ಹುಬ್ಬಳ್ಳಿ | ನಾಗರಿಕ ಸೇವೆಗಳಲ್ಲಿ ವಿಳಂಬ; ಪಾಲಿಕೆ ವಿರುದ್ಧ ಪ್ರತಿಭಟನೆ

Date:

ನಾಗರಿಕ ಸೇವೆಗಳು ಜನರನ್ನು ತಲುಪುವಲ್ಲಿ ವಿಳಂಬ ಉಂಟಾಗುತ್ತಿರುವುದನ್ನು ಖಂಡಿಸಿ ದಲಿತ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ-5 ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಡೆಸಿದ್ದಾರೆ.

“ಪಾಲಿಕೆಯ ವಲಯ-5ರ ಕಚೇರಿಯಲ್ಲಿ ಹಲವು ನಾಗರಿಕ ಸೇವೆಗಳಲ್ಲಿ ನಿರಂತರ ವಿಳಂಬವಾಗುತ್ತಿದೆ. ಇ-ಆಸ್ತಿ, ಖಾತಾ ವರ್ಗಾವಣೆ, ಜನನ-ಮರಣ ಪತ್ರ ಸೇರಿದಂತೆ ಬಹುತೇಕ ನಾಗರಿಕ ಸೇವೆಗಳನ್ನು ಒದಗಿಸಲು ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಸಾರ್ವಜನಿಕರಿಗೆ ಸೇವೆ ಒದಗಿಸಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ಕುರಿತ ವಿಡಿಯೋ, ಆಡಿಯೋ ಸಾಕ್ಷಿಗಳನ್ನು ನಾವು ಸಂಗ್ರಹಿಸಿದ್ದೇವೆ. ಅವುಗಳನ್ನು ಲೋಕಾಯುಕ್ತರು ಮತ್ತು ಪಾಲಿಕೆಯ ಆಯುಕ್ತರ ಗಮನಕ್ಕೆ ತರಲಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಚೇರಿಯಲ್ಲಿ ದುಡ್ಡು ಕೊಟ್ಟರೆ ಮಾತ್ರ ಕಡತಗಳನ್ನು ವಿಲೇವಾರಿ ಮಾಡಲಾಗುತ್ತದೆ. ಇಲ್ಲವಾದಲ್ಲಿ ಬಡವರು, ಹೆಂಗಸರು, ವಯಸ್ಸಾದವರು ಎಂದು ನೋಡದೆ ಅಲೆದಾಡಿಸುತ್ತಿದ್ದಾರೆ” ಎಂದು ಆರೋಪಿಸಿದ್ದು, ಈ ಹಿಂದೆ 9-10 ತಿಂಗಳುಗಳಿಂದ ವಿಲೇವಾರಿ ಆಗದೆ ಉಳಿದಿರುವ ಹಲವು ಅರ್ಜಿಗಳ ಸ್ವೀಕೃತಿ ಪ್ರತಿಗಳನ್ನು ಮಾಧ್ಯಮಗಳ ಎದುರಿಗೆ ಪ್ರದರ್ಶಿಸಿದರು.

“ಕಚೇರಿಯಲ್ಲಿ ಯಾವುದೇ ನಾಮಫಲಕವಾಗಲಿ, ಸಂಬಂಧಿತ ಸೇವೆಗಳ ಬಗ್ಗೆ ಮಾಹಿತಿ ಫಲಕಗಳಾಗಲಿ ಇಲ್ಲದೆ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಯಾರನ್ನು ಸಂಪರ್ಕಿಸಬೇಕೆಂದು ತಿಳಿಯದೆ ಪರದಾಡುವಂತಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಅಕ್ಕಿ ನೀಡಲು ಕೇಂದ್ರ ನಿರಾಕರಣೆ; ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ಸಹಾಯಕ ವಲಯ ಆಯುಕ್ತ ಫಕ್ಕೀರಪ್ಪ ಇಂಗಳಗಿ ಸ್ಥಳಕ್ಕೆ ಧಾವಿಸಿದ್ದು, ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿ ಬಾಕಿ ಉಳಿದಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಮತ್ತು ಕಚೇರಿಯ ಆಡಳಿತ ಸುಧಾರಣೆಗಾಗಿ ತಾವು ಕೈಗೊಂಡಿರುವ ಕ್ರಮಳನ್ನು ಹೋರಾಟಗಾರರಿಗೆ ವಿವರಿಸಿ, ಇನ್ನು ಎರಡು ದಿನಗಳ ಅವಧಿಯಲ್ಲಿ ಬಾಕಿ ಉಳಿದಿರುವ ಎಲ್ಲ ಹಿಂದಿನ ಕಡತಗಳನ್ನು ತೆರವುಗೊಳಿಸುವಾದಾಗಿ ಭರವಸೆ ನೀಡಿ ಪ್ರತಿಭಟನೆಯನ್ನು ಹಿಂಪಡೆಯಲು ಕೋರಿದರು.

ಪ್ರತಿಭಟನೆಯಲ್ಲಿ ಚಾಮುಂಡೇಶ್ವರಿ ನಗರದ ಅಧ್ಯಕ್ಷ ಪರಶುರಾಮ ಮಲ್ಯಾಳ, ವೆಂಕಟೇಶ್ ಕೊಂಡಪಲ್ಲಿ, ನರಸಿಂಹ ವೆಪಚಾರಲ, ಕೊಂಡಯ್ಯ ಪೂಜಾರಿ, ನರಸಪ್ಪ ಎಲಕಪಟಿ, ಆನಂದ ಮಾದರ, ಪ್ರಶಾಂತ ಮಾದರ, ಜೀವನ ಅನಂತಪುರ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...