ಹುಬ್ಬಳ್ಳಿ | ಒಳಚರಂಡಿ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆ ಸೌಲಭ್ಯ ಒದಗಿಸಲು ಪೌರಕಾರ್ಮಿಕರ ಸಂಘದಿಂದ ಮನವಿ

Date:

ಕನಿಷ್ಠ ವೇತನ ಕಾಯ್ದೆ ಅನ್ವಯ ಮಾಸಿಕ ವೇತನ ಪಾವತಿ ಹಾಗೂ ಗುತ್ತಿಗೆ ಕಾರ್ಮಿಕ ಕಾಯ್ದೆ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಾಗೂ ಪೌರಕಾರ್ಮಿಕರ ಸಂಘದ ವತಿಯಿಂದ ಹುಬ್ಬಳ್ಳಿ-ಧಾರವಾಡ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೇರವೇತನ ಹಾಗೂ ಗುತ್ತಿಗೆ ಪೌರಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ 1948ರ ಅನ್ವಯ ಪ್ರತಿ ತಿಂಗಳು 7ನೇ ತಾರೀಖಿನ ಒಳಗಾಗಿ ಮಾಸಿಕ ವೇತನ ಕಡ್ಡಾಯವಾಗಿ ಪಾವತಿಸಬೇಕು. ಪಾಲಿಕೆ ಗುತ್ತಿಗೆ ಪೌರ ಕಾರ್ಮಿಕರಿಗೆ 3 ತಿಂಗಳಿಗೊಮ್ಮೆ ವೇತನ ಹಾಗೂ ನೇರವೇತನ ಪೌರಕಾರ್ಮಿಕರಿಗೆ 2 ತಿಂಗಳಿಗೊಮ್ಮೆ ವೇತನ ಪಾವತಿಸುವ ಮೂಲಕ ಶಾಸನಬದ್ಧ ಸೌಲಭ್ಯಗಳಿಂದ ಬಡ ದಲಿತ ಪೌರಕಾರ್ಮಿಕರಿಗೆ ಶೋಷಣೆ ಹಾಗೂ ವಂಚನೆ ಮಾಡಲಾಗುತ್ತಿದೆ ಎಂದು ಅರೋಪಿಸಿದರು.

ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಾಲಿಕೆಯ ಗುತ್ತಿಗೆ ಕರಾರಿನಂತೆ ಗುತ್ತಿಗೆದಾರರು ಪ್ರತಿ ತಿಂಗಳು ತಪ್ಪದೇ ನಿಗಧಿತ ಸಮಯಕ್ಕೆ ವೇತನ ಪಾವತಿಸಿ ಪಾಲಿಕೆಗೆ ದಾಖಲೆಗಳನ್ನು ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಪ್ರತಿ ತಿಂಗಳು 7ನೇ ತಿಂಗಳಿನ ಒಳಗಾಗಿ ಪೌರಕಾರ್ಮಿಕರ ಮಾಸಿಕ ವೇತನ, ಇಎಸ್ಐ, ಪಿಎಫ್. ಮೊತ್ತಗಳನ್ನು ಪಾವತಿಸಿದ ನಂತರ ಅವರು ಸಲ್ಲಿಸಿದ ಗುತ್ತಿಗೆ ಬಿಲ್‌ಗಳನ್ನು ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ಇಲಾಖೆಯಿಂದ ಗುತ್ತಿಗೆ ಲೈಸೆನ್ಸ್ ನೋಂದಣಿ ಮೂಲ ಮಾಲಿಕರಿಂದ ನೋಂದಣಿ ಪ್ರಮಾಣ ಪತ್ರ, ಗುತ್ತಿಗೆ ಕಾರ್ಮಿಕ ಕಲ್ಯಾಣ ಮತ್ತು ಆರೋಗ್ಯ ಸೌಲಭ್ಯಗಳ ಅನುಷ್ಠಾನ, ಕ್ಯಾಂಟೀನ್, ವಿಶ್ರಾಂತಿ ಕೊಠಡಿಗಳು, ನಾಮಫಲಕ ಪ್ರಕಟಣೆ, ಪ್ರಥಮ ಚಿಕಿತ್ಸೆ ಸೌಲಭ್ಯಗಳು ಒದಗಿಸುವುದು ನಡೆಯಬೇಕು. ಶಾಸನಬದ್ಧ ಕಾರ್ಮಿಕ ಕಾಯ್ದೆ ಸೌಲಭ್ಯಗಳನ್ನು ಪೌರಕಾರ್ಮಿಕರಿಗೆ ದೊರಕಿಸಿಕೊಡುವಲ್ಲಿ ನಿರ್ಲಕ್ಷ್ಯ ವಹಿಸುವ ಪಾಲಿಕೆ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕ: ಮೇಯರ್ ರಾಮಪ್ಪ ಬಡಿಗೇರ

ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ. ವಿಜಯ ಗುಂಟ್ರಾಳ, ಶರಣಪ್ಪ ಅಮರಾವತಿ, ಪ್ರಕಾಶ ಕಡಕೋಳ, ಸತೀಶ ಹೂಗಾರ, ಆನಂದ ಸವಣೂರ ದೇವಪ್ಪ ಮುದಿಘಾಟ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...