ಗದುಗಿನ ಇತಿಹಾಸ, ಸ್ಮಾರಕಗಳು ಸರ್ವಕಾಲಕ್ಕೂ ಸ್ಮರಣೀಯ: ಇತಿಹಾಸ ಸಂಶೋಧಕ ಅ ದ ಕಟ್ಟಿಮನಿ

Date:

ಕರ್ನಾಟಕದ ಸಾಂಸ್ಕೃತಿಕ ಇತಿಹಾಸದ ಅಧ್ಯಯನದಲ್ಲಿ ಗದುಗಿನ ಇತಿಹಾಸ ಮತ್ತು ಸ್ಮಾರಕಗಳು ಸರ್ವಕಾಲಕ್ಕೂ ಸ್ಮರಣೀಯವಾಗಿವೆ. ಜಿಲ್ಲೆಯ ಇತಿಹಾಸ ಮತ್ತು ಸಂಸ್ಕೃತಿಯ ಸಂವರ್ಧನೆಯಲ್ಲಿ ಭೌಗೋಳಿಕ ಸಂಪನ್ಮೂಲಗಳ ಪಾತ್ರ ಅನನ್ಯವಾಗಿದೆ ಎಂದು ಇತಿಹಾಸ ಸಂಶೋಧಕ ಮತ್ತು ಪ್ರವಾಸಿ ಮಾರ್ಗದರ್ಶಿ ಅ ದ ಕಟ್ಟಿಮನಿ ಅವರು ಹೇಳಿದರು.

ಗದಗ ಜಿಲ್ಲೆಯ ಹುಲಕೋಟಿಯ ಕೆ ಎಚ್ ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಶನಿವಾರ ಡಾ. ಅಪ್ಪಣ್ಣ ಹಂಜೆ ಅವರ ಮಾರ್ಗದರ್ಶನದಲ್ಲಿ ‘ಗದಗ ನಗರದ ಇತಿಹಾಸ ಮತ್ತು ಸ್ಮಾರಕಗಳು’ ಕುರಿತು ಕ್ಷೇತ್ರಕಾರ್ಯ ಅಧ್ಯಯನ ಕೈಗೊಂಡ ವೇಳೆ ಮಾತನಾಡಿದರು.

ಗದಗ ನಗರದ ಇತಿಹಾಸ ಮತ್ತು ಸ್ಮಾರಕಗಳನ್ನು ಪರಿಚಯಿಸುತ್ತಾ, ಸ್ಥಳೀಯ ತ್ರಿಕೂಟೇಶ್ವರ, ಸರಸ್ವತಿ, ವೀರನಾರಾಯಣ, ಕರಿದೇವರ ಗುಡಿ, ರಾಮಲಿಂಗೇಶ್ವರ ದೇವಾಲಯಗಳು ಹಾಗೂ ಜುಮ್ಮಾ ಮಸೀದಿಯ ನಿರ್ಮಾತೃ, ಕಾಲಮಾನ, ವಾಸ್ತುಕಲೆ ವೈಶಿಷ್ಟ್ಯಗಳು, ಇವುಗಳ ಪೂಜೆ-ಪುನಸ್ಕಾರ, ಜೀರ್ಣೋದ್ಧಾರ ಇತ್ಯಾದಿ ಚಟುವಟಿಕೆಗಳಿಗೆ ಪ್ರಭುಗಳು ಮತ್ತು ಪ್ರಜೆಗಳು ಕೊಡಮಾಡಿದ ದಾನ-ದತ್ತಿಗಳನ್ನು ದಾಖಲಿಸಿರುವ ಶಾಸನಗಳನ್ನು ಸವಿಸ್ತಾರವಾಗಿ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಅಪ್ಪಣ್ಣ ಹಂಜೆ ಅವರು ವಿದ್ಯಾರ್ಥಿಗಳಿಗೆ ಗದುಗಿನ ಸ್ಮಾರಕಗಳು ಮತ್ತು ಶಿಲ್ಪಗಳ ಪರಿಕಲ್ಪನೆಗಳು, ವಾಸ್ತು ಲಕ್ಷಣಗಳು, ಪ್ರತಿಮಾ ಲಕ್ಷಣಗಳನ್ನು ವಿವರಿಸಿ, “ಕರ್ನಾಟಕದ ವಾಸ್ತುಶಿಲ್ಪ ಕಲೆಗಳ ಅಧ್ಯಯನದಲ್ಲಿ ಇವುಗಳ ಪಾತ್ರ ಅನನ್ಯವಾಗಿದ್ದು, ತ್ರಿಕೂಟೇಶ್ವರ, ವೀರನಾರಾಯಣ, ಜುಮ್ಮಾ ಮಸೀದಿಗಳ ಆಡಳಿತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ನಿರ್ವಹಣೆಯನ್ನು ಒಂದೇ ಕಮಿಟಿ ನಿರ್ವಹಿಸುತ್ತಿದ್ದ ಸಂಗತಿ ಜಿಲ್ಲೆಯ ಸಾಮರಸ್ಯ, ಸಹಬಾಳ್ವೆ, ಸಮನ್ವಯತೆ, ಸೌಹಾರ್ದತೆ, ಸಮಾನತೆ, ಸಹಿಷ್ಣುತೆ ಜೀವನ ಮೌಲ್ಯಗಳಿಗೆ ಅತ್ಯುತ್ತಮ ನಿದರ್ಶನವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ದಸಂಸ ಮುಖಂಡ ಉದಯ ಕಡಕೋಳ ಸ್ಮರಣಾರ್ಥ ನುಡಿನಮನ ಕಾರ್ಯಕ್ರಮ

ಇತಿಹಾಸ ಉಪನ್ಯಾಸಕ ಪ್ರೊ. ಬಸವಂತೆಪ್ಪ ದೊಡ್ಡಮನಿ ಅವರು ವಿದ್ಯಾರ್ಥಿಗಳಿಗೆ ಗದುಗಿನ ಸ್ಮಾರಕಗಲ್ಲುಗಳು, ಬಾವಿಗಳು, ಮಠಗಳು, ಕೆರೆಗಳ ಹಿರಿಮೆಯನ್ನು ಪರಿಚಯಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...