ಹುಬ್ಬಳ್ಳಿ | ಬಿಸಿಲಿನ ಝಳಕ್ಕೆ ತಂಪೆರೆದ ಮಳೆ

Date:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಹುಬ್ಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ಬೇಸತ್ತಿದ್ದ ಜನತೆಗೆ ತಂಪಿನ ವಾತಾವರಣದ ಅನುಭವ ನೀಡಿದೆ.

ಹುಬ್ಬಳ್ಳಿ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಮಿಂಚಿನ ಸಹಿತ ಉತ್ತಮ ಮಳೆಯಾಗಿದೆ. ಸೋಮವಾರ ಸಂಜೆಯೂ ಒಂದಿಷ್ಟು ಮಳೆಯಾಗಿ ಇಳೆ ತಂಪಾಗಿತ್ತು. ಚಂಡಮಾರುತದ ಪರಿಣಾಮದಿಂದ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ಹೊಕ್ಕಿದೆ. ಗ್ರಾಮೀಣ ಭಾಗದಲ್ಲಿ ಉಳುಮೆಗೆ ಅನುಕೂಲವನ್ನೂ ಮಾಡಿಕೊಟ್ಟಿದೆ.

“ಜೂನ್ ಮೊದಲ ವಾರ ಮುಂಗಾರು ಆರಂಭವಾಗುವ ಹಿನ್ನಲೆಯಲ್ಲಿ ಭೂಮಿ ಹದಗೊಳಿಸಲು ಮಳೆಯ ಅವಶ್ಯಕತೆ ಇತ್ತು. ಈಗ ಸುರಿದ ಮಳೆಯಿಂದಾಗಿ ರೈತರು ಮುಂಗಾರು ಬಿತ್ತನೆಯ ತಯಾರಿಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಭಾರೀ ಮಳೆ
ರಸ್ತೆ ದಾಟಲು ಪರದಾಡುತ್ತಿರುವ ವಾಹನ ಸವಾರರು

ಅಲ್ಲಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿವೆ. ಈಗ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ನೀರು ಸಂಪೂರ್ಣ ರಸ್ತೆಯನ್ನು ಆವರಿಸಿದೆ. ಇದರಿಂದ ಜನರ ಓಡಾಟಕ್ಕೂ ತೊಂದರೆಯಾಗಿದೆ. ಯಾವುದು ರಸ್ತೆ, ಯಾವುದು ಗುಂಡಿ ಎಂಬುದು ತಿಳಿಯದೆ ದ್ವಿಚಕ್ರ ವಾಹನ ಸವಾರರು ರಸ್ತೆ ದಾಟಲು ಪರದಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ಹುಬ್ಬಳ್ಳಿ ನಗರದಲ್ಲಿ ಮಳೆ ನೀರು ಚರಂಡಿಯಲ್ಲಿ ಸರಾಗವಾಗಿ ಹರಿಯದ ಪರಿಣಾಮ ರಸ್ತೆ ಮೇಲೆಯೇ ನೀರು ಹರಿಯುತ್ತಿದ್ದು, ಹಲವಾರು ಬೈಕ್‌ಗಳು ಮಳೆ ನೀರಿನಿಂದ ಆವೃತವಾಗಿವೆ. ಇನ್ನು ಮಾರುಕಟ್ಟೆ ಪ್ರದೇಶದಲ್ಲಿನ ಪರಿಸ್ಥಿತಿಯಂತೂ ಹೇಳತೀರದು. ಮಳೆಯಾಗುವ ಸೂಚನೆ ಇದ್ದರೂ ನಿರೀಕ್ಷೆಗೆ ಮೀರಿ ಮಳೆಯಾಗಿದೆ.

ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿ ಚುನಾವಣಾ ಮಸ್ಟರಿಂಗ್ ಕೇಂದ್ರವಿದ್ದು, ಮಳೆಯಿಂದಾಗಿ ಮಸ್ಟರಿಂಗ್ ಕಾರ್ಯವು ಅಸ್ತವ್ಯಸ್ತವಾಗಿದೆ. ಊಟದ ಸಮಯಕ್ಕೆ ಮಳೆ ಸುರಿದ ಪರಿಣಾಮ ಇಡೀ ಶಾಮಿಯಾನ ಸೋರಲಾರಂಭಿಸಿದೆ. ಇನ್ನು ಮತಯಂತ್ರ ಸೇರಿದಂತೆ ಇತರೆ ಸಾಮಾಗ್ರಿಗಳನ್ನು ತೆಗೆದುಕೊಂಡು ವಾಹನದ ಬಳಿ ಹೋಗಲಾರದಂತಹ ಸ್ಥಿತಿ ನಿರ್ಮಾಣವಾಗಿದ್ದು, ಚುನಾವಣಾ ಸಿಬ್ಬಂದಿ ಪರದಾಡುವಂತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...