ಹುಬ್ಬಳ್ಳಿ-ಧಾರವಾಡ | ಐಪಿಎಲ್‌ ಕ್ರಿಕೆಟ್ ಜೂಜು ತಡೆಯಲು ಪೊಲೀಸ್‌ ಕಣ್ಗಾವಲು

Date:

  • ಕ್ರಿಕೆಟ್ ಬೆಟ್ಟಿಂಗ್‌ ವಿರುದ್ಧ ವಿಶೇಷ ಯೋಜನೆ ರೂಪಿಸಿರುವ ಪೊಲೀಸರು
  • ಬೆಟ್ಟಿಂಗ್‌ ಕಾರಣದಿಂದ ಸಮಸ್ಯೆ ಸುಳಿಯಲ್ಲಿ ಹಲವು ಕುಟುಂಬಗಳು

ಭಾರತದ ಬಹುನಿರೀಕ್ಷಿತ ಕ್ರಿಕೆಟ್ ಲೀಗ್, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 31ರಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ನಡುವಿನ ಮುಖಾಮುಖಿಯೊಂದಿಗೆ ಪ್ರಾರಂಭವಾಯಿತು. ಐಪಿಎಲ್ ಪಂದ್ಯ ನಡೆಯುವ ಸಂದರ್ಭದಲ್ಲಿ ಅವಳಿ ನಗರದಲ್ಲಿ ಕ್ರಿಕೆಟ್ ಜೂಜು ತಡೆಯಲು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಅಧಿಕಾರಿಗಳು ಸಜ್ಜಾಗಿದ್ದರು.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಬೆಟ್ಟಿಂಗ್ ವಿರುದ್ಧ ಎಚ್ಚರಿಕೆ ನೀಡಿದ್ದು, ಈ ಬಾರಿ ಬೆಟ್ಟಿಂಗ್ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳಲು ಹುಬ್ಬಳ್ಳಿ-ಧಾರವಾಡ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

“ಈ ಬಾರಿ ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಕಣ್ಗಾವಲಿದ್ದೇವೆ. ಐಪಿಎಲ್ ಪಂದ್ಯಗಳ ಸಮಯದಲ್ಲಿ ಇದನ್ನು ಪರಿಶೀಲಿಸುವ ಉದ್ದೇಶದಿಂದ, ವಿಶೇಷ ಯೋಜನೆಯನ್ನು ರೂಪಿಸಲಾಗಿದೆ. ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಮತ್ತು ಬೆಟ್ಟಿಂಗ್ ಪರಿಶೀಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಪೊಲೀಸ್ ಕಮಿಷನರ್ ರಮಣ್ ಗುಪ್ತಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್‌ಸ್ಪೆಕ್ಟರ್‌ ಶ್ರೇಣಿಯ ಅಧಿಕಾರಿಯೊಬ್ಬರು ಕ್ರಿಕೆಟ್ ಬೆಟ್ಟಿಂಗ್ ಕುರಿತು ಮೇಲ್ವಿಚಾರಣೆ ಮಾಡುತ್ತಾರೆ. ಸಿಸಿಬಿಯ ಇನ್ಸ್‌ಪೆಕ್ಟರ್ ಕ್ರಿಕೆಟ್ ಬೆಟ್ಟಿಂಗ್ ಮೇಲೆ ನಿಗಾ ಇಟ್ಟು ಜೂಜುಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಇನ್‌ಸ್ಪೆಕ್ಟರ್‌ ರಮೇಶ್ ಕಾಂಬ್ಳೆ ಅವರು ಹುಬ್ಬಳ್ಳಿ-ಧಾರವಾಡದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮೇಲೆ ಹಲವು ಪೊಲೀಸ್ ಠಾಣೆಗಳ ಸಿಬ್ಬಂದಿಯೊಂದಿಗೆ ವಿಶೇಷ ಪೊಲೀಸ್ ತಂಡ ರಚಿಸಿ ಮೇಲ್ವಿಚಾರಣೆ ನಡೆಸಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಜಿಲ್ಲಾಧಿಕಾರಿ ಮನೆ ಮುಂದಿನ ವಿದ್ಯುತ್ ಕಂಬಕ್ಕೆ ಹಾಲಿನ ವಾಹನ ಡಿಕ್ಕಿ

“ಕ್ರಿಕೆಟ್ ಬೆಟ್ಟಿಂಗ್ ಬಗ್ಗೆ ವಿಶೇಷ ಜಾಗರೂಕತೆಯ ಅಗತ್ಯ ಕಂಡುಕೊಂಡ ಪೊಲೀಸ್ ಆಯುಕ್ತರು ಎಚ್-ಡಿ ಪೊಲೀಸ್ ಕಮಿಷನರೇಟ್‌ನ ಸಿಸಿಬಿ ವಿಭಾಗಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ನೇಮಿಸಿದ್ದಾರೆ” ಎಂದು ಹೇಳಿದ್ದಾರೆ.

“ಹುಬ್ಬಳ್ಳಿ-ಧಾರವಾಡದ ಬಹುತೇಕ ಕುಟುಂಬಗಳು ತಮ್ಮ ಕುಟುಂಬ ಸದಸ್ಯರ ಕ್ರಿಕೆಟ್ ಬೆಟ್ಟಿಂಗ್ ಅಭ್ಯಾಸದಿಂದ ಈ ಹಿಂದೆ ಹಲವಾರು ಸಮಸ್ಯೆಗಳನ್ನು ಎದುರಿಸಿವೆ. ಕ್ರಿಕೆಟ್ ಬೆಟ್ಟಿಂಗ್ ಮೇಲೆ ನಿಗಾ ಇಡಲು ಪೊಲೀಸ್ ಇನ್ಸ್‌ಪೆಕ್ಟರ್ ನಿಯೋಜಿಸುವುದು ಪೊಲೀಸ್ ಆಯುಕ್ತರ ಉತ್ತಮ ಯೋಜನೆಯಾಗಿದೆ” ಎಂದು ಸಾಮಾಜಿಕ ಕಾರ್ಯಕರ್ತ ರಮೇಶ್ ಎಸ್ ಶ್ಲಾಘಿಸಿದ್ದಾರೆ.

“ಅವಳಿ ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕಾನೂನಿನ ಭಯ ಹುಟ್ಟಿಸುವ ಅಗತ್ಯವಿದೆ. ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...