ಬೀದರ್‌ | ಅವಸಾನದ ಅಂಚಿನಲ್ಲಿ ಐತಿಹಾಸಿಕ ಜಲಸಂಗವಿ ಗ್ರಾಮದ ʼಶಾಸನ ಸುಂದರಿʼ

Date:

ಒಂಬತ್ತು ಶತಮಾನಗಳ ಇತಿಹಾಸ ಹೊಂದಿರುವ ಬೀದರ್‌ ಜಿಲ್ಲೆ ಹುಮನಾಬಾದ್‌ ತಾಲ್ಲೂಕಿನ ಜಲಸಂಗವಿ ಗ್ರಾಮದ ಪುರಾತನ ದೇವಾಲಯದ ಅಭಿವೃದ್ಧಿಗೆ ಸಮರ್ಪಕ ಯೋಜನೆ ರೂಪಿಸದ ಪರಿಣಾಮ ಐತಿಹಾಸಿಕ ತಾಣವೊಂದು ಪಾಳು ಬೀಳುವ ಹಂತ ತಲುಪಿದೆ.

ಕಲ್ಯಾಣ ಚಾಲುಕ್ಯರ ಪ್ರಸಿದ್ಧ ಅರಸ ಆರನೇ ವಿಕ್ರಮಾದಿತ್ಯನು ಈ ದೇವಾಲಯ ನಿರ್ಮಿಸಿದ್ದಾನೆ ಎಂಬುದು ಇತಿಹಾಸದ ಪುಟಗಳಲ್ಲಿ ಉಲ್ಲೇಖವಾಗಿದೆ. ದೊಡ್ಡ ಗಾತ್ರದ ಚಪ್ಪಟೆ ಕಲ್ಲುಗಳಿಂದ ನಿರ್ಮಿಸಲಾದ ದೇವಾಲಯದ ಸುತ್ತು ಗೋಡೆಯ ಮೇಲೆ 30ಕ್ಕೂ ಅಧಿಕ ಮದನಿಕೆಯರ ಚಿತ್ರಗಳನ್ನು ಕೆತ್ತಲಾಗಿದೆ. ನಕ್ಷತ್ರದ ಆಕಾರದಲ್ಲಿರುವ ಈ ದೇವಾಲಯವನ್ನು ಕಲ್ಮೇಶ್ವರ ದೇವಾಲಯ, ಈಶ್ವರ ದೇವಾಲಯ, ಮಹಾದೇವ ದೇವಾಲಯ ಎಂದು ಕರೆಯುತ್ತಾರೆ.

ಗ್ರಾಮದ ಪೂರ್ವಾಭಿಮುಖವಾಗಿರುವ ಐತಿಹಾಸಿಕ ದೇವಾಲಯ ಮುಖದ್ವಾರವಿದ್ದು, ಕಲ್ಯಾಣಿ ಚಾಲುಕ್ಯ ಶೈಲಿಯ ವಾಸ್ತುಶಿಲ್ಪ ಪ್ರದರ್ಶಿಸುವ ಈ ದೇವಾಲಯ ಬೃಹದಾಕಾರದ ಒಂಬತ್ತು ಕಂಬಗಳಿಂದ ಕೂಡಿದ ಮಂಟಪವಿದೆ. ಗರ್ಭಗೃಹ, ಅಂತರಾಳ ಹಾಗೂ ನವಗ್ರಹ ಹೊಂದಿದ್ದು, ಗರ್ಭಗ್ರಹದಲ್ಲಿ ಶಿವಲಿಂಗವಿದ್ದು, ಹೊರಗಡೆ ನಂದಿ ಮೂರ್ತಿಯಿದೆ. ಚಪ್ಪಟೆ ಕಲ್ಲಿನ ಗೋಡೆಯ ಮೇಲೆ ಅಲ್ಲಲ್ಲಿ ವಿವಿಧ ಭಂಗಿಯಲ್ಲಿ ಕೆತ್ತಲಾದ ನಾಟ್ಯ ರಾಣಿಯರ, ಗಣಪತಿ ಶಿಲ್ಪಕಲೆ ನಾಡಿನ ಐತಿಹಾಸಿಕ ಗತ ವೈಭವ ಸಾರಿ ಹೇಳುವಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದ ಗತ ವೈಭವ ಸಾರುವ ಈ ಪುರಾತನ ದೇವಾಲಯ ಪುರಾತತ್ವ ಇಲಾಖೆಯ ಸುಪರ್ದಿಗೆ ಒಳಪಟ್ಟಿದೆ. ಆದರೆ ಅಗತ್ಯವಾಗಿ ನಡೆಯಬೇಕಾದ ಜೀರ್ಣೋದ್ಧಾರ ಕಾರ್ಯ ಮಾತ್ರ ಇನ್ನೂ ನಡೆದಿಲ್ಲ. ಇದರಿಂದ ಕಟ್ಟಡದ ಅವಶೇಷಗಳು ಉರುಳಿ ಬೀಳುವ ಹಂತದಲ್ಲಿವೆ. ಪೂರ್ಣ ಸುತ್ತುಗೋಡೆ ಇರದ ಕಾರಣ ಕಟ್ಟಡದ ಸುತ್ತಲೂ ಜಾನುವಾರು ನೆಲೆಸುವಂತಾಗಿದೆ. ಸೂಕ್ತ ರಕ್ಷಣೆ ಇಲ್ಲದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಇತಿಹಾಸಕಾರರು ಬೇಸರ ವ್ಯಕ್ತಪಡಿಸುತ್ತಾರೆ.

ಗಮನ ಸೆಳೆಯುವ ಸುಂದರಿ ಶಾಸನ:

ಈ ದೇವಾಲಯದ ಶಿಲ್ಪಗಳ ಪ್ರಮುಖ ಆಕರ್ಷಣೆಯೆಂದರೆ ʼಶಾಸನ ಸುಂದರಿʼ (ಶಿಲಾಬಾಲಿಕಾ) ಎಂಬ ಮಹಿಳೆಯ ಶಿಲ್ಪ ಹಾಗೂ ಕನ್ನಡ ಅಕ್ಷರಗಳಲ್ಲಿ ಸಂಸ್ಕೃತ ಶಾಸನವನ್ನು ಕಟ್ಟಡದ ಒಂದು ಗೋಡೆಯ ಮೇಲೆ ಕೆತ್ತಲಾಗಿದೆ. ನರ್ತಿಸುವ ಭಂಗಿಯಲ್ಲಿರುವ ಆಕೃತಿಯು ಶಿಲಾಶಾಸನವನ್ನು ಕೆತ್ತಿರುವಂತೆ ಕಂಡುಬರುತ್ತದೆ. ಸುಂದರಿ ಶಾಸನವು ಚಾಲುಕ್ಯ ರಾಜವಂಶದ ಆರನೇ ವಿಕ್ರಮಾದಿತ್ಯನ ವರ್ಣನೆ ಕುರಿತು ತಿಳಿಸುತ್ತದೆ. ಈ ದೇವಾಲಯದ ಶಿಲ್ಪಕಲೆಯು ಬೇಲೂರು, ಹಳೇಬೀಡು ಮತ್ತು ಸೋಮನಾಥಪುರಕ್ಕೆ ಸ್ಪೂರ್ತಿಯಾಗಿವೆ ಎನ್ನುವುದು ಪ್ರವಾಸಿಗರ ಅಭಿಮತ.

ಹಿಂಭಾಗ ದೇವಾಲಯ
ದೇವಾಲಯದ ಹೊರಭಾಗದಲ್ಲಿರುವ ಮಂದಾಕಿನಿ ಶೈಲಿಯ ಶಿಲ್ಪಕಲೆ – ಚಿತ್ರ: ಈದಿನ.ಕಾಮ್

ನಾಡಿನ ಗತ ವೈಭವ ಸಾರುವ ಕಲಾಕೃತಿಗಳು, ನೋಡುಗರ ಕಣ್ಮನ ಸೆಳೆಯುವ ಸುಂದರ ಕೆತ್ತನೆಯ ಕಟ್ಟಡ ಇಂದಿಗೂ ಉಳಿದಿರುವುದೇ ಒಂದು ಅಪರೂಪ, ಐತಿಹಾಸಿಕ ಸ್ಥಳವೊಂದು ಪ್ರವಾಸಿ ತಾಣವಾಗಿ ರೂಪುಗೊಳ್ಳಬೇಕಾದರೆ ಅಧಿಕಾರಿಗಳ, ಜನಪ್ರತಿನಿಧಿಗಳ ಇಚ್ಚಾಶಕ್ತಿ ಮುಖ್ಯ. ಆದರೆ ಎಲ್ಲರೂ ನಿರ್ಲಕ್ಷ್ಯವಹಿಸಿದ ಪರಿಣಾಮ ಇಂದು ಗಡಿ ಜಿಲ್ಲೆಯ ಅಪರೂಪದ ದೇವಾಲಯ ಅನಾಥವಾಗಿದೆ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಗ್ರಾಮಸ್ಥರು.

“ನಮ್ಮೂರಲ್ಲಿರುವ ಪುರಾತನ ಕಲ್ಮೇಶ್ವರ ದೇವಾಲಯ ಕರ್ನಾಟಕ ಅಷ್ಟೇ ಅಲ್ಲದೇ ದೇಶದಲ್ಲೇ ವೈಶಿಷ್ಟ್ಯತೆಯಿಂದ ನಿರ್ಮಿಸಿದ ದೇವಾಲಯವಾಗಿದೆ. ಇಲ್ಲಿಯ ವಾಸ್ತಶಿಲ್ಪ, ಶಿಲಾಶಾಸನ ವೀಕ್ಷಿಸಲು ದೇಶ-ವಿದೇಶದ ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಐತಿಹಾಸಿಕ ತಾಣವೊಂದು ಪಾಳು ಬಿದ್ದ ಪರಿಣಾಮ ಪ್ರವಾಸಿಗರ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿದೆ. ಕೂಡಲೇ ಪುರಾತತ್ವ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪ್ರಾಚೀನ ಕಟ್ಟಡದ ಜೀರ್ಣೋದ್ಧಾರಕ್ಕೆ ಮುಂದಾಗಿ ಪ್ರವಾಸಿತಾಣವಾಗಿ ರೂಪಿಸಬೇಕೆಂದು” ಗ್ರಾಮಸ್ಥ ಭೀಮರೆಡ್ಡಿ ಜಲಸಂಗವಿ ಈದಿನ.ಕಾಮ್‌ ದೊಂದಿಗೆ ಮಾತನಾಡಿ ಆಗ್ರಹಿಸಿದ್ದಾರೆ.

ಸುಂದರಿ ಶಾಸನ ಜಲಸಂಗಿ ಜ
ಶಾಸನ ಸುಂದರಿ ಶಿಲಾಶಾಸನ ಬರೆಯುತ್ತಿರುವ ಭಂಗಿ

ಈ ಬಗ್ಗೆ ಜಲಸಂಗವಿ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಪ್ಪ ಈದಿನ.ಕಾಮ್‌ ದೊಂದಿಗೆ ಮಾತನಾಡಿ, “ಕಲ್ಯಾಣ ಚಾಲುಕ್ಯರ ಅರಸ ನಿರ್ಮಿಸಿದ ಮಹಾದೇವ ದೇವಾಲಯ ಅಥವಾ ಈಶ್ವರ ದೇವಾಲಯ ಅತ್ಯಂತ ಸುಂದರ ರಚನೆಯಿಂದ ಕೂಡಿದೆ, ಕರ್ನಾಟಕ ಐತಿಹಾಸಿಕ ಪರಂಪರೆ ಸಾರುವ ಈ ಕಟ್ಟಡ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಯಿಂದ ಐದು ಲಕ್ಷ ಅನುದಾನದಲ್ಲಿ ಉದ್ಯಾನವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ, ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು. ಅಲ್ಲದೇ ಪ್ರವಾಸಿಗರಿಗೆ ಅನುಕೂಲತೆಗಾಗಿ ಮೂಲಭೂತ ಸೌಕರ್ಯ, ಸಾರಿಗೆ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯ ಒದಗಿಸಲು ಸಂಬಂಧಪಟ್ಟ ಮೇಲಾಧಿಕಾರಿಗಳ ಜೊತೆಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಐತಿಹಾಸಿಕ ತಾಣವಾಗಿ ರೂಪಿಸುವ ಭರವಸೆ:

ಪುರಾತತ್ವ ಇಲಾಖೆಯ ಅಧಿಕಾರಿ ರಾಜರಾಮ ಈದಿನ.ಕಾಮ್‌ ದೊಂದಿಗೆ ಮಾತನಾಡಿ, ಹುಮನಾಬಾದ್‌ ತಾಲೂಕಿನ ಜಲಸಂಗವಿ ಗ್ರಾಮದ ಪುರಾತನ ದೇವಾಲಯ ಸಂರಕ್ಷಣೆಗೆ ಇಲಾಖೆಯಿಂದ ಸುತ್ತುಗೋಡೆ ನಿರ್ಮಿಸುವ ಯೋಜನೆಯಿದೆ. ಆದರೆ ದೇವಾಲಯ ಮುಂಭಾಗ ಜಾಗದ ತಕರಾರು ಹಿನ್ನಲೆಯಲ್ಲಿ ಗೋಡೆ ಕಾಮಗಾರಿ ಮುಂದುವರೆಸಲು ಸಾಧ್ಯವಾಗುತ್ತಿಲ್ಲ. ಸುತ್ತಗೋಡೆ ನಿರ್ಮಿಸಿ, ಪ್ರವಾಸಿಗರಿಗೆ ಅನುಕೂಲತೆಗಾಗಿ ಅಗತ್ಯವಿರುವ ಶುದ್ಧ ಕುಡಿಯುವ ನೀರು, ಉದ್ಯಾನ ಸೇರಿದಂತೆ ಎಲ್ಲಾ ರೀತಿಯ ಅಭಿವೃದ್ಧಿಗೊಳಿಸಿ ಪ್ರವಾಸಿ ತಾಣವಾಗಿ ಮಾಡಬಹುದು, ಕಂದಾಯ ಇಲಾಖೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಜೀರ್ಣೋದ್ಧಾರ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಹುಮನಾಬಾದ್‌ ತಹಸೀಲ್ದಾರ್‌ ಅಂಜುಮ್‌ ತಬಸುಮ್ ಈದಿನ.ಕಾಮ್‌ ದೊಂದಿಗೆ ಮಾತನಾಡಿ, “ಈ ಬಗ್ಗೆ ತಾಲೂಕು ಪಂಚಾಯತ್‌ ಕಾರ್ಯ ನಿರ್ವಾಹಕ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವೆ, ಐತಿಹಾಸಿಕ ಕಟ್ಟಡ ಸಂರಕ್ಷಣೆಗೆ ಬೇಕಾದ ಅಗತ್ಯ ನೆರವು ಒದಗಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು” ಎಂದು ಹೇಳಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...