ಹುಬ್ಬಳ್ಳಿ | ಅವಳಿ ನಗರಗಳಿಗೆ ನಿರಂತರ ನೀರು ಪೂರೈಕೆ ಸ್ಥಗಿತ

Date:

  • ನೀರು ಪೂರೈಕೆಗೆ ಪೈಪ್‌ಲೈನ್ ದುರಸ್ತಿ ಕಾರಣ ಉಲ್ಲೇಖ
  • ನೀರು ಪೂರೈಕೆ ಮಾಡುವ ಹೊಸ ಸಿಬ್ಬಂದಿಗೆ ತರಬೇತಿ ಕೊರತೆ

ಹುಬ್ಬಳ್ಳಿ ನಗರದಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಜನವರಿಯಲ್ಲಿ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸುವ್ಯವಸ್ಥಿತಗೊಳಿಸಲಾಗಿತ್ತು. ಆದರೆ, ಇದೀಗ ಮತ್ತೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಲಕ್ಷಣಗಳಿವೆ.

ಪೈಪ್‌ಲೈನ್ ದುರಸ್ತಿ ಮತ್ತು ಇತರ ತಾಂತ್ರಿಕ ಸಮಸ್ಯೆಗಳಂತಹ ಕಾರಣಗಳನ್ನು ಹೇಳಿ ನೀರು ಪೂರೈಕೆ ಸ್ಥಗಿತಗೊಳಿಸಿದ್ದಾರೆ. ಹಾಗಾಗಿ, ಸ್ಥಳೀಯ ನಿವಾಸಿಗಳು ಅಲ್ಲಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ನೀರಸಾಗರದವರೆಗೆ ನೀರಿನ ನಿರ್ವಹಣೆಗೆ ಯಾವುದೇ ತಾಂತ್ರಿಕ ಅಡಚಣೆ ಇಲ್ಲವೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ, ಇದು ಕರ್ತವ್ಯ ಲೋಪವಲ್ಲ. ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ ನಿರ್ವಹಣೆ ಮತ್ತು ತರಬೇತಿಯ ಕೊರತೆಯಿಂದ ನೀರು ಪೂರೈಕೆ ನಿರ್ವಹಣೆಯಲ್ಲಿ ವ್ಯತ್ಯಯವಾಗಿದೆ” ಎಂದು ಹುಬ್ಬಳ್ಳಿಯ ರಾಜಧಾನಿ ಕಾಲೋನಿಯ ತೆರಿಗೆ ಸಲಹೆಗಾರ ಎನ್.ಬಿ.ಬೆಳ್ಳಿಗಟ್ಟಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“4-5 ಪೈಪ್‌ಲೈನ್‌ಗಳಲ್ಲಿ 10-12 ಗಂಟೆಗಳ ಕಾಲ ನೀರು ಸರಬರಾಜು ಮಾಡುತ್ತಿದ್ದಾರೆ. ಒಂದೇ ಸಾಲಿನಲ್ಲಿ 3-4 ಗಂಟೆಗಳ ಕಾಲ ನೀರು ಸರಬರಾಜು ಮಾಡಿದರೆ, ನೀರಿನ ಒತ್ತಡ ಕಡಿಮೆಯಾಗುತ್ತದೆ. ಜೊತೆಗೆ, ನೀರು ಸರಬರಾಜು ಸುಗಮವಾಗಿರುತ್ತದೆ. ಹೊಸ ಸಿಬ್ಬಂದಿಗೆ ತರಬೇತಿ ಇಲ್ಲದ ಕಾರಣ, ಅವರು ಸಮರ್ಪಕ ಸರಬರಾಜು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

“ಅವಳಿ ನಗರ ಹುಬ್ಬಳ್ಳಿಯಲ್ಲಿ ವಾರದ 24 ಗಂಟೆಯೂ ನೀರು ಪೂರೈಕೆಯಾಗುವ ವಾರ್ಡ್‌ಗಳಿಗೆ 3ರಿಂದ 4 ದಿನಗಳಿಗೊಮ್ಮೆ ನೀರು ಸಿಗುತ್ತಿದ್ದರೆ, ಉಳಿದ ವಾರ್ಡ್‌ಗಳಿಗೆ 5 ದಿನಗಳ ಬದಲು 6-9 ದಿನಗಳಿಗೊಮ್ಮೆ ನೀರು ದೊರೆಯುತ್ತಿದೆ. ನಾಗರಿಕರು ಪ್ರತಿಭಟಿಸಿದಲ್ಲೆಲ್ಲಾ ಅವರು ಟ್ಯಾಂಕರ್‌ಗಳನ್ನು ಕಳುಹಿಸುತ್ತಿದ್ದಾರೆ. ನಿಗದಿತ ಸಮಯಕ್ಕೆ ನೀರು ಪೂರೈಕೆಯಾಗದಿದ್ದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಬೇಕು” ಎಂದು ಬೆಳ್ಳಿಗಟ್ಟಿ ಒತ್ತಾಯಿಸಿದ್ದಾರೆ.

“ನೀರು ಪೂರೈಕೆಯ ದಿನಚರಿ ಕೆಟ್ಟ ಸ್ಥಿತಿಯಲ್ಲಿದೆ. ಮಧ್ಯಮ ವರ್ಗದ ಕುಟುಂಬಗಳು ತಮ್ಮ ದೈನಂದಿನ ಕೆಲಸಗಳನ್ನು ಬಿಟ್ಟು ಹಗಲು ರಾತ್ರಿ ನೀರಿಗಾಗಿ ಕಾಯುತ್ತಿದ್ದಾರೆ. ಮತ್ತೊಂದೆಡೆ, ಅಧಿಕಾರಿಗಳು 3-4 ತಿಂಗಳಿಗೊಮ್ಮೆ ಬಿಲ್‌ಗಳನ್ನು ನೀಡುತ್ತಿದ್ದಾರೆ. ಕೆಲಸಕ್ಕೆ ಹೊಸ ಸಿಬ್ಬಂದಿಯನ್ನು ನಿಯೋಜಿಸುವ ಮೊದಲು ಅವರು ಮೂಲಭೂತ ಜ್ಞಾನವನ್ನು ಪಡೆದಿರುವಂತೆ ನೋಡಿಕೊಳ್ಳಬೇಕು” ಎಂದು ಸ್ಥಳೀಯ ನಿವಾಸಿ ಡಾ. ಎಂ ಸಿ ಸಿಂಧೂರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | 15 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ: ಮಧ್ಯ ರಾತ್ರಿ ಮಹಿಳೆಯರಿಂದ ರಸ್ತೆ ತಡೆ ಪ್ರತಿಭಟನೆ

“ನಗರದಲ್ಲಿ ನೀರು ಸರಬರಾಜಿನ ಬಗ್ಗೆ ಬಹುತೇಕ ಸದಸ್ಯರು ನಿರಾಸೆ ವ್ಯಕ್ತಪಡಿಸಿದ್ದಾರೆ. ನಮ್ಮ ಸೂಚನೆಯಂತೆ ನೀರು ಸರಬರಾಜು ನಿರ್ವಹಣೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಅಧೀಕ್ಷಕ ಎಂಜಿನಿಯರ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ” ಎಂದು ಮೇಯರ್ ಈರೇಶ್ ಅಂಚಟಗೇರಿ ತಿಳಿಸಿದ್ದಾರೆ.

“ನೀರು ಪೂರೈಕೆ ಜವಾಬ್ದಾರಿಯನ್ನು ಎಲ್ ಅಂಡ್ ಟಿ ಕಂಪೆನಿಗೆ ವಹಿಸಿದ್ದರೂ ಕೂಡ ಒಟ್ಟಾರೆ ಮೇಲ್ವಿಚಾರಣೆಯನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ವಹಿಸಲಾಗಿದೆ. ಹಾಗಾಗಿ ಅಧಿಕಾರಿಗಳು ಸುಗಮ ಮತ್ತು ನಿಯಮಿತ ನೀರು ಸರಬರಾಜನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...