ವ್ಹೈಟ್‌ಲಿಫ್ಟಿಂಗ್ ಕ್ರೀಡಾ ಪಟುಗೆ ಸನ್ಮಾನ; 2.50 ಲಕ್ಷ ರೂ. ವೈಯಕ್ತಿಕ ನೆರವು ನೀಡಿದ ಸಚಿವ

Date:

ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಗೇಮ್ಸ್‌ನಲ್ಲಿ ವ್ಹೈಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಖುಡ್ಸಿಯಾ ನಜೀರ್ ಅವರನ್ನು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಸನ್ಮಾನಿಸಿದ್ದಾರೆ.

ಬೆಂಗಳೂರಿನ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಖುಡ್ಸಿಯಾ ನಜೀರ್ ಅವರನ್ನು ಜಮೀರ್‌ ಅಹಮದ್ ಸನ್ಮಾನಿಸಿದರು. ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಲು ಫಿನ್‌ಲೆಂಡ್‌ಗೆ ತೆರಳುತ್ತಿರುವ ನಜೀರ್‌ ಅವರಿಗೆ ವೈಯಕ್ತಿಕವಾಗಿ 2.50 ಲಕ್ಷ ರೂ. ನೆರವಿನ ಚೆಕ್ ನೀಡಿದರು.

ಅಲ್ಲದೆ, ದೇಶದ ಕೀರ್ತಿ ಹೆಚ್ಚಿಸುತ್ತಿರುವ ಇಂತಹ ಕ್ರೀಡಾಪಟುಗಳಿಗೆ ನೆರವು ನೀಡಲು ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಲ್ಲಿ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಜಮೀರ್ ಅಹಮದ್ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಗಾರಪೇಟೆ ಮೂಲದ ಖುಡ್ಸಿಯಾ ನಜೀರ್, ಕೆಎಸ್‌ಆರ್‌ಟಿಸಿಯಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ, ವ್ಹೈಟ್‌ಲಿಫ್ಟಿಂಗ್ ಸ್ಪರ್ಧೆಗೂ ಕೋಚಿಂಗ್‌ ಪಡೆಯುತ್ತಿದ್ದು, ರಾಜ್ಯ, ರಾಷ್ಟ್ರೀಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರ ವಿಭಾಗದಲ್ಲಿ 87 ಕೆಜಿ ವಿಭಾಗದಲ್ಲಿ ಸಾಧನೆ ಮಾಡಿದ್ದಾರೆ.

“ಸಚಿವ ಜಮೀರ್ ಅಹಮದ್ ಅವರು ನನ್ನ ಸಾಧನೆ ಗುರುತಿಸಿ ಸನ್ಮಾನಿಸಿದ್ದಾರೆ. ಫಿನ್‌ಲೆಂಡ್‌ಗೆ ತೆರಳಲು 2.50 ಲಕ್ಷ ರೂ. ನೆರವು ನೀಡಿದ್ದಾರೆ. ಇದು ಸಂತಸ ತಂದಿದೆ. ಇದರಿಂದ ಮತ್ತಷ್ಟು ಸಾಧನೆ ಮಾಡಲು ಉತ್ತೇಜನ ಸಿಕ್ಕಿದೆ” ಎಂದು ನಜೀರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...