ಹುಬ್ಬಳ್ಳಿ | ಕಿಮ್ಸ್‌ ನಿರ್ದೇಶಕ ಸ್ಥಾನಕ್ಕೆ ಪೈಪೋಟಿ

Date:

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಅಧಿಕಾರಾವಧಿ ಇನ್ನು 6 ತಿಂಗಳಲ್ಲಿ ಮುಗಿಯಲಿದೆ. ಆದರೆ, ಈಗಾಗಲೇ ಆ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.

ವೈದ್ಯಕೀಯ ಅಧೀಕ್ಷಕ ಡಾ. ಸಿ ಅರುಣಕುಮಾರ್‌, ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಈಶ್ವರ ಹೊಸಮನಿ, ಕ್ಷಕಿರಣ ವಿಭಾಗದ ಮುಖ್ಯಸ್ಥ ಜಿ ಸಿ ಪಾಟೀಲ, ಉಪ ವೈದ್ಯಕೀಯ ಅಧಿಕ್ಷಕ ಡಾ. ರಾಜಶೇಖರ ದ್ಯಾಬೇರಿ ಮತ್ತು ಜೀವ ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಎಂ ಸಿ ಚಂದ್ರು ನಿರ್ದೇಶಕ ಸ್ಥಾನಕ್ಕೆ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.

2019ರ ನವೆಂಬರ್‌ನಲ್ಲಿ ನಿರ್ದೇಶಕರ ಹದ್ದೆಗೆ ಆಯ್ಕೆ ಬಯಸಿ ಒಟ್ಟು 14 ವೈದ್ಯರು ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ಪರಿಶೀಲಿಸಿದ ಆಯ್ಕೆ ಸಮಿತಿಯು ಐವರನ್ನು ಸಂದರ್ಶನಕ್ಕೆ ಆಹ್ವಾನಿಸಿತು. ಪ್ರಭಾರಿ ನಿರ್ದೇಶಕರಾಗಿದ್ದ ಡಾ. ರಾಮಲಿಂಗಪ್ಪ ಅಂಟರತಾನಿ, ಶರೀರಶಾಸ್ತ್ರ ವಿಭಾಗದ ಮುಖ್ಯಸ್ಥ ಕೆ.ಎಫ್‌. ಕಮ್ಮಾರ, ಜೀವ ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಎಂ ಸಿ ಚಂದ್ರು ಮತ್ತು ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಪಿ ಕೆ ವಾರಿ ಸಂದರ್ಶನಕ್ಕೆ ಹಾಜರಾಗಿದ್ದರು. ಔಷಧ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದತ್ತಾತ್ರೇಯ ಎ ಎನ್‌  ಅವರು ಗೈರಾಗಿದ್ದರು. ಈ ವೇಳೆ ಡಾ. ರಾಮಲಿಂಗಪ್ಪ ಅಂಟರತಾನಿ ಅವರು ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಮುಂದಿನ 6 ತಿಂಗಳಲ್ಲಿ ಇವರ ಹುದ್ದೆ ಮುಗಿಯಲಿದ್ದು, ಆಸ್ಥಾನಕ್ಕೆ ಪೈಪೋಟಿಗಳು ನಡೆಯುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿಮ್ಸ್‌ ನಿರ್ದೇಶಕರ ಆಯ್ಕೆ ಪ್ರಕ್ರಿಯೆ

ಕಿಮ್ಸ್‌ನ ಆಡಳಿತಾತ್ಮಕ ಹುದ್ದೆಯಲ್ಲಿ ಹಾಗೂ ಹಲವು ವಿಭಾಗಗಳಲ್ಲಿ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿರುವ 50 ವರ್ಷ ಮೇಲ್ಪಟ್ಟವರು ನಿರ್ದೇಶಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ನಿರ್ದೇಶಕರ ಆಯ್ಕೆ ಸಮಿತಿಯಲ್ಲಿ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಸಚಿವರೇ ಮುಖ್ಯಸ್ಥರಾಗಿದ್ದು, ಅವರ ಸಮ್ಮುಖದಲ್ಲೇ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅದಕ್ಕೂ ಮುನ್ನ ಅರ್ಜಿಗಳನ್ನು ಪರಿಶೀಲಿಸಲು ಸರ್ಕಾರವು ಉನ್ನತ ಮಟ್ಟದ ಆಯ್ಕೆ ಸಮಿತಿ ರಚಿಸುತ್ತದೆ. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ, ಅರ್ಹವಾಗಿರುವುದನ್ನು ಅಂತಿಮಗೊಳಿಸಿ ಸಮಿತಿಯು ಸರ್ಕಾರದ ಮುಖ್ಯಕಾರ್ಯದರ್ಶಿಗೆ ವರದಿ ಸಲ್ಲಿಸುತ್ತದೆ. ಅದನ್ನು ಆಧರಿಸಿ ವೈದ್ಯಕೀಯ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಮುಖ್ಯ ಕಾರ್ಯದರ್ಶಿ ಒಳಗೊಂಡ ತಂಡ ನಿರ್ದೇಶಕರ ಸಂದರ್ಶನ ನಡೆಸುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | 92 ಕೆ.ಜಿ ಗಾಂಜಾ, ಕಾರು ವಶ; ಆರೋಪಿಗಳು ಪರಾರಿ

“ಕಿಮ್ಸ್‌ ನಿರ್ದೇಶಕರ ಹುದ್ದೆ ಆಯ್ಕೆ ಪ್ರಕ್ರಿಯೆ ಅಕ್ಟೋಬರ್‌ ನವೆಂಬರ್‌ ತಿಂಗಳಲ್ಲಿ ನಡೆಯಲಿದೆ. ಕೆಲ ಆಕಾಂಕ್ಷಿಗಳು ರಾಜಕೀಯ ಮುಖಂಡರು ಮತ್ತು ಸಚಿವರ ಮೂಲಕ ಒತ್ತಡ ತರುತ್ತಿದ್ದಾರೆ. ಇನ್ನೂ ಕೆಲವರು ಸೇವಾ ಹಿರಿತನ ಹಾಗೂ ಅರ್ಹತೆ ಆಧಾರದಲ್ಲಿ ಹುದ್ದೆ ಆಕಾಂಕ್ಷಿಗಳಾಗಿದ್ದಾರೆ” ಎಂದು ಕಿಮ್ಸ್‌ನ ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...