ಭಾಲ್ಕಿ ತಾಲ್ಲೂಕಿನ 2,202 ಫಲಾನುಭವಿಗಳಿಗೆ ಮನೆ ಮಂಜೂರಾತಿ ತಿಳುವಳಿಕೆ ಪತ್ರ ವಿತರಣೆ

Date:

ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಭಾಲ್ಕಿ ಪಟ್ಟಣದ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಸಮೀಪ ಭಾನುವಾರ ಆಯೋಜಿಸಿದ್ದ ವಿವಿಧ ವಸತಿ ಪಲಾನುಭವಿಗಳ ಮನೆ ಮಂಜೂರಾತಿ ತಿಳುವಳಿಕೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತಿಳುವಳಿಕೆ ಪತ್ರ ವಿತರಿಸಿ ಅವರು ಮಾತನಾಡಿದರು.

2013-18ರಲ್ಲಿ ತಾವು ಸಚಿವರಾಗಿದ್ದಾಗ ತಾಲೂಕನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ 25 ಸಾವಿರ ಮನೆಗಳ ಹಕ್ಕು ಪತ್ರ ನೀಡಲಾಗಿತ್ತು, ಆದರೆ ಕಾರಣಾಂತರಗಳಿಂದ ಪೂರ್ಣಗೊಳ್ಳಲಿಲ್ಲ. ಈ ಅವಧಿಯಲ್ಲಿ ಪೂರ್ಣಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ನಮ್ಮ ಸರಕಾರ ಬಡವರ ಅಭಿವೃದ್ಧಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷೀ ಯೋಜನೆಯ ಅಡಿಯಲ್ಲಿ ಮನೆಯ ಮುಖ್ಯಸ್ಥೆಗೆ ಪ್ರತಿ ತಿಂಗಳು ಪ್ರತಿ ₹2 ಸಾವಿರ ನೀಡಲಾಗುತ್ತಿದೆ. ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಹಾಗೂ ಗೃಹ ಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತಿದೆ.
ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿ ಮಾಡುವುದು ನಮ್ಮ ಸರಕಾರದ ಮುಖ್ಯ ಉದ್ದೇಶವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ತಾಲೂಕಿಗೆ ಒಟ್ಟು 8 ಸಾವಿರ ಮನೆಗಳು ಮಂಜೂರು ಆಗಿವೆ. ಅದರಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿಯಲ್ಲಿ 7 ಸಾವಿರ ಮನೆ ಮತ್ತು ಬಸವ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ 1 ಸಾವಿರ ಮನೆಗಳು ಮಂಜೂರಾಗಿವೆ. ಜನರಿಗೆ ಅವಶ್ಯಕವಿರುವ ಅನ್ನ, ವಸತಿ, ಶಿಕ್ಷಣ, ಆರೋಗ್ಯ ಮುಂತಾದವುಗಳನ್ನು ನೀಡುವ ಕೆಲಸ ನಾವು ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ಸಂಸದ ಸಾಗರ ಈಶ್ವರ ಖಂಡ್ರೆ ಮಾತನಾಡಿ, ‘ಮಳೆ, ಗಾಳಿ, ಬಿಸಿಲುಗಳಿಂದ ರಕ್ಷಿಸಲು ಒಂದು ಮನೆ ಅವಶ್ಯಕವಾಗಿದೆ. ಕೇವಲ ಭಾಲ್ಕಿ ಮಾತ್ರವಲ್ಲದೆ ಇಡೀ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ವಸತಿ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದವರಿಗೆ ₹1.20 ಲಕ್ಷ ಹಾಗೂ ಪಜಾತಿ/ಪ.ಪಂಗಡ ವರ್ಗದವರಿಗೆ ₹1.75 ಲಕ್ಷ ಮನೆ ನಿರ್ಮಾಣ ಹಣವನ್ನು ನೀಡಲಾಗುತ್ತಿದೆ. ಈ ಹಣದಲ್ಲಿ ಉತ್ತಮವಾದ ಮನೆ ನಿರ್ಮಾಣ ಕಷ್ಟವಾಗುತ್ತದೆ. ಆದ್ದರಿಂದ ಒಂದು ಮನೆ ₹5 ರಿಂದ ₹7 ಲಕ್ಷದವರೆಗೆ ಹಣ ನೀಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆʼ ಎಂದು ಹೇಳಿದರು.

ʼಕೇಂದ್ರದ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಜಿಲ್ಲೆಯ ರೈಲ್ವೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಪ್ರತಿ ಕುಟುಂಬಕ್ಕೂ ಮನೆ ಎಂಬುದು ಮಾನವೀಯ ಹಕ್ಕು. ಈ ಹಕ್ಕು ಎಲ್ಲ ಅರ್ಹ ಫಲಾನುಭವಿಗಳಿಗೆ ದೊರಕಿಸಲು ಕೇಂದ್ರ ಸರಕಾರದ ಮೇಲೆ ನಿರಂತರ ಒತ್ತಡ ತಂದು ಹೆಚ್ಚಿನ ಮನೆಗಳನ್ನು ಮಂಜೂರಾತಿ ಮಾಡಿಸಿ ಅರ್ಹರಿಗೆ ವಿತರಿಸಲಾಗುತ್ತಿದೆʼ ಎಂದು ತಿಳಿಸಿದರು. 

ಇದನ್ನೂ ಓದಿ : ಬೀದರ್ | ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಸಹಾಯಹಸ್ತ ಕಾರ್ಯ ಶ್ಲಾಘನೀಯ : ಭವಾನಿಸಿಂಗ್ ಠಾಕೂರ್

ಈ ಸಂದರ್ಭದಲ್ಲಿ ಭಾಲ್ಕಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನದ ಅಧ್ಯಕ್ಷ ಹಣಮಂತರಾವ ಚವ್ಹಾಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕರಾವ ಸೋನಾಜಿ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ ಸೇರಿದಂತೆ ವಸತಿ ಯೋಜನೆ ಫಲಾನುಭವಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...