮ ಸಂಚಾರ ನಿಮಯಗಳನ್ನು ಖಾತ್ರಿಗೊಳಿಸಿದಲ್ಲಿ ಮತ್ತು ರಸ್ತೆ ಮಧ್ಯದಲ್ಲಿ ವಾಹನ ನಿಲ್ಲಿಸಿ ಟ್ರಾಫಿಕ್‌ ಜಾಮ್‌ಗೆ ಕಾರಣವಾಗುವವರಿಗೆ ದಂಡ ವಿಧಿಸಿದರೆ ಸಮಸ್ಯೆ ಸುಧಾರಿಸಬಹುದು ಎನ್ನುವುದು ಜನರ ಅಭಿಪ್ರಾಯ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಸ್ಥಳಿಯರಾದ ಗಣೇಶ್‌, ಸ್ಥಳೀಯರು ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ವೇಗವಾಗಿ ಮುಗಿಸಲು ಹಾಗೂ ಸೇವಾ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಜೊತೆಗೆ ಟ್ರಾಫಿಕ್ ಪೊಲೀಸ್‌ ಇಲಾಖೆಯಿಂದ ಸಮರ್ಪಕ ನಿಯಂತ್ರಣ ವ್ಯವಸ್ಥೆ, ಸಿಗ್ನಲ್‌ಗಳು ಮತ್ತು ಸೂಚನೆ ಫಲಕಗಳ ಸ್ಥಾಪನೆಯ ಅಗತ್ಯವಿದೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಹೇಳಿದ್ದಾರೆ.

ಸಮಸ್ಯೆಗೆ ಪರಿಹಾರವೇನು?

  • ಕಾರ್ಕಳ ಭಾಗದಿಂದ ಉಡುಪಿಗೆ ಹೋಗುವ ಬಸ್ಸುಗಳು ಕಡ್ಡಾಯ ವಾಗಿ ಬಸ್ಸು ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಹತ್ತಿಳಿಸುವ ನಿಯಮ ಮಾಡಬೇಕು.
  • ಹೆಬ್ರಿಯಿಂದ ಉಡುಪಿಗೆ ಹೋಗುವ ಬಸ್ಸುಗಳು ಸರ್ಕಲ್‌ ಮಧ್ಯದಲ್ಲಿ ನಿಲ್ಲಿಸುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು.
  • ಮುಖ್ಯ ಸರ್ಕಲ್‌ನಿಂದ ಕೆನರಾ ಬ್ಯಾಂಕಿನವರೆಗೆ ಯಾವುದೇ ವಾಹನಗಳನ್ನು ನಿಲ್ಲಿಸಲು ಅವಕಾಶ ನೀಡಬಾರದು.
  • ಬ್ರಹ್ಮಾವರ ಭಾಗದಿಂದ ಬಜೆ ರಸ್ತೆಯಾಗಿ ಬರುವ ವಾಹನಗಳು ಬಸ್‌ ಸ್ಟ್ಯಾಂಡ್‌ ಪಕ್ಕದಲ್ಲಿಯೇ ಎಡಕ್ಕೆ ತಿರುಗಿ ರಾಷ್ಟ್ರೀಯ ಹೆದ್ದಾರಿಯನ್ನು ಸೇರಬೇಕು.

ಟ್ರಾಫಿಕ್‌ ಜಾಮ್‌ಗೆ ಕಾರಣಗಳು

  • ಕಾರ್ಕಳದಿಂದ ಉಡುಪಿ ಕಡೆಗೆ ಹೋಗುವ ಬಸ್ಸುಗಳು ಹಿರಿಯಡಕ ಸರ್ಕಲ್‌ ಬಳಿ ರಸ್ತೆ ಮಧ್ಯದಲ್ಲೇ ಜನರನ್ನು ಇಳಿಸಿ ಹತ್ತಿಸುವುದು.
  • ಹೆಬ್ರಿಭಾಗದಿಂದ ಉಡುಪಿಗೆ ಹೋಗುವ ಬಸ್‌ಗಳು ಸರ್ಕಲ್‌ ಬಳಿ ಇಡೀ ರಸ್ತೆಗೆ ಅಡ್ಡವಾಗಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸುವುದು.
  • ಸರ್ಕಲ್‌ ಬಳಿ ಮನಸೋ ಇಚ್ಛೆ ವಾಹನಗಳನ್ನು ಪಾರ್ಕ್‌ ಮಾಡುವುದು.
  • ನಾಲ್ಕು ರಸ್ತೆ ಸೇರುವ ಸರ್ಕಲ್‌ ಬಳಿ ಅಜಾಗರೂಕತೆಯಿಂದ ವಾಹನ ಚಲಾಯಿಸುವುದು.

ಒಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ 169ಎ ಜನರ ದಿನಚರಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿರುವರೂ, ನಿರಂತರ ಟ್ರಾಫಿಕ್‌ ಜಾಮ್‌ಗಳಿಂದಾಗಿ ಈ ರಸ್ತೆ ಈಗ ಸಾರ್ವಜನಿಕರಿಗೆ ತಲೆನೋವಿನ ಕಾರಣವಾಗಿದೆ. ಪ್ರಸ್ತುತ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಂಬಂಧಿತ ಇಲಾಖೆ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...