ಹುಬ್ಬಳ್ಳಿ | ಮಾನವ ಹಕ್ಕುಗಳು ಹುಟ್ಟಿನಿಂದಲೇ ಬರುತ್ತವೆ: ಸುರೇಶ್ ಒಂಟಿಗೋಡಿ

Date:

ಜಿ ಕೆ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ವತಿಯಿಂದ ರುದ್ರಾಕ್ಷಿ ಮಠ ದತ್ತಿ, ಡಾ. ಬಿ ವಿ ಶಿರೂರು ದತ್ತಿ, ಲಿಂ.‌ ಪಾರ್ವತವ್ವ ಶಿವಬಸಪ್ಪ ಕೌಜಲಗಿ ಸ್ಮರಣಾರ್ಥ ದತ್ತಿ ಹಾಗೂ ಹಠಯೋಗಿ ಸಿದ್ದಪ್ಪಜ್ಜ ದತ್ತಿ ಉಪನ್ಯಾಸ ಏರ್ಪಡಿಸಿದ್ದರು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುರೇಶ್ ವಂಟಿಗೋಡಿ ಮಾತನಾಡಿ, ನಮ್ಮ ಸಂವಿಧಾನವು ಮಾನವ ಹಕ್ಕುಗಳನ್ನು ಹುಟ್ಟಿನಿಂದಲೇ ಬರುವಂತೆ ಅಧಿಕೃತಗೊಳಿಸಿದೆ. ಎರಡನೇ ಜಾಗತಿಕ ಮಹಾಯುದ್ಧದ ಸಾವು, ನೋವು, ಹಾನಿ ಗಮನಿಸಿದ ವಿಶ್ವದ ರಾಷ್ಟ್ರಗಳು ಒಂದುಗೂಡಿ ಮಾನವನ ಜೀವನ ಸಂರಕ್ಷಣೆ ಉದ್ದೇಶದಿಂದ 1994 ರಲ್ಲಿ ಒಪ್ಪಂದ ಮಾಡಿಕೊಂಡಿವೆ. ಹುಟ್ಟುವ ಪ್ರತಿಯೊಬ್ಬ ವ್ಯಕ್ತಿಗೆ ಬದುಕುವ ಹಕ್ಕು, ಸ್ವಾತಂತ್ರ್ಯದ ಹಕ್ಕು, ಗೌರವದ ಹಕ್ಕು ಮೊದಲಾದ ಹಕ್ಕುಗಳಿಗೆ ಚ್ಯುತಿ ಬಾರದಂತೆ ಕಾಪಾಡಿಕೊಂಡು ಹೋಗಲು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗ ರಚನೆ ಆಗಿದೆ. ಸರ್ಕಾರಿ ನೌಕರರು ಅಧಿಕಾರಿಗಳು ನಾಗರಿಕರ ಹಕ್ಕುಗಳ ಉಲ್ಲಂಘನೆ ಮಾಡಿದರೆ ಮಾನವ ಹಕ್ಕುಗಳ ಆಯೋಗ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಆದೇಶಿಸುತ್ತದೆ ಎಂದು ತಿಳಿಸಿದರು.

ಜಾನಪದ ಜಾಣೆ ಲಕ್ಷ್ಮೀ ಆರಿಬೆಂಚಿ ಮಾತನಾಡಿ, ಮಾನವ ಹಕ್ಕುಗಳ ಕುರಿತು ಜನಪದ ಸಾಹಿತ್ಯದಲ್ಲಿ ಬಂದಿರುವುದನ್ನು ಹಾಡುವುದರ ಮೂಲಕ ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಹಿರಿಯ ನ್ಯಾಯವಾದಿ ಸಿ ಆರ್ ಪಾಟೀಲ್ ಮಾನವ ಹಕ್ಕುಗಳ ಆಯೋಗವು ವಕೀಲರಿಗೆ ಮತ್ತು ಕಾನೂನು ವಿಧ್ಯಾರ್ಥಿಗಳಿಗೆ ತರಬೇತಿ ಶಿಬಿರಗಳನ್ನು ಆಗಾಗ ಏರ್ಪಡಿಸಬೇಕು ಎಂದು ಮನವಿ ಮಾಡಿದರು. ಪ್ರೊ. ಕೆ ಎಸ್ ಕೌಜಲಗಿ ಸ್ವಾಗತಿಸಿದರು. ಡಾ. ಲಿಂಗರಾಜ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದತ್ತಿ ದಾನಿಗಳಾದ ಡಾ. ಬಿ ವಿ ಶಿರೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.‌ ದತ್ತಿ ದಾನಿಗಳ ಪರವಾಗಿ ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮಿಗಳು ಮಾತನಾಡಿದರು. ಈ ವೇಳೆ ಪ್ರಾಚಾರ್ಯ ಡಾ. ಡಿ ಬಿ ಚೌರಿ, ಡಾ ‌ ಶಾರದಾ ಪಾಟೀಲ, ಸಿ ಬಿ ಮರಿಗೌಡರ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಸಿದ್ದಮ್ಮ ಅಡವೆನ್ನವರ, ಅನಸುಯಾ ಪಾಟೀಲ, ಪ್ರೊ. ಸೌಂದರ್ಯ ಜೋಶಿ ಉಪಸ್ಥಿತರಿದ್ದರು.‌ ಕಸಾಪ ತಾಲೂಕು ಅಧ್ಯಕ್ಷೆ ವಿದ್ಯಾ ವಂಟಮುರಿ ವಂದಿಸಿದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...