ಹುಬ್ಬಳ್ಳಿ | ಈದಿನ ವರದಿಗೆ ಎಚ್ಚೆತ್ತು ಪೌರಕಾರ್ಮಿಕರ ಬೇಡಿಕೆಗಳ ಈಡೇರಿಸಿದ ಮಹಾನಗರ ಪಾಲಿಕೆ

Date:

ಹುಬ್ಬಳ್ಳಿ ಧಾರವಾಡ ಪೌರಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಡೆಸಿದ ಆಮರಣ ಉಪವಾಸ ಸತ್ಯಾಗ್ರಹ ಹೋರಾಟಕ್ಕೆ ಇಂದು ಪೂರ್ಣವಿರಾಮ‌ ಇರಿಸಿದ್ದಾರೆ. ಹೋರಾಟ ಯಶಸ್ವಿಯಾದ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಪರಸ್ಪರ ಬಣ್ಣ ಹಚ್ಚಿ, ಸಿಹಿ ಹಂಚಿ, ಮೆರವಣಿಗೆಯ ಮೂಲಕ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಕಳೆದ 28 ದಿನಗಳಿಂದ ಹುಬ್ಬಳ್ಳಿ ಮಹಾನಗರ ಪಾಲಿಕೆ ಎದುರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪೌರಕಾರ್ಮಿಕರು ಆಮರಣ ಉಪವಾಸ ಸತ್ಯಾಗ್ರಹ ಹೋರಾಟ ನಡೆಸಿದ್ದರು. ಈ ಕುರಿತು ಈದಿನ.ಕಾಮ್ ವರದಿಯನ್ನು ಮಾಡಿತ್ತು. ವಿಡಿಯೋ ಸುದ್ದಿ ಪ್ರಕಟಿಸಿತ್ತು. ಪೌರಕಾರ್ಮಿಕರ ನಿರಂತರ ಹೋರಾಟ ಮತ್ತು ಈದಿನ ವರದಿಗೆ ಎಚ್ಚೆತ್ತ ಪಾಲಿಕೆ ಅಡಳಿತವು ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿ, ಮಹಾಪೌರರು ವತಿಯಿಂದ ನೇರ ನೇಮಕಾತಿ ಆದೇಶ ಪತ್ರಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಹಾಪೌರರಾದ ರಾಮಣ್ಣ ಬಡಿಗೇರ ಮಾತನಾಡಿ, 2-3 ದಿನಗಳಲ್ಲಿ 252 ಪೌರಕಾರ್ಮಿಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು. ಅಲ್ಲದೇ 799 ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸುವಂತೆ 1 ತಿಂಗಳಿನಲ್ಲಿ ಅನುಮೋದನೆ ಪಡೆದು ನೇರ ವೇತನ ಪಾವತಿಸುವಂತೆ ಕ್ರಮ ಜರುಗಿಸಲಾಗುವುದು ಎಂದರು. ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘಕ್ಕೆ ಕೊಠಡಿ ನೀಡಿದರು. 5 ತಿಂಗಳಿನ ಸಂಕಷ್ಟ ಬತ್ತೆ ಒಟ್ಟು ರೂ 10,000/- ಪೌರಕಾರ್ಮಿಕರಿಗೆ ಪಾವತಿಸಿದರು. 868 ಮಹಿಳಾ ಪೌರಕಾರ್ಮಿಕರಿಗೆ ರೂ 2500/-ರಂತೆ ಒಟ್ಟು ರೂ 21.70 ಲಕ್ಷ ಮೆಡಿಕಲ್ ಬೋನಸ್ ಹಣ ಪಾವತಿಸುವ ಬಗ್ಗೆ, ಇನ್ನುಳಿದ ಬೇಡಿಕೆಗಳ ಬಗ್ಗೆ ಜಂಟಿ ಸಭೆಯನ್ನು ನಡೆಸಿ ಲಿಖಿತ ನಡಾವಳಿ ಮೂಲಕ ನಿಗದಿತ ಸಮಯದಲ್ಲಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಮಹಾಪೌರರಾದ ರಾಮಣ್ಣ ಬಡಿಗೇರ, ಉಪ ಮಹಾಪೌರರಾದ ದುರಗಮ್ಮ ಬಿಜವಾಡ, ಸಭಾ ನಾಯಕ ವೀರಣ್ಣ ಸವಡಿ, ರಾಜಣ್ಣ ಕೊರವಿ ಉಪಸ್ಥಿತರಿದ್ದರು. ಪೌರಕಾರ್ಮಿಕರ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ಡಾ. ವಿಜಯ ಗುಂಟ್ರಾಳ, ಬಸಪ್ಪ ಮಾದರ, ಆನಂದ ಬೆನಸಮಟ್ಟಿ, ಗುರುಶಾಂತಪ್ಪ ಚಂದಾಪುರ, ಮರಿಯಪ್ಪ ರಾಮಯ್ಯನವರ, ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ದತಪ್ಪ ಆಪುಸಪೇಟ್, ಲಕ್ಷ್ಮೀ ಬೆಳ್ಳಾರಿ, ಅನಿತಾ ಈನಗೊಂಡ, ಲಕ್ಷ್ಮೀ ವಾಲಿ, ಮಂಜುಳಾ ವಜ್ಜಣ್ಣವರ, ಶಾಂತವ್ವ ಮಾದರ, ಪಾರವ್ವ ಹೊಸಮನಿ, ರೇಣುಕಾ ನಾಗರಾಳ, ಫಕೀರವ್ವ ಕಡಕೋಳ, ರೇಣುಕಾ ಸಾಂಬ್ರಾಣಿ, ಕನಕಪ್ಪ ಕೋಟಬಾಗಿ, ಭಾಗ್ಯಲಕ್ಷ್ಮೀ ಮಾದರ, ಅನ್ನಪೂರ್ಣ ಕೋಟಬಾಗಿ, ಸುನೀಲ್ ದೊಡ್ಡಮನಿ, ನಾಗೇಶ ಚುರಮುರಿ, ಪರಶುರಾಮ ಶಿಕ್ಕಲಗಾರ, ಗಾಳೆಪ್ಪ ರಣತುರ, ಲಕ್ಷ್ಮೀ ತೂರಿಹಾಲ್, ಕಸ್ತೂರಿ ತಮದಡ್ಡಿ, ಹುಲಿಗೆಮ್ಮ ಚಿಕ್ಕತುoಬಳ, ಯಲಪ್ಪ ಪಾಳೇದ, ಸಣ್ಣ ವೆಂಕಟೇಶ ಪಾಲವಾಯಿ ಮುಂತಾದ ಪೌರಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...