ಕಲಬುರಗಿ | ಹನಿಟ್ರ್ಯಾಪ್ ಆರೋಪ; ದಲಿತ ಸೇನೆ ರಾಜ್ಯಾಧ್ಯಕ್ಷ ಸೇರಿ ಹಲವರ ವಿರುದ್ಧ ಎಫ್‌ಐಆರ್: ಓರ್ವನ ಬಂಧನ

Date:

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ​​ಖೆಡ್ಡಾಗೆ ಬೀಳಿಸುತ್ತಿದ್ದ ದಂಧೆಯೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಹನಿಟ್ರ್ಯಾಪ್ ದಂಧೆ ಆರೋಪಿಸಿ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ ಒಟ್ಟು ಎಂಟು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆರೋಪಿಗಳು ಸಾಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿ, ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದೊಡ್ಡ ದೊಡ್ಡ ಉದ್ಯಮಿ, ಸರ್ಕಾರಿ ಅಧಿಕಾರಿಗಳನ್ನು ಗುರಿ ಮಾಡಿರುವುದಾಗಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಈ ಸಂಬಂಧ ಮಹಾರಾಷ್ಟ್ರ ಮೂಲದ ಇಬ್ಬರು ಯುವತಿಯರು ಮತ್ತು ಕಲಬುರಗಿ ಜಿಲ್ಲೆಯ ಓರ್ವ ವಿವಾಹಿತ ಮಹಿಳೆಯು ಭೀಮ್ ಆರ್ಮಿ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ಮಾಡಿದ್ದಾರೆ.

“ದಲಿತ ಸೇನೆ ರಾಜ್ಯಾಧ್ಯಕ್ಷ, ವಕೀಲರೂ ಆಗಿರುವ ಹಣಮಂತ ಯಳಸಂಗಿ ಹಾಗೂ ಸಹಚರರು ತಮ್ಮನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಹಲವರಿಂದ ಹಣ ಪಡೆದಿದ್ದಾರೆ. ಹನಿಟ್ರ್ಯಾಪ್​ ಮೂಲಕ ಕಮಲಾಪುರ ಪೊಲೀಸ್​​ ಠಾಣೆ ಪೇದೆಯನ್ನು ತಮ್ಮ ಖೆಡ್ಡಾಕ್ಕೆ ಕೆಡವಿಕೊಂಡಿದ್ದಾರೆ. ಬಳಿಕ, ಪೊಲೀಸ್​​ ಪೇದೆಗೆ ಬ್ಲ್ಯಾಕ್ ಮೇಲ್ ಮಾಡಿ 7 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಹೀಗೆ ಉದ್ಯಮಿಯೊಬ್ಬರಿಂದ 40 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳು ಓರ್ವ ಯುವತಿಗೆ ಗರ್ಭಪಾತ ಮಾಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಗಣೇಶ ಮೂರ್ತಿ ತರಲು ತೆರಳುತ್ತಿದ್ದ ವೇಳೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಯಳಸಂಗಿ ಸಹಚರ ರಾಜು ಲೆಂಗಟಿ ಬಂಧನ

ಯುವತಿಯರು ಮತ್ತು ಮಹಿಳೆಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮೂಲಕ ಹಲವರಿಂದ ಹಣ ಪಡೆದ ಆರೋಪದ ಮೇಲೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹನುಮಂತ್ ಯಳಸಂಗಿ ಅವರ ಸಹಚರ ಕಮಲಾಪುರ ಸಂಘಟನೆಯ ತಾಲೂಕು ಅಧ್ಯಕ್ಷ ರಾಜು ಲೆಂಗಟಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

image 4 1
ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಸಹಚರ ರಾಜು ಲೆಂಗಟಿ

ಈ ಪ್ರಕರಣದ ಕುರಿತು ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಡಿ. ಅವರು ಸಂತ್ರಸ್ತೆಯರ ಅಹವಾಲುಗಳನ್ನು ಕೇಳಿ, ಪ್ರಕರಣದ ತನಿಖೆಗೆ ಸೂಚಿಸಿದ್ದರು. ರಾಜು ಲೆಂಗಟಿಯನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಬಂಧನ ನಡೆಸಲು ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...