ಹೊಳೆನರಸೀಪುರ ಕ್ಷೇತ್ರ | ಬದಲಾವಣೆ ಬಯಸುತ್ತಿದ್ದಾರೆಯೇ ಮತದಾರರು?

Date:

ಹೊಳೆನರಸೀಪುರ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ತವರು ಕ್ಷೇತ್ರ. ಹಾಗಾಗಿ ಈ ಕ್ಷೇತ್ರವು ಹಲವು ದಶಕಗಳಿಂದ ಜೆಡಿಎಸ್‌ ಭದ್ರಕೋಟೆಯಾಗಿಯೇ ಉಳಿದಿದೆ. ಪ್ರತಿ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಯಾಗಿರುವ ಕಾಂಗ್ರೆಸ್ ಇಲ್ಲಿ ಗೆಲವು ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಲೇ ಇದೆ.

ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರವು ಜೆಡಿಎಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಭದ್ರ ಕೋಟೆಯಾಗಿದೆ. ಈ ಕ್ಷೇತ್ರದಲ್ಲಿ 1962 ರಿಂದ 1985 ರವರೆಗೆ ಮಾಜಿ ಪ್ರಧಾನಿ ದೇವೇಗೌಡರು ಎರಡು ಬಾರಿ ಪಕ್ಷೇತರ, ಒಂದು ಬಾರಿ ಕಾಂಗ್ರೆಸ್, ಮೂರು ಬಾರಿ ಜೆಡಿಎಸ್‌ನಿಂದ ಸತತ ಆರು ಬಾರಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ವಿಧಾನಸೌಧದ ಮೆಟ್ಟಿಲೇರಿದ್ದಾರೆ.

1994ರ ಚುನಾವಣೆಯಲ್ಲಿ ಎಚ್ ಡಿ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದರೆ, ಜಿ ಪುಟ್ಟಸ್ವಾಮಿಗೌಡ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರು. ಎಚ್‌ ಡಿ ರೇವಣ್ಣ ಅವರು ಇವರ ವಿರುದ್ಧ ಕೇವಲ 122 ಮತಗಳ ಅಂತರದಿಂದ ಪ್ರಯಾಸದ ಗೆಲವು ಸಾಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2004ರಿಂದ 2018ರವರೆಗೆ ಎಚ್‌ ರೇವಣ್ಣ ಸತತವಾಗಿ ಜೆಡಿಎಸ್‌ ಗೆಲವು ಸಾಧಿಸುತ್ತಲೇ ಬಂದಿದ್ದಾರೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಪುರಸಭೆಯ ಮಾಜಿ ಅಧ್ಯಕ್ಷ ಎಚ್ ವಿ ಪುಟ್ಟರಾಜು ಮತ್ತು ಓಲೆ ಕುಮಾರ್ ಅವರು ಜೆಡಿಎಸ್‌ ಪ್ರಮುಖ ನಾಯಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಇದು ಜೆಡಿಎಸ್‌ಗೆ ಕೊಂಚ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನನಾಗಿದೆ. ಇದು ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್‌ಗೆ ವರದಾನ ಆಗಲಿದೆ ಎಂಬ ಲೆಕ್ಕಾಚಾರವಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಅರ್ಚನಾ

ರಾಜ್ಯದಲ್ಲಿ ಜೆಡಿಎಸ್ ಬಹುಮತದಿಂದ ಅಧಿಕಾರಕ್ಕೆ ಬರುವುದು ಕಷ್ಟವಿದ್ದು, ಮತ್ತೊಂದೆಡೆ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್ ಈ ಬಾರಿ ಅನುಕೂಲ ಉಂಟಾಗಲಿದೆ ಎಂಬ ಕಾರಣಕ್ಕೆ ಜೆಡಿಎಸ್ ಮುಖಂಡರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿರುವ ದೇವರಾಜೇಗೌಡ, ಹಿಂದೆ ಕಾಂಗ್ರೆಸ್‌ನಲ್ಲಿಯೇ ಇದ್ದವರು. ಹೈಕೋರ್ಟ್‌ ವಕೀಲಾರಾಗಿರುವ ಇವರು ಕಳೆದ ಎರಡು ವರ್ಷಗಳಿಂದಲೇ ತಂಡಕಟ್ಟಿಕೊಂಡು ಹೊಳೆನರಸೀಪುರದಲ್ಲಿ ಸುತ್ತುತ್ತಿದ್ದಾರೆ. ಆದರೆ, ಹೊಳೆನರಸೀಪುರದಲ್ಲಿ ಈವರೆಗೆ ಒಂದು ಬಾರಿಯೂ ಬಿಜೆಪಿ ಖಾತೆ ತೆರದಿಲ್ಲ. ಹಾಘಾಗಿ ಈ ಬಾರಿಯೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆಯೇ ನೇರ ಹಣಾಹಣಿ ನಡೆಯುವ ಸಾಧ್ಯತೆ ಹೆಚ್ಚು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...