BREAKING NEWS | ಧರ್ಮಸ್ಥಳದಲ್ಲಿ ಗೂಂಡಾಗಿರಿ: ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ

Date:

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ.

ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರ ಜೊತೆಗೆ, ಯುನೈಟೆಡ್‌ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ದಾಳಿ ಮಾಡಲಾಗಿದೆ. ಕ್ಯಾಮೆರಾವನ್ನು ಪುಡಿ ಮಾಡಿದ್ದಾರೆ ಮತ್ತು ಎಲ್ಲರೂ ಈ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು ಒಬ್ಬರಿಗೆ ತೀವ್ರ ಗಾಯಗಳಾಗಿವೆ.

ಸೌಜನ್ಯ ಮನೆಯ ಪಾಂಗಳ ಕ್ರಾಸ್ ಸಮೀಪ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ದಾಳಿ ನಡೆಸಿದ ಗುಂಪಿನಲ್ಲಿ ಸುಮಾರು 50ರಿಂದ ನೂರು ಜನ ಇದ್ದರೆಂದು ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಸದ್ಯ ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 06 at 6.21.52 PM

ಆಗಿದ್ದೇನು?

ಬಿಗ್‌ಬಾಸ್‌ ಕನ್ನಡ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ರಜತ್ ಎಂಬುವವರು ಇಂದು ವಕೀಲರ ಜೊತೆಗೆ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೊಳಗಾಗಿದ್ದ ಸೌಜನ್ಯ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ರಜತ್ ಬಂದಿರುವ ವಿಚಾರ ತಿಳಿದು ಯೂಟ್ಯೂಬರ್‌ಗಳು ಸಂದರ್ಶನ ನಡೆಸಲು ಆಗಮಿಸುವುದಾಗಿ ತಿಳಿಸಿದ್ದರು.

ಅದಾಗಲೇ ಸೌಜನ್ಯ ಮನೆಯಿಂದ ಹೊರಟಿದ್ದ ರಜತ್ ಅವರಿಗೆ ಸೌಜನ್ಯ ಮನೆಯ ಪಾಂಗಳ ಕ್ರಾಸ್ ಸಮೀಪ ಮಾತನಾಡಲು ಸಿಕ್ಕಿದ್ದಾರೆ. ಪಾಂಗಳ ಕ್ರಾಸ್ ಬಳಿಯಲ್ಲೇ ನಿಂತು ಸಂದರ್ಶನ ನಡೆಸುತ್ತಿದ್ದರು. ಇದೇ ವೇಳೆ ಸ್ಥಳಕ್ಕೆ ಎರಡು ಮೂರು ರಿಕ್ಷಾದಲ್ಲಿ ಬಂದ ಸುಮಾರು 50ರಷ್ಟಿದ್ದ ಗೂಂಡಾಗಳ ಗುಂಪು, “ಧರ್ಮಸ್ಥಳದ ಹೆಸರು ಕೆಡಿಸುತ್ತಿದ್ದೀರಿ. ನೀವು ಧರ್ಮಸ್ಥಳದ ಹೆಸರು ಕೆಡಿಸಲೆಂದೇ ವಿಡಿಯೋಗಳನ್ನು ಪ್ರಸಾರ ಮಾಡುತ್ತಿದ್ದೀರಿ” ಎಂಬ ಆರೋಪ ಹೊರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕೈಯ್ಯಲಿದ್ದ ಕ್ಯಾಮರಾ ಹಾಗೂ ಮೈಕ್‌ಗಳನ್ನು ಕೂಡ ಕಸಿದುಕೊಂಡು ನೆಲಕ್ಕೆ ಬಡಿದು ಹೊಡೆದು ಹಾಕಿದ್ದಲ್ಲದೇ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಈದಿನ ಡಾಟ್ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಬೆನ್ನಲ್ಲೇ ಗಾಯಾಳುಗಳನ್ನು ಸ್ಥಳೀಯರು ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಬಂದೋಬಸ್ತ್‌ಗೆ ಕ್ರಮ ಕೈಗೊಂಡಿದ್ದಾರೆ.

WhatsApp Image 2025 08 06 at 6.39.42 PM
WhatsApp Image 2025 08 06 at 6.00.20 PM
WhatsApp Image 2025 08 06 at 6.00.21 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...