ಹುಬ್ಬಳ್ಳಿ | ಜಾತಿ ನಿಂದನೆ; ಸೂಕ್ತ ಕಾನೂನು‌ ಕ್ರಮಕ್ಕೆ ಕುರುಬ ಸಮಾಜ ಒತ್ತಾಯ

Date:

ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅಭಿಮಾನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ‌ಕೈಗೊಳ್ಳಲು ಒತ್ತಾಯಿಸಿ ಪ್ರದೇಶ ಕುರುಬ ಸಮಾಜದ ಒಕ್ಕೂಟದ ವತಿಯಿಂದ ಹುಬ್ಬಳ್ಳಿ ಸಬರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

ಡಿಕೆಶಿ ಅಭಿಮಾನಿಗಳಾದ ಬಿ.ಎನ್. ಕುಮಾರ ಹಾಗೂ ಶಾನಬೋಗರಹಳ್ಳಿ ಗ್ರಾಮದ ಮಹೇಶ ಆಗಸ್ಟ್ 8ರಂದು ರಾತ್ರಿ ಮಂಡ್ಯ ತಾಲೂಕಿನ ಬಸರಾಳ ಗ್ರಾಮದ ಹೇಮಾವತಿ ಬಡಾವಣೆಯಲ್ಲಿ ಸಾರ್ವಜನಿಕವಾಗಿ ಕುರುಬ ಸಮಾಜವನ್ನು ಮತ್ತು ಕುರುಬ ಜಾತಿಯ ಬಗ್ಗೆ ಜಾತಿ ನಿಂದನೆ ಮಾಡಿ ಹಾಗೂ ಕುರುಬ ಸಮಾಜದ ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಮುಖ್ಯಮಂತ್ರಿ ಅಭಿಮಾನಿಗಳಲ್ಲಿ ನೋವುಂಟು ಮಾಡಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದರಿಂದ ಇಡೀ ಕುರುಬ ಸಮಾಜಕ್ಕೆ ಅವಮಾನವಾಗಿದೆ. ಆರೋಪಿತರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕುರುಬ ಸಮಾಜದ ಮುಖಂಡರು, ಸಿಎಂ ಅಭಿಮಾನಿಗಳು ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇಂಥಹ ಘಟನೆ ನಡೆದರೂ ಪೊಲೀಸ್ ಇಲಾಖೆ ಮೌನವೇಕೆ ವಹಿಸಿದೆ!” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿದ್ದಣ್ಣ ತೇಜಿ, ಎಚ್ ಕೆ ದೊಡ್ಮನಿ, ನಿಂಗಪ್ಪ ಜಕ್ಲಿ, ರವಿ ಕಟ್ಟಿಮನಿ, ರವಿರಾಜ್ ಕಂಬಳಿ, ಕೋಪ ದೈಗುಡಿ, ಧರ್ಮಣ್ಣ ಕುರಿ, ಶಶಿಧರ್ ನವೀನ್ ಜಂಗನ್ನವರ್ ಮುಂತಾದವರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಹುಬ್ಬಳ್ಳಿ | ಪ್ರಲ್ಹಾದ್ ಜೋಶಿ ಎಲ್ಲಿದ್ದಾರೆಂದು ಪತ್ತೆ ಹಚ್ಚಬೇಕಿದೆ: ವಿಜಯಕುಮಾರ ಗುಂಜಾಳ ಟೀಕೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...