ಉಡುಪಿ | ಯುವ ವಕೀಲರಿಗೆ ಹನಿಟ್ರ್ಯಾಪ್‌ ಯತ್ನ : ಪ್ರಕರಣ ದಾಖಲು

Date:

ಯುವ ವಕೀಲ ಒಬ್ಬರಿಗೆ ಹೆದರಿಸಿ ಹಣ ವಸೂಲಿ ಮಾಡಿಕೊಂಡು ಹೋಗಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ದೇವೇಂದ್ರ ಮತ್ತು ಮೂಕಾಂಬಿಕ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ನೀಲ್ ಬ್ರಾಯನ್ ಪಿರೇರಾ ಎಂಬ ವಕೀಲರು ಕುಂದಾಪುರ ನ್ಯಾಯಾಲಯದಲ್ಲಿ ವಕೀಲರಾಗಿ ಕೆಲಸವನ್ನು ಮಾಡಿಕೊಂಡಿದ್ದು ಕೋಟದಲ್ಲಿ ತನ್ನ ಹಿರಿಯ ವಕೀಲರ ಬಳಿ ಕಿರಿಯ ಸಹಾಯಕನಾಗಿ ಕೆಲಸಮಾಡಿಕೊಂಡಿರುತ್ತಾರೆ, 2023 ರ ಜನವರಿ ತಿಂಗಳಲ್ಲಿ ನೀಲ್ ಅವರು ಕಚೇರಿಯಲ್ಲಿ ಇದ್ದಾಗ ದೇವೆಂದ್ರ ಸುವರ್ಣ ಎಂಬವರು ಮೂಕಾಂಬು ಎಂಬ ಮಹಿಳೆಯನ್ನು ಕಚೇರಿಗೆ ಕರೆದುಕೊಂಡು ಬಂದು ಯಾವುದೋ ಒಂದು ಕೇಸಿನ ಬಗ್ಗೆ ಮಾತಾಡಿಕೊಂಡು ಹೋಗಿರುತ್ತಾರೆ, ಅದೇ ಕೇಸಿನ ವಿಚಾರವಾಗಿ ಮಾತನಾಡಲು ಮೂಕಾಂಬುರವರು ನೀಲ್ ಅವರ ಮೊಬೈಲ್ ನಂಬರ್ ಪಡೆದಕೊಂಡಿದ್ದು ನಂತರ ದೇವೆಂದ್ರ ಸುವರ್ಣ ಮೂಕಾಂಬುರವರೊಂದಿಗೆ ಅದೇ ಕಚೇರಿಗೆ ಆಗಮಿಸಿ ನೀಲ್ ಅವರನ್ನು ಉದ್ದೇಶಿಸಿ ನೀನು ನನಗೆ ಮತ್ತು ಮೂಕಾಂಬು ಅವರಿಗೆ ರೂ 50000 ಹಣವನ್ನು ನೀಡಬೇಕು ಇಲ್ಲವಾದಲ್ಲಿ “ಗ್ರಾಫಿಕ್ಸ್” ತಂತ್ರಜ್ಞಾನ ಬಳಸಿ ನೀನು ಮೂಕಾಂಬಿಕಾ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಿಯಾ ಎಂದು ಸುಳ್ಳು ಪ್ರಕರಣವನ್ನು ದಾಖಲಿಸಿ ನಿನ್ನ ಮಾನ ಮರ್ಯಾದೆ ತೆಗೆಯುವುದಾಗಿ ಹೆದರಿಸಿರುತ್ತಾರೆ.

ಅಲ್ಲದೆ ನೀಲ್ ಅವರಿಗೆ ಇದೇ ರೀತಿ ಪದೇ ಪದೇ ಭಯ ಹುಟ್ಟಿಸಿ ಅವಮಾನ ಪಡಿಸುವುದಾಗಿ ಹೆದರಿಸಿ ಅಲ್ಲದೆ ಗೂಂಡಾಗಳನ್ನು ಬಳಸಿ ಕೊಲ್ಲಿಸುವುದಾಗಿ ಹೆದರಿಸಿ ರೂ 18000/- ಹಣವನ್ನು ಬಲಾತ್ಕಾರವಾಗಿ ವಸೂಲಿ ಮಾಡಿರುತ್ತಾರೆ, ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ದೂರು ಸ್ವೀಕರಿಸಿರುವ ಕೋಟ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...