ಹೊನ್ನಾವರ | ಕಾರ್ ದಹನ ಪ್ರಕರಣಕ್ಕೆ ಸ್ಫೋಟಕ ತಿರುವು: ಅಪಘಾತವಲ್ಲ, ಹಣಕ್ಕಾಗಿ ನಡೆದ ಭೀಕರ ಕೊಲೆ!

Date:

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಕಳೆದ ಜನವರಿ 7ರಂದು ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದ್ದ ಕಾರು ದಹನ ಪ್ರಕರಣವು ಈಗ ಬೆಚ್ಚಿಬೀಳಿಸುವ ಸತ್ಯವನ್ನು ಹೊರಹಾಕಿದೆ.

ಆರಂಭದಲ್ಲಿ ಇದೊಂದು ಆಕಸ್ಮಿಕ ಅಪಘಾತ ಎಂದು ಭಾವಿಸಲಾಗಿತ್ತಾದರೂ, ಪೊಲೀಸರ ಚುರುಕಿನ ತನಿಖೆಯಿಂದ ಇದು ಪೂರ್ವನಿಯೋಜಿತವಾಗಿ ನಡೆದ ‘ಡಬಲ್ ಮರ್ಡರ್’ ಎಂಬುದು ಸಾಬೀತಾಗಿದೆ. ಸಿದ್ದಾಪುರ ಮೂಲದ ಸಹೋದರರಾದ ಮಂಜುನಾಥ ಹಸ್ಲರ್ ಮತ್ತು ಚಂದ್ರಶೇಖರ್ ಹಸ್ಲರ್ ಅವರನ್ನು ಹಣದ ಆಸೆಗಾಗಿ ಬಲಿಪಡೆಯಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅವರು ನೀಡಿರುವ ಮಾಹಿತಿಯಂತೆ, ಈ ಕೊಲೆ ಕೃತ್ಯದ ಹಿಂದೆ ಪ್ರಮೋದ್ ನಾಯ್ಕ ಎಂಬಾತನ ಕೈವಾಡವಿದೆ. ಆರೋಪಿ ಪ್ರಮೋದ್ ಹಾಗೂ ಮೃತ ಸಹೋದರರ ನಡುವೆ ಸುಮಾರು 5 ಲಕ್ಷ ರೂಪಾಯಿಗಳ ಹಣಕಾಸಿನ ವ್ಯವಹಾರವಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಾಲವನ್ನು ಮರುಪಾವತಿಸಲು ಸಾಧ್ಯವಾಗದಿದ್ದಾಗ ಮತ್ತು ಇನ್ಶುರೆನ್ಸ್ ಹಣವನ್ನು ಪಡೆಯುವ ದುರಾಲೋಚನೆಯಿಂದ ಪ್ರಮೋದ್ ಈ ಭೀಕರ ಸಂಚು ರೂಪಿಸಿದ್ದನು. ಪ್ರಮೋದ್ ನಾಯ್ಕ ಮೃತರಾದ ಮಂಜುನಾಥ ಮತ್ತು ಚಂದ್ರಶೇಖರ್ ಅವರಿಗೆ ಕೀಟನಾಶಕ ಮಿಶ್ರಿತ ಮದ್ಯವನ್ನು ಕುಡಿಸಿದ್ದಾನೆ.

ವಿಷದ ಪ್ರಭಾವದಿಂದ ಅವರಿಬ್ಬರೂ ಪ್ರಜ್ಞೆ ತಪ್ಪಿ ಮೃತಪಟ್ಟ ನಂತರ, ಮೃತದೇಹಗಳನ್ನು ಕಾರಿನೊಳಗೆ ಇರಿಸಿ ಸೂಳೆಮುರ್ಕಿ ಕ್ರಾಸ್‌ಗೆ ಸಾಗಿಸಿದ್ದಾನೆ. ಅಲ್ಲಿ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚುವ ಮೂಲಕ, ಇಡೀ ಘಟನೆಯನ್ನು ಆಕಸ್ಮಿಕ ಅಪಘಾತದಂತೆ ಬಿಂಬಿಸಲು ಪ್ರಯತ್ನಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಸೋಶಿಯಲ್ ಮೀಡಿಯಾ ಟ್ರೋಲ್ ಎಫೆಕ್ಟ್: ಪಿಕಳೆ ನರ್ಸಿಂಗ್ ಹೋಂನ ರಾಜು ಪಿಕಳೆ ಆತ್ಮಹತ್ಯೆ

ಕಾರು ಹಚ್ಚುವ ಸಂದರ್ಭದಲ್ಲಿ ಆರೋಪಿ ಪ್ರಮೋದ್ ಕೈಕಾಲುಗಳಿಗೂ ಸುಟ್ಟ ಗಾಯಗಳಾಗಿದ್ದವು. ಘಟನೆಯ ನಂತರ ಆತ ಊರಿನಲ್ಲಿ ಕಾಣಿಸಿಕೊಳ್ಳದೆ ತಲೆಮರೆಸಿಕೊಂಡಿದ್ದು ಪೊಲೀಸರ ಸಂಶಯಕ್ಕೆ ಕಾರಣವಾಗಿತ್ತು. ಮೃತರ ಇನ್ನೊಬ್ಬ ಸಹೋದರ ಉಮೇಶ್ ಹಸ್ಲರ್ ಅವರು ನೀಡಿದ ದೂರು ಮತ್ತು ಆರೋಪಿಯ ಮೈಮೇಲಿದ್ದ ಗಾಯದ ಗುರುತುಗಳು ಪ್ರಕರಣದ ಸತ್ಯಾಂಶವನ್ನು ಬಯಲಿಗೆಳೆಯಲು ಪ್ರಮುಖ ಸುಳಿವುಗಳಾದವು.

ಪ್ರಮುಖ ಆರೋಪಿ ಪ್ರಮೋದ್ ನಾಯ್ಕನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಈ ಕೃತ್ಯದಲ್ಲಿ ಆತನ ಸ್ನೇಹಿತರಾದ ರತ್ನಾಕರ ನಾಯ್ಕ ಮತ್ತು ಹೇಮಂತ್ ಎಂಬುವವರು ಸಾಥ್ ನೀಡಿರುವುದು ಬೆಳಕಿಗೆ ಬಂದಿದೆ.

ಸದ್ಯ ಪೊಲೀಸರು ಈ ಮೂವರನ್ನೂ ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಸುಟ್ಟು ಕರಕಲಾಗಿದ್ದ ಮೃತದೇಹಗಳು ಮಂಜುನಾಥ ಮತ್ತು ಚಂದ್ರಶೇಖರ್ ಅವರದ್ದೇ ಎಂದು ಈಗ ಅಧಿಕೃತವಾಗಿ ದೃಢಪಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...