ಹೊನ್ನಾವರ: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಷ್ಟ್ರಗೀತೆಯ ಕುರಿತು ನೀಡಿದ ಹೇಳಿಕೆಯಿಂದ ಹೊಸ ವಿವಾದ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
ಹೊನ್ನಾವರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ನಡೆದ ರಾಷ್ಟ್ರೀಯ ಏಕತಾ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇಂದಿನ ರಾಷ್ಟ್ರಗೀತೆ ‘ಜನಗಣಮನ’ ಮೂಲತಃ ಬ್ರಿಟಿಷರ ಸ್ವಾಗತಕ್ಕಾಗಿ ರಚಿಸಲ್ಪಟ್ಟದ್ದು” ಎಂದು ಹೇಳಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಸಭೆಯಲ್ಲಿ ಮಾತನ್ನು ಮುಂದುವರಿಸಿ, “ವಂದೇ ಮಾತರಂ ದೇಶದ ರಾಷ್ಟ್ರಗೀತೆಯಾಗಬೇಕಾಗಿತ್ತು. ಸ್ವಾತಂತ್ರ್ಯ ಹೋರಾಟಕ್ಕೆ ‘ವಂದೇ ಮಾತರಂ’ ಗೀತೆಯ ಕೊಡುಗೆ ಅಪಾರ. ಜನಗಣಮನಕ್ಕೆ ಸರಿಸಮಾನವಾದ ಗೀತೆ ವಂದೇ ಮಾತರಂ. ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಕೊಟ್ಟ ಕೊಡುಗೆ ನಮಗೆ ಸದಾ ಪ್ರೇರಣೆ . ವಂದೇ ಮಾತರಂ ರಾಷ್ಟ್ರಗೀತೆಯಾಗಿಸಲು ಹಿಂದೆ ಸಾಕಷ್ಟು ಒತ್ತಡ ಕೇಳಿಬಂದಿತ್ತು. ಆದರೆ, ನಮ್ಮ ಪೂರ್ವಜರು ಬ್ರಿಟಿಷ್ ಅಧಿಕಾರಿಯ ಸ್ವಾಗತಕ್ಕೆ ರಚನೆಯಾದ ಜನಗಣಮನವೂ ಇರಲಿ ಎಂದರು. ಜೊತೆಗೆ ವಂದೇ ಮಾತರಂ ಗೀತೆಯೂ ಇರಲಿ ಅಂತ ಸೇರಿಸಿದರು ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿರಸಿ | ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ – ಏಜೆಂಟ್ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಂದೇ ಮಾತರಂ 150ನೇ ವರ್ಷಾಚರಣೆಯ ಸಂದರ್ಭದಲ್ಲಿ ಅದು ಪ್ರತಿಯೊಬ್ಬ ಭಾರತೀಯರ ಕಂಠದಲ್ಲಿ ಮೊಳಗಬೇಕು. ‘ಭಾರತ್ ಮಾತಾಕಿ ಜೈ’ ನಮ್ಮ ಉಸಿರಿನ ಭಾಗವಾಗಬೇಕು” ಎಂದು ತಮ್ಮ ಅಭಿಪ್ರಾಯ ತಿಳಿಸಿದರು.





