ಕೊಡಗು | ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ : ಎಲ್. ಎನ್. ಮುಕುಂದರಾಜ್

Date:

ಕೊಡಗು ಜಿಲ್ಲೆ,ಕುಶಾಲನಗರ ಸಮೀಪದ ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ, ಕೊಡಗು ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವ ವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ‘ ಸಮಗ್ರ – ಸಮತೆಯೆಡೆಗೆ ಸಾಹಿತ್ಯ ‘ ಎಂಬ ವಿಷಯದ ರಾಷ್ಟಿಯ ವಿಚಾರ ಸಂಕಿರಣದಲ್ಲಿ, ಸಾಹಿತಿ ಅರ್ಜುನ್ ಮೌರ್ಯರವರ “ ಬೆಂದೊಡಲ ಕುಣಿತ ” ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ‘ ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ ‘ ಎಂದು ಅಭಿಮತ ವ್ಯಕ್ತಪಡಿಸಿದರು.

” ವಿಜ್ಞಾನ – ತಂತ್ರಜ್ಞಾನ ರಂಗದಲ್ಲಿ ಮುಂದುವರಿದಿದ್ದೇವೆ ಎಂದು ಹೇಳಿಕೊಳ್ಳುವ ನಾವೇ ಶಿಕ್ಷಣ ರಂಗದಲ್ಲಿ ಕಳೆದ 75 ವರ್ಷಗಳಲ್ಲಿ ಹಿಂದುಳಿದವರಾಗಿಯೇ ಉಳಿದಿದ್ದೇವೆ. ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ ಎಂದು ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದರು. ಮಹಿಳೆಯರ ಸುರಕ್ಷಿತತೆ ಮತ್ತು ಸಮಾನತೆಯ ದೃಷ್ಟಿಯಲ್ಲಿ ನಮ್ಮ ರಾಷ್ಟ್ರ ಇನ್ನೂ ಹಿಂದುಳಿದ ರಾಷ್ಟ್ರಗಳ ಪಟ್ಟಿಯಲ್ಲೇ ಉಳಿದಿದೆ. ಶಿಕ್ಷಣ ಎಂಬುದು ಶೋಷಣೆಯನ್ನು ಪ್ರಶ್ನಿಸಲು ಕಲಿಸುತ್ತದೆ. ಆದರೆ, ಇಂದು ನಾವು ಪ್ರಶ್ನಿಸಲು ಇರುವ ಹಕ್ಕನ್ನೇ ಪರೋಕ್ಷವಾಗಿ ಕಳೆದುಕೊಳ್ಳುತ್ತಿದ್ದೇವೆ. ನಾವು ತಿಳಿದೂ ತಿಳಿಯದೆಯೂ ಗುಲಾಮಗಿರಿಗೆ ದೂಡಲ್ಪಡುತ್ತಿದ್ದೇವೆ ” ಎಂದರು.

ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಆರ್.ಗಂಗಾಧರ ಕಾರ್ಯಕ್ರಮ ಉದ್ಘಾಟನಾ ಭಾಷಣದಲ್ಲಿ ಮಾತನಾಡಿ ”ಸಾಹಿತ್ಯ ಮನುಷ್ಯ ವಿರೋಧಿಯಾಗಿರಲು ಸಾಧ್ಯವಿಲ್ಲ. ಮನುಷ್ಯ ವಂಶದ ಉದ್ದಾರ ಮತ್ತು ಏಳಿಗೆ ಸಾಹಿತ್ಯದ ಮೂಲಕ ಮಾತ್ರ ಸಾಧ್ಯವಾಗಿದೆ. ಸಾಹಿತ್ಯ ಸಮಾಜವನ್ನು ಒಡೆಯುವಂತದ್ದು ಆಗಬಾರದು. ಸಾಹಿತ್ಯ ಮನುಷ್ಯನನ್ನು ಒಂದುಗೂಡಿಸುವಂತಾಗಬೇಕು. ದೇಶದ ಸ್ವಾಭಿಮಾನ ಮತ್ತು ಹೆಮ್ಮೆ ಭೌತಿಕ ಸೌಕರ್ಯಗಳಿಂದ ಅಳೆಯಬಾರದು. ದೇಶದ ಸ್ವಾಭಿಮಾನ ಮತ್ತು ಘನತೆಗೆ ಸಾಹಿತ್ಯ ಅಳತೆಗೋಲು ಆಗಬೇಕು”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಡಗು ವಿಶ್ವವಿದ್ಯಾಲಯ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಮಾತನಾಡಿ ” ಅಭಿವೃದ್ಧಿಯೆಂಬುದು ಶಿಕ್ಷಣದಿಂದ ಮಾತ್ರ ಸಾಧ್ಯ. ಮೌಲ್ಯಯುತ ಶಿಕ್ಷಣವೇ ಇಂದಿನ ಅಗತ್ಯ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಶಿಕ್ಷಣದ ಮೂಲಕ ಮೌಲ್ಯಯುತ ಸಮಾಜದ ಕನಸು ಕಂಡಿದ್ದರು ” ಎಂದರು.

ಸಾಮಾಜಿಕ ಚಿಂತಕ ವಿ.ಪಿ.ಶಶಿಧರ್ ಮಾತನಾಡಿ ‘ ಮಾನವ ಪ್ರೀತಿ ಮತ್ತು ಮಾನವ ಐಕ್ಯತೆಗೆ ಸಾಹಿತ್ಯಗಳು ನೆರವಾಗಿವೆ. ಸಾಹಿತ್ಯಗಳು ನಮ್ಮನ್ನು ಉತ್ತಮ ಸಮಾಜದೆಡೆಗೆ ಕೈಹಿಡಿದು ನಡೆಸಿಕೊಂಡು ಹೋಗುತ್ತದೆ. ನಮ್ಮ ಸಮಾಜವು ಅತಿಯಾದ ಅಗ್ನಿ ಪರೀಕ್ಷೆಯನ್ನು ಎದುರು ನೋಡುತ್ತಿದೆ. ಯುದ್ಧಗಳು ಸಮಸ್ಯೆಗೆ ಪರಿಹಾರವಾಗುವುದಿಲ್ಲ ‘ ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಅಧಿಕಾರಿಗಳ ತಪ್ಪು ನಿರ್ಧಾರವೇ ಹೊರಗುತ್ತಿಗೆ ನೌಕರರ ಅಭದ್ರತೆಗೆ ಕಾರಣ : ಸಂಕೇತ್ ಪೂವಯ್ಯ

ದಸಂಸ ಹೋರಾಟಗಾರ ಹರೀಶ್ ಮಾಗಲು,ಸಾಹಿತಿ ಅರ್ಜುನ್ ಮೌರ್ಯ, ಕೊಡಗಿನ ಕವಯಿತ್ರಿ ಕೆ.ಜಿ.ರಮ್ಯ, ಪರಿವರ್ತನಾ ಚಳವಳಿಯ ಮೋಹನ್ ಮೌರ್ಯ, ಡಾ..ಹೇಮಂತ್ ಕುಮಾರ್, ಡಾ.ಝಮೀರ್ ಅಹಮದ್, ಪಿ.ಕೆ.ಅಬ್ದುಲ್ ರೆಹೆಮಾನ್, ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜನಾರ್ಧನ್, ಅಹಿಂದ ಒಕ್ಕೂಟದ ಸಂಘಟಕ ಟಿ.ಎಂ ಮುದ್ದಯ್ಯ, ಜೆ ಸೋಮಣ್ಣ, ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...