ಮರ್ಯಾದೆಗೇಡು ಹತ್ಯೆ | ತಂಗಿಯನ್ನೇ ಕೆರೆಗೆ ತಳ್ಳಿ ಹತ್ಯೆಗೈದ ಕೋಮುವಾದಿ ಸಹೋದರ

Date:

ಮತ್ತೊಂದು ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಾಳೆಂಬ ಕಾರಣಕ್ಕೆ ಕೋಮುವಾದಿ, ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ತಂಗಿಯನ್ನೇ ಕೆರೆಗೆ ದೂಡಿ ಹತ್ಯೆಗೈದಿದ್ದಾನೆ. ತಂಗಿಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದುರ್ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಧನುಶ್ರೀ ಮತ್ತು ಆಕೆಯ ತಾಯಿ ಅನಿತಾ ಹತ್ಯೆಗೀಡಾದ ದುರ್ದೈವಿಗಳು. ನಿತೀಶ್‌ ಹತ್ಯೆಗೈದ ವಿಕೃತ ಆರೋಪಿ ಎಂದು ವರದಿಯಾಗಿದೆ.

ಧನುಶ್ರೀ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಆಕೆ ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದರು. ಆತನೊಂದಿಗಿನ ಪ್ರೀತಿಯನ್ನು ಬಿಟ್ಟುಬಿಡುವಂತೆ ಮನೆಯವರು ಒತ್ತಾಯಿಸಿದ್ದರು. ಆದರೂ, ಆಕೆ ಪ್ರೀತಿಯನ್ನು ಮುಂದುವರೆಸಿದ್ದರು. ಇತ್ತೀಚೆಗೆ ನಡೆದ ದೊಡ್ಡಹೆಜ್ಜೂರು ಜಾತ್ರೆಯಲ್ಲಿ ಪ್ರೇಮಿಗಳನ್ನು ನೋಡಿದ್ದ ನಿತೀಶ್ ಕೋಪಗೊಂಡಿದ್ದ. ಇದರಿಂದಾಗಿಯೇ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧನುಶ್ರೀ ಕೊಲೆಗೆ ಸಂಚು ಹಾಕಿದ್ದ ನಿತೀಶ್, ಮಂಗಳವಾರ ರಾತ್ರಿ, ಆಕೆಯನ್ನು ಮಾತ್ರ ಕರೆದರೆ ಬರುವುದಿಲ್ಲವೆಂದು ತಮ್ಮ ತಾಯಿಯನ್ನೂ ಸಂಬಂಧಿಕರ ಮನೆಗೆ ಹೋಗಲೆಂದು ಬೈಕ್‌ನಲ್ಲಿ ಕರೆದೊಯ್ದಿದ್ದಾನೆ. ಆದರೆ, ಮರೂರು ಗ್ರಾಮದ ಕೆರೆಯ ಬಳಿ ಅವರನ್ನು ಇಳಿಸಿದ್ದು, ಧನುಶ್ರೀಯನ್ನು ಕೆರೆಗೆ ತಳ್ಳಿದ್ದಾನೆ. ಆಕೆಯನ್ನು ರಕ್ಷಿಸಲು ಹೋದ ತಾಯಿ ಅನಿತಾ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಾತ್ರಿ 10 ಗಂಟೆಗೆ ಮನೆಗೆ ಮರಳಿದ ಆರೋಪಿ ನಿತೀಶ್‌, ತಾನು ಎಸಗಿದ ಕೃತ್ಯದ ಬಗ್ಗೆ ತಂದೆ ಸತೀಶ್‌ಗೆ ತಿಳಿಸಿದ್ದಾನೆ. ಸತೀಶ್ ಅವರು ಮಗನ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

“ಧನುಶ್ರೀ ಪ್ರೀತಿಸುತ್ತಿದ್ದ ಯುವಕನನ್ನು ಬಿಟ್ಟುಬಿಡುವಂತೆ ಮನವೊಲಿಸಲು ಯತ್ನಿಸಿದ್ದೆವು. ಆದರೆ, ಆಕೆ ಪ್ರೀತಿಯನ್ನು ಮುಂದುವರೆಸಿದ್ದಳು. ಹೀಗಾಗಿ, ಕಳೆದ ಏಳು ತಿಂಗಳಿಂದ ಆಕೆಯ ಜೊತೆ ನಿತೀಶ್ ಮಾತು ಬಿಟ್ಟಿದ್ದ” ಎಂದು ಸತೀಶ್ ಅವರು ತಮ್ಮ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಆರೋಪಿ ಮರ್ಯಾದೆಗೇಡು ಹತ್ಯೆ ಎಸಗಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...